ಬಿಸಿ ಬಿಸಿ ಸುದ್ದಿ

ಜೇವರ್ಗಿ ಶಾಂತಿಪ್ರಿಯ ಸರ್ವಜನಾಂಗದ ನೆಲೆ ಬಿಡು: ಡಾ. ಅಜಯಸಿಂಗ್

ಜೇವರ್ಗಿ: ಬಸವೇಶ್ವರ ವೃತ್ತದಿಂದ ಹಳೇ ತಹಸೀಲ್ದಾರ್ ಕಚೇರಿ ಆವರಣದವರೆಗೆ ನೂರಾರು ಕುಂಭ ಕಳಸದೊಂದಿಗೆ ಶೋಭಾಯಾತ್ರೆ ಮೆರವಣಿಗೆ ಮೂಲಕ ಜೇವರ್ಗಿ ತಾಲೂಕಿನ ಹಳೇ ತಹಸೀಲ್ದಾರ್ ಆವರಣದಲ್ಲಿ ಭೋವಿ ವಡ್ಡರ ಸಮಾಜ ಜೇವರ್ಗಿ ವತಿಯಿಂದ ಶ್ರೀ ಶಿವಯೋಗಿ ಸಿದ್ದರಾಮೇಶ್ವರರ 850 ನೇ ಜಯಂತೋತ್ಸವ ಹಾಗೂ ಜನಜಾಗೃತಿ ಸಮಾವೇಶ ಜರುಗಿತು.

ಸಮಾರಂಭವನ್ನು ಉದ್ಘಾಟಿಸಿ ಉದ್ದೇಶಿಸಿ ಮಾತನಾಡಿದ ಶಾಸಕರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ ಬೋವಿ ಸಮಾಜದ ಅಭಿವೃದ್ಧಿಗೆ ನಾವು ಸದಾ ಸಿದ್ದರಿದ್ದೇವೆ ಈಗಾಗಲೇ ತಾಲೂಕಿನಲ್ಲಿ ಭವನ ನಿರ್ಮಾಣಕ್ಕೆ 25 ಲಕ್ಷ ರೂಪಾಯಿಗಳು ಮಂಜೂರು ಆಗಿದೆ ಇನ್ನು ಹೆಚ್ಚುವರಿಯಾಗಿ ಸುಂದರವಾದ ಭವನ ನಿರ್ಮಾಣಕ್ಕೆ 50 ಲಕ್ಷ ರೂಪಾಯಿಗಳು ನೀಡುವುದಾಗಿ ಹೇಳಿದರು.

ಇದನ್ನೂ ಓದಿ :ಉರ್ದು ಪತ್ರಿಕೆಗಳಿಗೆ ಇನ್ನೂರು ವರ್ಷ ಪುರೈಕೆ: ನಯಾ ಸವೇರಾದಿಂದ ಪತ್ರಕರ್ತರಿಗೆ ಸನ್ಮಾನ

ನಮ್ಮ ಜೇವರ್ಗಿ ಎಲ್ಲ ಜಾತಿ ಜನಾಂಗದ ಜನರ ನೆಲೆವೀಡಾಗಿದ್ದು ಶಾಂತಿ ಮತ್ತು ಮಾತೃತ್ವಕ್ಕೆ ಹೆಸರು ವಾಸಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಮಾತನಾಡಿದ ಮಾಜಿ ಶಾಸಕರು ದೊಡ್ಡಪ್ಪಗೌಡ ಪಾಟೀಲ ನರಿಬೋಳ್ ಭೋವಿ ಭೋವಿ ಸಮಾಜದ ಜನಾಂಗ ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಆರ್ಥಿಕವಾಗಿ ಸಬಲರಾಗಬೇಕೆಂದು ಭೋವಿ ಅಭಿವೃದ್ಧಿ ನಿಗಮ ಮಂಡಳಿಯನ್ನು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸ್ಥಾಪನೆ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ :ಇಫ್ತೆಯಾರ್ ಕೂಟದಲ್ಲಿ ಸಂಸದ ಜಾಧವ್ ವಾಕ್ಫ್ ಮಂಡಳಿ ಅಧ್ಯಕ್ಷ ಮಹಮದ್ ಷಫಿ ಸಾ-ಆದಿ ಭಾಗಿ | Iftar Party with MP Jadhav and waqf board president

ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಪರಮಪೂಜ್ಯ ಸಿದ್ಧಲಿಂಗ ಮಹಾಸ್ವಾಮಿಗಳು ಮುರುಗೇಂದ್ರ ವಿರಕ್ತಮಠ ಯಡ್ರಾಮಿ ಶ್ರೀ ಪರಮಪೂಜ್ಯ ಮಹಾಸ್ವಾಮಿಗಳು ಪೀಠಾಧಿಪತಿಗಳು ಶ್ರೀ ಕರುಣೇಶ್ವರ ಸಂಸ್ಥಾನಮಠ ಆಂದೋಲ ಸಾನಿಧ್ಯ ವಹಿಸಿಕೊಂಡಿದ್ದರು.

ಸಮಾರಂಭದಲ್ಲಿ ರಾಜಶೇಖರ್ ಸಿರಿ ಕಾಂಗ್ರೆಸ್ ಮುಖಂಡರು ಸೇರಿದಂತೆ ಶಿವರಾಜ ಪಾಟೀಲ ರದ್ದೇವಾಡಗಿ ಬಿಜೆಪಿ ಜಿಲ್ಲಾ ಅಧ್ಯಕ್ಷ, ಅಶೋಕ ಸಾಹುಕಾರ ಗೋಗಿ ,ಬಿಜೆಪಿ ಉಪಾಧ್ಯಕ್ಷ, ಶಾಂತಪ್ಪ ಕೂಡಲಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಮರೆಪ್ಪ ಬಡಿಗೇರ್ ಬಿಜೆಪಿ ಮುಖಂಡರು ,ಹಾಗೂ ಧರ್ಮಣ್ಣ ದೊಡ್ಡಮನಿ ಬಿಜೆಪಿ ಮುಖಂಡರು ಸಿದ್ದಲಿಂಗ ರೆಡ್ಡಿ ಇಟಗಿ ಅಧ್ಯಕ್ಷರು ಕಾಂಗ್ರೆಸ್ ಜೇವರ್ಗಿ ,ಕಾಸಿಂಪಟೇಲ್ ಮುದ್ದಬಾಳ ಕಾಂಗ್ರೆಸ್ ಹಿರಿಯ ಮುಖಂಡರು, ಚಂದ್ರಶೇಖರ ಹರನಾಳ ಕಾಂಗ್ರೆಸ್ ಮುಖಂಡರು ಮತ್ತು ಸಮಾಜದ ಜಿಲ್ಲಾ ಅಧ್ಯಕ್ಷರಾದ ಮಲ್ಲಿಕಾರ್ಜುನ ಕುಸ್ತಿ ಶರಣು ಗುತ್ತೇದಾರ ,ಗುಂಡು ಗುತ್ತೇದಾರ ಸೇರಿದಂತೆ ಸಮಾಜದ ಹಿರಿಯ ಕಿರಿಯ ಮುಖಂಡರು ಸೇರಿದಂತೆ ಸಾವಿರಾರು ಜನ ಸಮಾರಂಭದಲ್ಲಿ ಭಾಗವಹಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ನೇತೃತ್ವ ಮತ್ತು ಪ್ರಾಸ್ತಾವಿಕವಾಗಿ ರವಿಚಂದ್ರ ಗುತ್ತೇದಾರ ಮಾತನಾಡಿದರು ಗುಂಡು ಗುತ್ತೇದಾರ ಸ್ವಾಗತ ಕೋರಿದರು ಆನಂದ ಕುಸ್ತಿ ಅಚ್ಚುಕಟ್ಟಾಗಿ ನಿರೂಪಣೆ ಮಾಡಿದರು ಲಕ್ಷ್ಮಣ ಅರಳಗುಂಡಗಿ ವಂದನಾರ್ಪಣೆ ಮಾಡಿದರು.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

46 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago