ಸುರಪುರ ಎಪಿಎಮ್‌ಸಿ ಕಚೇರಿ ಮುಂದೆ ರೈತ ಸಂಘ ಪ್ರತಿಭಟನೆ

ಸುರಪುರ: ಕಳೆದ ಅನೇಕ ವರ್ಷಗಳಿಂದ ಸರಿಯಾದ ಬೆಲೆ ಸಿಗದೆ ಹಾಗೂ ಅತಿವೃಷ್ಟಿ ಅನಾವೃಷ್ಟಿಯಿಂದ ಹೈರಾಣಾಗಿರುವ ರೈತರು ಈಗ ಬೆಳೆದಿರುವ ಅಲ್ಪಸ್ವಲ್ಪ ಬೆಳೆಗಳಿಗೆ ಬೆಂಬಲ ಬೆಲೆ ನೀಡದೆ ಖರಿದಿ ಕೇಂದ್ರ ಆರಂಭಿಸದಿದ್ದಲ್ಲಿ ಎಪಿಎಮ್‌ಸಿ ಗಂಜ್ ಗೇಟ್ ಬಂದ್ ಮಾಡಿ ಪ್ರತಿಭಟನೆ ನಬಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಬಾವಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕುಂಬಾರಪೇಟೆಯ ಎಪಿಎಮ್‌ಸಿ ಕಚೇರಿ ಮುಂದೆ ಸೋಮವಾರ ನಡೆದ ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿ,ರಾಜಕಾರಣಿಗಳು ಮತ್ತು ಅಧಿಕಾರಿಗಳು ಒಂದಾಗಿ ರೈತರನ್ನು ನಿರ್ನಾಮ ಮಾಡಲು ಹೊರಟಿದ್ದಾರೆ.ಆದರೆ ರೈತರು ಕಾರ್ಮಿಕರಿಗೆ ಬುದ್ಧಿ ಇಲ್ಲ ಚುನಾವಣೆಯಲ್ಲಿ ಮತ ಕೇಳಲು ಬಂದಾಗ ಅವರ ಬಣ್ಣದ ಮಾತುಗಳಿಗೆ ಮರಳಾಗಿ,ಅವರ ಆಸೆಯ ಮಾತುಗಳಿಂದ ಮತ ನೀಡಿ ಈಗ ಪರಿತಪಿಸುವಂತಾಗಿದೆ.ಇನ್ನಾದರು ಮತವನ್ನು ಮಾರಿಕೊಳ್ಳದೆ ರೈತರಿಗಾಗಿ ಕೆಲಸ ಮಾಡುವಂತವರಿಗೆ ಮತ ನೀಡುವಂತೆ ಆಕ್ರೋಶ ವ್ಯಕ್ತಪಡಿಸಿದರು.

ಸುರಪುರ ಎಪಿಎಮ್‌ಸಿ ಕಚೇರಿ ಮುಂದೆ ರೈತ ಸಂಘ ಪ್ರತಿಭಟನೆ

ನಂತರ ಚಿಂತಕ ಮಲ್ಲಯ್ಯ ಕಮತಗಿ ಮಾತನಾಡಿ,ಕೇಂದ್ರ ಸರಕಾರ ಬೆಂಬಲ ಬೆಲೆಯನ್ನು ಕಾನೂನಿನ ಅಡಿಯಲ್ಲಿ ತರಬೇಕು ಅಂದಾಗ ರೈತರಿಗೆ ಅನುಕೂಲವಾಗಲಿದೆ.ಅಲ್ಲದೆ ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ರದ್ದುಗೊಳಿಸಿದರು ರಾಜ್ಯ ಸರಕಾರ ರದ್ದುಗೊಳಿಸಿಲ್ಲ ಕೂಡಲೇ ರದ್ದುಗೊಳಿಸಬೇಕು ಎಂದರು.

ತಾಲೂಕು ಅಧ್ಯಕ್ಷ ಹಣಮಂತ್ರಾಯ ಮಡಿವಾಳ ಮಾತನಾಡಿ,ಇಲ್ಲಿಯ ಎಪಿಎಮ್‌ಸಿಯಲ್ಲಿ ನಕಲಿ ಪಟ್ಟಿ ನೀಡುವ ಮೂಲಕ ಸರಕಾರಕ್ಕೆ ವಂಚಿಸಲಾಗುತ್ತಿದೆ.ಆದ್ದರಿಂದ ರೈತರ ಬೆಳೆಗಳಿಗೆ ಉತ್ತಮ ಧಾರಣೆ ನೀಡಬೇಕು ಮತ್ತು ರೈತರಿಗೆ ಅಸಲಿ ಪಟ್ಟಿ ನೀಡಬೇಕು,ಮತ್ತು ಶೀಘ್ರವೆ ಖರಿದಿ ಕೇಂದ್ರ ಆರಂಭಿಸದಿದ್ದಲ್ಲಿ ಕಚೇರಿಗೆ ಬೀಗ ಹಾಕುವುದಾಗಿ ಎಚ್ಚರಿಸಿದರು.

ಪರಿಷತ್ತಿನ ಕಾರ್ಯ ಇತಿಹಾಸದಲ್ಲಿ ಮಾನವೀಯತೆ ಮೆರೆಯುವ ಕೆಲಸ: ಹರ್ಷಾನಂದ ಗುತ್ತೇದಾರ

ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಮಲ್ಲಯ್ಯ ದಂಡು ಹಾಗು ಎಪಿಎಮ್‌ಸಿ ಕಾರ್ಯದರ್ಶಿಗಳ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ರಾಘು ಕುಪಗಲ್,ನಾಗಪ್ಪ ಕುಪಗಲ್,ವೆಂಕಟೇಶ ಕುಪಗಲ್,ತಿಪ್ಪಣ್ಣ ಜಂಪಾ,ಶಿವನಗೌಡ ರುಕ್ಮಾಪುರ,ಯಂಕೋಬ ದೊರೆ,ಅವಿನಾಶ ಕೊಡೇಕಲ್,ತಿರುಪತಿ ಕುಪಗಲ್,ಮಾನಪ್ಪ ಕೊಂಬಿನ್,ಪ್ರಭು ದೊರೆ ಅರಳಳ್ಳಿ,ದೇವಪ್ಪ ಪೂಜಾರಿ,ಮರೆಪ್ಪ ನಗರಗುಂಡ,ಶರಣು ಮೇಟಿ,ರಂಗಯ್ಯ ಬೂದೂರು ಸೇರಿ ಅನೇಕರಿದ್ದರು.

emedialine

Recent Posts

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

46 mins ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

57 mins ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

60 mins ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

2 hours ago

ಪತ್ರಕರ್ತ ಸಿದ್ರಾಮ್ ನಾಡಗೇರಿ ಪುತ್ರಿ ಸ್ಪಂದನಾ ಎಸ್. ನಡಗೇರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…

3 hours ago

ಸೇವಾ ಮನೋಭಾವದ ಮನಸ್ಸು ಹೆಚ್ಚಾಗಲಿ: ಜ್ಯೋತಿ ಪಾಟೀಲ್

ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…

3 hours ago