ಬೆಲೆ ಏರಿಕೆಯನ್ನು ಖಂಡಿಸಿ ಎಸ್‍ಯುಸಿಐ (ಕಮ್ಯುನಿಸ್ಟ್) ಪ್ರತಿಭಟನೆ

ಶಹಾಬಾದ: ನಗರದ ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷವು ಕೇಂದ್ರ ಬಿಜೆಪಿ ಸರ್ಕಾರದ ಅನಿಯಂತ್ರಿ ಬೆಲೆ ಏರಿಕೆಯನ್ನು ಖಂಡಿಸಿ ಸೋಮವಾರ ಸಂಜೆ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಎಸ್.ಯು.ಸಿ.ಐ(ಸಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ್ ಮಾನೆ ಮಾತನಾಡಿ, ಪೆಟ್ರೋಲ್,ಡಿಸೇಲ್, ಅಡುಗೆ ಎಣ್ಣೆ ಸೇರಿದಂತೆ ಅನೇಕ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕಿನ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ.ಜನರು ತತ್ತರಿಸಿ ಹೋಗಿದ್ದಾರೆ. ಆದರೂ ಬಿಜೆಪಿ ಸರಕಾರ ಯಾವುದೇ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದೆ.

ಇದನ್ನೂ ಓದಿ: ಜನವಿರೋಧಿ, ಭ್ರಷ್ಟ ಸರಕಾರ, ನೀತಿಗೆಟ್ಟ ಸರ್ಕಾರವೇ ಬಿಜೆಪಿ ಸರ್ಕಾರ: ಪ್ರಿಯಾಂಕ್ ಖರ್ಗೆ

ಪೆಟ್ರೋಲಿಯಂ ವಸ್ತುಗಳ ಬೆಲೆಯೇರಿಕೆ ಬಗ್ಗೆ ಟೀಕಿಸಿದಾಗ, ಅದು ಜಾಗತಿಕ ದರಗಳ ಕಡೆಗೆ, ತೈಲ ಕಂಪನಿಗಳ ಕಡೆಗೆ ಕೈ ತೋರಿಸುತಿತ್ತು. ಆದರೆ ಚುನಾವಣೆಗಳ ಸಂದರ್ಭದಲ್ಲಿ ಬೆಲೆ ಏರಿಕೆ ಆಗದೇ ಇರುವುದನ್ನು ದೇಶದ ಜನತೆ ನೋಡಿದ್ದಾರೆ. ಬಿಜೆಪಿಯ ಕೇಂದ್ರ ಸರ್ಕಾರದ ನಯವಂಚನೆಯು ಜನರಿಗೆ ಅರ್ಥವಾಗುತ್ತಿದೆ. ರಷ್ಯಾ – ಉಕ್ರೇನ್ ಯುದ್ಧದ ನೆಪ ನೀಡಿ ಈ ಬೆಲೆಯೇರಿಕೆಯನ್ನು ಮಾಡಲಾಗಿದೆ. ಆದರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್ ಗೆ 135 ಡಾಲರ್ ನಿಂದ 100 ಡಾಲರ್ ಗೆ ಇಳಿದಿದೆ. ಡೀಸೆಲ್ ಸಗಟು ದರವನ್ನು ಲೀಟರ್ ಗೆ ರೂ.25 ಏರಿಕೆ ಮಾಡಿರುವುದರಿಂದ ಸಾರಿಗೆ, ಸಾಗಾಟದ ವೆಚ್ಚ ಮತ್ತಷ್ಟು ಹೆಚ್ಚಾಗಲಿದೆ.

ಇದನ್ನೂ ಓದಿ: ಮಿನಿ ಇಡ್ಲಿ ಸವೆದ ಶಾಸಕ ಪ್ರಿಯಾಂಕ ಖರ್ಗೆ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಸ್ಥಳಿಯ ಸಮಿತಿಯ ಸದಸ್ಯರಾದ ಕಾಮ್ರೇಡ್ ರಾಘವೇಂದ್ರ ಎಮ್ ಜಿ ರವರು ಮಾತನಾಡುತ್ತಾ, ಬಿಜೆಪಿ ಪಕ್ಷವು ಅಚ್ಛೆ ದಿನಗಳನ್ನು ತರುತ್ತೇನೆಂದು ಬಣ್ಣಬಣ್ಣದ ಮಾತುಗಳನ್ನಾಡುತ್ತಾ ಅಧಿಕಾರಕ್ಕೆ ಏರಿದ ದಿನದಿಂದಲೂ ನಿರಂತರವಾಗಿ ಜನವಿರೋಧಿ ನೀತಿಗಳನ್ನು ಒಂದಾದ ಮೇಲೋಂದರಂತೆ ತರುತ್ತಿದ್ದಾರೆ. ಅಂಬಾನಿ-ಅದಾನಿಯಂತಹ ಬಂಡವಾಳಶಾಹಿಗಳ ಸೇವೆಯಲ್ಲಿ ಪ್ರಧಾನಿಯಾದ ನರೇಂದ್ರ ಮೋದಿಯವರು ನಿರತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜನರನ್ನು ನೈಜ ಸಮಸ್ಯೆಗಳಿಂದ ಮುಚ್ಚಿಡಲು ಧರ್ಮಾಂಧತೆ, ಜಾತೀಯತೆ ಹಾಗೂ ಪ್ರಾಂತೀಯತೆಯಂತಹ ಕ್ಷುಲ್ಲಕ ವಿಚಾರಗಳನ್ನು ಮುಂದಿಡುತ್ತಿದ್ದಾರೆ. ಈ ದೇಶದ ದುಡಿಯುವ ಜನತೆಯು ಒಡೆದಾಳುವ ನೀತಿಯ ಮೋಸಕ್ಕೆ ಒಳಗಾಗದೇ, ಇವರ ಕುತಂತ್ರಗಳನ್ನು ಸೋಲಿಸಲು ಸಂಘಟಿತ ಹೋರಾಟಗಳನ್ನು ಕಟ್ಟಲು ಜನತೆಯು ಮುಂದಾಗಬೇಕೆಂದು ಕರೆ ನೀಡಿದರು.

ಎಸ್‍ಯುಸಿಐ(ಸಿ) ಜಿಲ್ಲಾ ಸಮಿತಿ ಸದಸ್ಯರಾದ ಕಾಮ್ರೇಡ್ ರಾಮಣ್ಣ.ಎಸ್.ಇಬ್ರಾಹಿಮ್‍ಪೂರ, ಕಾಮ್ರೇಡ್ ಜಗನ್ನಾಥ.ಎಸ್.ಹೆಚ್ ಮಾತನಾಡಿದರು.

ಇದನ್ನೂ ಓದಿ: ಕಲಬುರಗಿ ವಿಮಾನ ನಿಲ್ದಾಣಕ್ಕಉತ್ತಮ ಗುಣಮಟ್ಟದ ಒಳ್ಳೆಯ ಸೌಲಭ್ಯಕ್ಕೆ ಒತ್ತಾಯಿಸಿ ಮನವಿ

ಪ್ರತಿಭಟನೆಯಲ್ಲಿ ಪಕ್ಷದ ಸದಸ್ಯರಾದ ರಾಜೇಂದ್ರ ಅತನೂರ, ತುಳಜರಾಮ.ಎನ್. ಕೆ , ನೀಲಕಂಠ.ಎಮ್.ಹುಲಿ, ರಮೇಶ್ ದೇವಕರ್, ಮಹಾದೇವಿ ಮಾನೆ, ಅಂಬಿಕಾ ಆರ್ ಜಿ, ಮಾಹದೇವಿ ಅತನೂರು, ಮಹಾದೇವ ಸ್ವಾಮಿ, ರಘು ಪವಾರ್, ಕಿರಣ್ ಜಿ ಮಾನೆ, ಸುರೇಶ್, ಅಜಯ್, ಸ್ಪೂರ್ತಿ, ಆನಂದ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

5 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420