ಬಿಸಿ ಬಿಸಿ ಸುದ್ದಿ

ದೇಶದಲ್ಲಿ ಹಿಂದು- ಮುಸ್ಲಿಂ ಸಮುದಾಯದವರು ಒಂದಾಗಿ ಸಹಬಾಳ್ವೆ ನಡೆಸಿ: ಸಾಧ್ವಿ ನಿರಂಜನ ಜ್ಯೋತಿ

ಶಹಾಬಾದ:ಹಿಂದು-ಮುಸ್ಲಿಂ ಭಾವೈಕ್ಯತೆಯ ತಾಣವಾಗಿರುವ ತೊನಸನಹಳ್ಳಿ ಗ್ರಾಮದಂತೆ ದೇಶದಲ್ಲಿ ಹಿಂದು- ಮುಸ್ಲಿಂ ಸಮುದಾಯದವರು ಒಂದಾಗಿ ಕೂಡಿಕೊಂಡು ಸಹಬಾಳ್ವೆ ನಡೆಸಬೇಕೆಂದು ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಹೇಳಿದರು.

ಅವರು ಸೋಮವಾರ ತೊನಸನಹಳ್ಳಿ(ಎಸ್) ಗ್ರಾಮದ ಶ್ರೀ ಮಲ್ಲಣಪ್ಪ ಮಹಾರಾಜರು,ಅಲ್ಲಮಪ್ರಭು ಹಾಗೂ ಶ್ರೀ ಸುಲ್ತಾನ ಅಹ್ಮದಶಾಹವಲಿ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಇಲ್ಲಿನ ಅಲ್ಲಮಪ್ರಭು ಹಾಗೂ ಶ್ರೀ ಸುಲ್ತಾನ ಅಹ್ಮದಶಾಹವಲಿ ಜಾತ್ರಾ ಮಹೋತ್ಸವ ನೋಡಿದರೇ ದೇಶದಲ್ಲಿ ಯಾವುದೇ ಧರ್ಮ ಜಾತಿಯ ಬಗ್ಗೆ ಅಶಾಂತಿ ಉಂಟಾಗಲಾರದು.ಇಂತಹ ಪವಿತ್ರ ಕ್ಷೇತ್ರದಲ್ಲಿ ನಾನು ಬಂದಿರುವುದು ನನ್ನ ಸೌಭಾಗ್ಯ ಎಂದರು. ದೇಶದ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ವಹಿಸಿಕೊಂಡಾಗನಿಂದಲೂ ಜನರ ಸೇವೆ ಮಾಡುತ್ತಿದ್ದಾರೆ.ಕೊರೊನಾ ಸಮಯದಲ್ಲಿ ದೇಶದ ಜನತೆಗೆ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡುವ ಮೂಲಕ ಜನರ ಪ್ರಾಣ ರಕ್ಷಿಸಿದ್ದಾರೆ.ಅಲ್ಲದೇ ಉಕ್ರೇನ್ ಮತ್ತು ರಷ್ಯಾ ದೇಶದ ನಡುವೆ ನಡೆಯುತ್ತಿರುವ ಯುದ್ಧದಲ್ಲಿ ಅನೇಕ ಭಾರತೀಯರು ಸಿಲುಕಿಕೊಂಡಿದ್ದರು.

ಎಲ್ಲಿ ಯಾವಾಗ ಯಾರ ಮೇಲೆ ಬಾಂಬ್ ಬೀಳುವುದೋ ಎಂಬ ಆತಂಕದಲ್ಲಿದ್ದರು.ಆಗ ಪ್ರಧಾನಿಯವರು ಮುಂದೆ ಬಂದು ಅವರನ್ನು ಅಲ್ಲಿಂದ ಭಾರತಕ್ಕೆ ಕರೆಯಿಸಿಕೊಂಡಿರುವುದು ಮಾತ್ರ ನಿಜಕ್ಕೂ ಶ್ಲಾಘನೀಯವಾದುದು.ರೈತರಿಗೆ ಕಿಸಾನ ಸಮ್ಮಾನ ಯೋಜನೆ, ಫಸಲ್ ಭೀಮಾ ಯೋಜನೆ ಹಾಗೂ ಉಚಿತ ಆಹಾರ ಒದಗಿಸುವಲ್ಲಿ ಪ್ರಧಾನಿಯವರು ಹೆಚ್ಚಿನ ಕಾಳಜಿ ವಹಿಸಿ ಎಲ್ಲಾ ವರ್ಗದ ಜನರಿಗೆ ಹಲವರು ಯೋಜನೆಗಳನ್ನು ತಂದಿದ್ದಾರೆ. ಹಿಂದು ಸಮಾಜದ ಬಹುದು ದೊಡ್ಡ ಶಕ್ತಿಯಾಘಿರುವ ರಾಮ ಮಂದಿರದ ನಿರ್ಮಾಣ ಕಾರ್ಯವೂ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ ಅವರ ಪರಿಶ್ರಮದಿಂದಾಗುತ್ತಿದೆ ಎಂದರು.

ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಮಾತನಾಡಿ, ತೊನಸನಹಳ್ಳಿ(ಎಸ್) ಗ್ರಾಮಕ್ಕೆ ಬಂದರೆ ಇಲ್ಲಿನ ಜನರು ಯಾವುದೇ ಅನುದಾನ ಸೌಲಭ್ಯ ಕೇಳುವುದಿಲ್ಲ.ಮೊದಲು ನಮಗೆ ಕುಡಿಯುವ ನೀರನ್ನು ಒದಗಿಸಿ ಎಂದು ಕೇಳುತ್ತಾರೆ.ಅದನ್ನು ಕೇವಲ ಇಪ್ಪತ್ತು ದಿನಗಳಲ್ಲಿ ಕಾಮಗಾರಿಯನ್ನು ಮುಗಿಸಿ, ಇಲ್ಲಿನ ಶಾಶ್ವತ ಕುಡಿಯುವ ನೀರನ್ನು ಒದಗಿಸುತ್ತೆನೆ ಎಂದು ಭರವಸೆ ನೀಡಿದರು.ಅಲ್ಲದೇ ಇಲ್ಲಿಯವರೆಗೆ ಮಲ್ಲಣಪ್ಪಸ್ವಾಮಿಗಳು ಯಾವುದೇ ಅನುದಾನ ಕೇಳಿಲ್ಲ. ಮುಂದಿನ ದಿನಗಳಲ್ಲಿ ಮಠಕ್ಕೂ ಅನುದಾನ ಒದಗಿಸಲಾಗುತ್ತದೆ ಎಂದು ಹೇಳಿದರು.

ತೊನಸನಹಳ್ಳಿ(ಎಸ್)ನ ಮಲ್ಲಣಪ್ಪ ಮಹಾರಾಜರು ಹಾಗೂ ಮಹಾರಾಷ್ಟ್ರದ ಗುರುಸಿದ್ದೇಶ್ವರ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ,ಮಾಜಿ ಸಚಿವ ಬಾಬುರಾವ ಚಿಂಚನಸೂರ, ಸರಕಾರದ ಆಹಾರ ನಿಗಮ ಮಂಡಳಿ ಸದಸ್ಯೆ ಅಮರೇಶ್ವರಿ ಚಿಂಚನಸೂರ, ಸಂಜೀವಕುಮಾರ ವಾಡೇಕಾರ,ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ, ಮಾಜಿ ಈ.ಸಾ.ನಿ.ಮ ಅಧ್ಯಕ್ಷ ಭೀಮಣ್ಣ ಸಾಲಿ, ಕೃಷ್ಣ ಕಾಢಾ ಅಧ್ಯಕ್ಷ ಶರಣಪ್ಪ ತಳವಾರ,ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಬಿಜೆಪಿ ಶಹಾಬಾದ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನಿಂಗಣ್ಣ ಹುಳಗೋಳಕರ್,ತಾಪಂ ಸದಸ್ಯ ಮಲ್ಲಣ್ಣ ಸಣಮೋ,ಕೋಲಿ ಸಮಾಜದ ಅಧ್ಯಕ್ಷ ಶಿವು ತಳವಾರ, ಸಂಗೀತಾ ದೇವೆಂದ್ರ ಕಾರೊಳ್ಳಿ, ತೊನಸನಹಳ್ಳಿ(ಎಸ್) ಗ್ರಾಪಂ ಅಧ್ಯಕ್ಷೆ ಸುಷ್ಮಾ ಮರಲಿಂಗ ಗಂಗಭೋ, ಉಪಾಧ್ಯಕ್ಷೆ ರೇಷ್ಮಾ ಮಲ್ಲಿನಾಥ ಕರಣಿಕ್,ನಿಂಗಣ್ಣಗೌಡ ಮಾಲಿ ಪಾಟೀಲ, ಗ್ರಾಪಂ ಸದಸ್ಯ ಬಸವರಾಜ ಗೊಳೇದ್, ತಿಪ್ಪಣ್ಣ ನಾಟೇಕಾರ,ಮಹಾದೇವ ಬಂದಳ್ಳಿ, ಹೊನಗುಂಟಾ ಗ್ರಾಪಂ ಮಾಜಿ ಅಧ್ಯಕ್ಷ ಆನಂದ ಕೊಡಸಾ,ಮಲ್ಲಿಕಾರ್ಜುನ ಇಟಗಿ ಸೇರಿದಂತೆ ಅನೇಕರು ವೇದಿಕೆಯ ಮೇಲಿದ್ದರು.

ಕೇಂದ್ರ ಗ್ರಾಮೀಣ ಅಭಿವೃದ್ಧಿ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರು ಭಕ್ತಿ ಪ್ರಧಾನವಾದ ಹಿಂದಿ ಹಾಡನ್ನು ಹಾಡಿ ನೆರೆದ ಜನರನ್ನು ರಂಜಿಸಿದರು.ಅಲ್ಲದೇ ವೇದಿಕೆಯ ಮೇಲಿದ್ದ ಸಂಸದರು, ಶಾಸಕರು, ಮುಖಂಡರು ಹಾಗೂ ನೆರೆದ ಜನರು ಚಪ್ಪಾಳೆ ತಟ್ಟುತ್ತ ಅವರಿಗೆ ಸಾಥ್ ನೀಡಿದರು. ಸಾವಿರಾರು ಜನರು ಅವರ ಹಾಡನ್ನು ಕೇಳಿ ತಲೆತೂಗಿದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

30 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago