ಪರಿಷತ್ತಿನ ಕಾರ್ಯ ಇತಿಹಾಸದಲ್ಲಿ ಮಾನವೀಯತೆ ಮೆರೆಯುವ ಕೆಲಸ: ಹರ್ಷಾನಂದ ಗುತ್ತೇದಾರ

0
866

ಕಲಬುರಗಿ: ಬೇಸಿಗೆ ಬಂದಾಕ್ಷಣ ಜಲಕ್ಷಾಮ ಪ್ರತಿ ಊರಿನಲ್ಲಿ ಸಹಜ ಸಾಮಾನ್ಯವಾಗಿದೆ. ಮನುಷ್ಯರಿಗೆ ಕುಡಿಯುವ ನೀರು ದೊರಕುತ್ತಿಲ್ಲ. ಇನ್ನು ಪ್ರಾಣಿ ಪಕ್ಷಿಗಳ ಪರಿಸ್ಥಿತಿ ಹೇಳತೀರದು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾರ್ವಜನಿಕರಿಗೆ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಹಾಗೂ ಪಕ್ಷಿಗಳಿಗೆ ನೀರು, ಆಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಅರವಟ್ಟಿಗೆಗಳನ್ನು ಕಟ್ಟಿ ನೀರಿನ ವ್ಯವಸ್ಥೆ ಮಾಡುವ ಮೂಲಕ ಪರಿಷತ್ತಿನ ಇತಿಹಾಸದಲ್ಲಿ ಇದೊಂದು ಮಾನವೀಯತೆ ಮೆರೆಯುವ ಕಾರ್ಯ ಮಾಡಿದಂತಾಗಿದೆ.

ಸೇವೆಗೆ ಚಾಲನೆ ನೀಡಿದ ಜಿಪಂ ನ ಮಾಜಿ ಉಪಾಧ್ಯಕ್ಷ ಹರ್ಷಾನಂದ ಸುಭಾಷ ಗುತ್ತೇದಾರ ಮಾತನಾಡಿ, ಜಲ ಮೂಲಗಳ ರಕ್ಷಣೆ, ನೀರಿನ ಮಿತ ಬಳಕೆ, ನೀರು ಸಂಗ್ರಹ ಹಾಗೂ ಹಸರೀಕರಣದ ಬಗ್ಗೆ ನಾವೆಲ್ಲ ಜಾಗೃತರಾಗಬೇಕಾಗಿದೆ. ಜತೆಗೆ ಯುದ್ದೋಪಾದಿ ನೀರಿನ ಸಂರಕ್ಷಣೆ ಆಗಬೇಕಾಗಿದೆ. ಅವಶ್ಯಕತೆಗನುಗುಣವಾಗಿ ನೀರನ್ನು ಬಳಸುವ ಸಂಸ್ಕೃತಿ ರೂಢಿಸಿಕೊಲ್ಳಬೇಕಾಗಿದೆ ಎಂದರು.

Contact Your\'s Advertisement; 9902492681

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ನೀರು ಬಹಳ ಅತ್ಯಮೂಲ್ಯವಾಗಿದ್ದು, ಯಾವುದೇ ಕಾರಣಕ್ಕೂ ಅನಗತ್ಯವಾಗಿ ವ್ಯರ್ಥಗೊಳಿಸದೇ ಜೀವ ಜಲ ಉಳಿಸಿಕೊಂಡಾಗ ಸಕಲ ಜೀವಿಗಳು ಉಳಿಯಲು ಸಾಧ್ಯ. ಬೇಸಿಗೆ ಕಾಲದಲ್ಲಿ ಅರವಟ್ಟಿಗೆಗಳನ್ನು ಪರಿಷತ್ತಿನ ವತಿಯಿಂದ ಇದೇ ಮೊದಲ ಬಾರಿ ಆರಂಭಿಸಿದ್ದರಿಂದ ನಗರದ ಅನೇಕರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದರು.

ಚಿಂಚೋಳಿ ತಹಾಸೀಲ್ದಾರ್ ಅಂಜುಮ್ ತಬಸ್ಸುಮ್, ಉದ್ಯಮಿಗಳಾದ ನೀಲಕಂಠರಾವ ಮೂಲಗೆ, ಸುದರ್ಶನ್ ಜತ್ತನ್ ಮಾತನಾಡಿದರು. ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಶಿವರಾಜ ಎಸ್.ಅಂಡಗಿ, ಯಶವಂತರಾಯ ಅಷ್ಠಗಿ, ಶರಣರಾಜ್ ಛಪ್ಪರಬಂದಿ, ಶಕುಂತಲಾ ಪಾಟೀಲ ಜಾವಳಿ, ಕಲ್ಯಾಣಕುಮಾರ ಶೀಲವಂತ, ಧರ್ಮಣ್ಣ ಹೆಚ್.ಧನ್ನಿ, ರಾಜೇಂದ್ರ ಮಾಡಬೂಳ, ವಿನೋದ ಜೇನವೇರಿ, ರವೀಂದ್ರಕುಮಾರ ಭಂಟನಳ್ಳಿ, ಪ್ರಮುಖರಾದ ಶಿವಲೀಲಾ ತೆಗನೂರ, ಪ್ರಭುಲಿಂಗ ಮೂಲಗೆ, ಶಿವಶರಣಪ್ಪ ಪರಪ್ಪಗೋಳ, ವೆಂಕಟೇಶ , ವಿಶ್ವನಾಥ ಪಾಟೀಲ ಗೌನಳ್ಳಿ, ರಾಜಶೇಖರ ಪಾಟೀಲ ತೇಗಲತಿಪ್ಪಿ, ಶಿವರುದ್ರ ಗುಡ್ಡಾ, ಮಲ್ಲಿಕಾರ್ಜುನ ಇಬ್ರಾಹಿಂಪುರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬಿಸಿಲಿನಿಂದ ಬಳಲಿದವರಿಗೆ ತಣ್ಣನೆಯ ಮಡಿಕೆಯಲ್ಲಿ ತಣ್ಣೀರು ಕೊಡುವುದರೊಂದಿಗೆ ಅವರ ದಾಹವನ್ನು ತೀರಿಸುವ ಸಾಮಾಜಿಕ ಕಾರ್ಯಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೈಜೋಡಿಸಿರುವುದು ಉತ್ತಮ ಬೆಳವಣಿಗೆ. ಜಿಲ್ಲಾ ಕಸಾಪ ಕ್ಕೆ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಅವರು ಅಧ್ಯಕ್ಷರಾದ ನಂತರ ನಿತ್ಯ ನೂತನ ಕಾರ್ಯಕ್ರಮಗಳು ಹಮ್ಮಿಕೊಂಡು ಬರುತ್ತಿರುವುದು ವಿಶೇಷ ಮತ್ತು ವಿಶಿಷ್ಟವಾದುದು. – ಹರ್ಷಾನಂದ ಎಸ್.ಗುತ್ತೇದಾರ, ಜಿಪಂ ಮಾಜಿ ಉಪಾಧ್ಯಕ್ಷ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here