ಸುರಪುರ: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ಸುರಪುರ ಪೊಲೀಸ್ಗೆ ದೂರು ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಕಳೆದ ೬ನೇ ತಾರೀಖು ಬೆಂಗಳೂರಿನ ಜೆ.ಪಿ ನಗರದಲ್ಲಿ ಚಂದ್ರು ಎನ್ನುವವನು ಗಲಾಟೆಯಲ್ಲಿ ಸಾವಿಗೀಡಾಗಿದ್ದಾನೆ.ಆದರೆ ಅಲ್ಲಿ ಏನು ನಡೆದಿದೆ ಎನ್ನುವುದನ್ನು ತಿಳಿದುಕೊಳ್ಳದ ಗೃಹ ಸಚಿವರು ಚಂದ್ರು ಉರ್ದು ಮಾತನಾಡಲಿಲ್ಲ ಎನ್ನುವ ಕಾರಣಕ್ಕೆ ಹತ್ಯೆ ಮಾಡಿದ್ಧಾರೆ ಎಂದು ಸುಳ್ಳು ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಕದಡುವ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಸುರಪುರ ಎಪಿಎಮ್ಸಿ ಕಚೇರಿ ಮುಂದೆ ರೈತ ಸಂಘ ಪ್ರತಿಭಟನೆ
ಅಲ್ಲದೆ ಇದಕ್ಕೆ ಬೆಂಬಲಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಚಂದ್ರು ಹತ್ಯೆಯ ಕುರಿತು ಕನ್ನಡ ಮಾತನಾಡಿದ್ದಕ್ಕೆ ಒಬ್ಬ ದಲಿತ ಸಮುದಾಯದ ಯುವಕನನ್ನು ಕೊಲೆ ಮಾಡಲಾಗಿದೆ.ಇದಕ್ಕೆ ಕನ್ನಡ ಹೋರಾಟಗಾರರು ಮತ್ತು ಬುದ್ಧಿ ಜೀವಿಗಳು ಏನು ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ.ಆದ್ದರಿಂದ ಇವರಿಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಂತರ ಠಾಣಾ ಅಧಿಕಾರಿಗೆ ಬರೆದ ಮನವಿಯನ್ನು ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ ಮೂಲಿಮನಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಮೇಶ ದೊರೆ ಆಲ್ದಾಳ,ಭಂಡಾರೆಪ್ಪ ನಾಟೇಕಾರ್,ವೆಂಕಟೇಶ ಬೇಟೆಗಾರ,ಮಾರ್ಥಂಡಪ್ಪ ದೇವರಗೋನಾಲ,ಹಣಮಂತ್ರಾಯ ಮಕಾಶಿ ಸೇರಿದಂತೆ ಅನೇಕರಿದ್ದರು.
ಇದನ್ನೂ ಓದಿ: ಅಂಬೇಡ್ಕರ್ ಸೇನೆ ಕೆಕೆ ಪ್ರಧಾನ ಕಾರ್ಯದರ್ಶಿ ರಾಜು ಕಟ್ಟಿಮನಿ
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…