ಕಲಬುರಗಿ: ನಗರದ ಜಿಲ್ಲಾ ನ್ಯಾಯಾಲಯ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಭವನದಲ್ಲಿ ಜುಲೈ ೧೫ರಂದು ಮಧ್ಯಾಹ್ನ ೧ ಗಂಟೆಗೆ ಬಂಜಾರಾ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭ ಹಮ್ಮಿಕೊಂಡಿದೆ ಎಂದು ಬಂಜಾರಾ ಸರ್ಕಾರಿ, ಅರೆ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಸುರೇಶ್ ಜಾಧವ್ ಅವರು ಇಲ್ಲಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ಸಮಾಜದ ಚುನಾಯಿತ ಜನಪ್ರತಿನಿಧಿಗಳಿಗೆ ಹಾಗೂ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದವರಿಗೆ ಮತ್ತು ಬಡ್ತಿ ಹೊಂದಿದವರಿಗೆ ಮತ್ತು ಸೇವಾ ನಿವೃತ್ತಿಯಾದವರಿಗೂ ಸಹ ಸನ್ಮಾನಿಸಲಾಗುವುದು ಎಂದರು.
ಎಸ್ಎಸ್ಎಲ್ಸಿ, ಪಿಯುಸಿ ದ್ವಿತೀಯ ಹಾಗೂ ತಾಂತ್ರಿಕ ಪದವಿ ಸೇರಿ ಶೇಕಡಾ ೭೫ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಂಜಾರಾ ಸಮಾಜದ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಗುವುದು ಎಂದು ಹೇಳಿದ ಅವರು, ಸಂಘವು ಕಳೆದ ೨೯ ವರ್ಷಗಳಿಂದಲೂ ಪ್ರತಿಭಾ ಪುರಸ್ಕಾರವನ್ನು ಆಯೋಜಿಸುತ್ತ ಬಂದಿದೆ ಎಂದರು.
ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಆಗಸ್ಟ್ ೧೩ರೊಳಗಾಗಿ ಅಂಕಪಟ್ಟಿ ಹಾಗೂ ಪೂರ್ಣ ಮಾಹಿತಿಯನ್ನು ಸಂಘಕ್ಕೆ ಒದಗಿಸಬೇಕು. ಮಾಹಿತಿಗಾಗಿ ಮೊಬೈಲ್ ನಂಬರ್ ೯೮೮೬೦೭೩೮೪೯ಗೆ ಸಂಪರ್ಕಿಸಲು ಅವರು ಕೋರಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಪವಾರ್, ಪ್ರೇಮಸಿಂಗ್ ಚವ್ಹಾಣ್, ಹರಿಶ್ಚಂದ್ರ ರಾಠೋಡ್, ಬಾಬು ಎಂ. ಜಾಧವ್, ಡಾ. ಎನ್.ಎಸ್. ಜಾಧವ್ ಮುಂತಾದವರು ಉಪಸ್ಥಿತರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…