ಸುರಪುರ: ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರ ನೇಮಿಸಲು ಒತ್ತಾಯಿಸಿ ಗ್ರಾಮಸ್ಥರು ಶಾಲೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಗಾಂಧಿವಾದಿ ಹಯ್ಯಾಳಪ್ಪ ಕಡಿಮನಿ ಮಾತನಾಡಿ ಶಾಲೆಯಲ್ಲಿ ನಾಲ್ಕು ನೂರಕ್ಕು ಹೆಚ್ಚು ಮಕ್ಕಳಿದ್ದು ಖಾಯಂ ಶಿಕ್ಷಕರ ಸಂಖ್ಯೆ ಬರೀ ನಾಲ್ಕು ಎಂಬುದು ನೋವಿನ ಸಂಗತಿಯಾಗಿದೆ.ಕೂಡಲೆ ಕನಿಷ್ಟ ಹತ್ತು ಜನ ಶಿಕ್ಷಕರನ್ನು ನೀಡಬೇಕೆಂದು ಒತ್ತಾಯಿಸಿದರು.
ನ್ಯಾಯವಾದಿ ಶರಣು ಅನಕಸುಗೂರ ಮಾತನಾಡಿ,ಶಿಕ್ಷಣ ಇಲಾಖೆ ನಮ್ಮ ಗ್ರಾಮದ ಶಾಲೆಯನ್ನು ಸಂಪೂರ್ಣ ನಿರ್ಲಕ್ಷಿಸಿದೆ,ಖಾಯಂ ಶಿಕ್ಷಕರನ್ನು ನೀಡುವದಂತೆ ಅನೇಕ ಬಾರಿ ಮೌಖಿಕವಾಗಿ ವಿನಂತಿಸಿದರು ಇಲಾಖೆ ಸ್ಪಂಧಿಸುತ್ತಿಲ್ಲ ಇದರಿಂದ ಬೇಸತ್ತು ಇಂದು ಸಾಂಕೇತಿಕ ಪ್ರತಿಭಟನೆ ಮಾಡುತ್ತಿದ್ದು ಕೂಡಲೆ ನಿಯಮದಂತೆ ಶಿಕ್ಷಕರನ್ನು ಒದಗಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಬೇಕಾಗಲಿದೆ ಎಂದು ಎಚ್ಚರಿಸಿ ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಬರೆದ ಮನವಿಯನ್ನು ಶಿಕ್ಷಣ ಸಂಯೋಜಕರ ಮೂಲಕ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಶಿಕ್ಷಣ ಸಂಯೋಜಕ ಸುಭಾಸ ಕೊಂಡಗುಳಿ ಮಾತನಾಡಿ,ಖಾಯಂ ಶಿಕ್ಷಕರನ್ನು ಸರಕಾರ ನೇಮಿಸಲಿದೆ,ಸದ್ಯ ಶಾಲೆಗೆ ಸುಮಾರು ಎಂಟು ಜನ ಅತಿಥಿ ಶಿಕ್ಷಕರನ್ನು ನೀಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಆರ್ಸಿ ಷಣ್ಮುಕಪ್ಪ ನುಚ್ಚಿ ಹಾಗು ಗ್ರಾಮಸ್ಥರಾದ ಚಂದ್ರಕಾಂತ ಮ್ಯಾಕಲ್,ಮಲ್ಲಪ್ಪ ಚೌಡೇಶ್ವರಿಹಾಳ,ದಾನಪ್ಪ ಕಡಿಮನಿ,ಹಣಮಂತ್ರಾಯಗೌಡ,ಪುರುಷೋತ್ತಮ ನಾಯಕ,ರಂಗು ನಾಯಕ ಸೇರಿದಂತೆ ಶಾಲಾ ಮಕ್ಕಳು ಮತ್ತಿತರರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…