ಬಿಸಿ ಬಿಸಿ ಸುದ್ದಿ

ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸುಭಾಷ್ ಗುತ್ತೇದಾರ ಚಾಲನೆ

ಆಳಂದ: ಇತ್ತೀಚಿಗೆ ಆಳಂದ ತಾಲೂಕಿನ ತೆಲ್ಲೂರ ಗ್ರಾಮದಲ್ಲಿ ೨೦೨೧-೨೨ನೆ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಡಿಯಲ್ಲಿ ಅನುಮೋದನೆಗೊಂಡ ರೂ. ೧೫ ಲಕ್ಷಗಳ ಸಿ ಸಿ ರಸ್ತೆ, ರೂ. ೧೦ ಲಕ್ಷಗಳ ಸರ್ಕಾರಿ ಪ್ರಾಥಮಿಕ ಶಾಲೆಗೆ ಕಾಂಪೌಂಡ್ ಗೋಡೆ ಹಾಗೂ ಲೋಕೋಪಯೋಗಿ ಇಲಾಖೆಯಡಿ ಅನುಮೋದನೆಗೊಂಡ ರೂ. ೧೦೦ ಲಕ್ಷಗಳ ತೆಲ್ಲೂರ ದಿಂದ ದಣ್ಣೂರ ಗ್ರಾಮದವರೆಗಿನ ಸಿ.ಸಿ ರಸ್ತೆ ಕಾಮಗಾರಿಗಳ ಅಡಿಗಲ್ಲು ಸಮಾರಂಭವನ್ನು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ನೆರವೇರಿಸಿದರು.

ಇದನ್ನೂ ಓದಿ: ಇಂದಿನ ಕಲಬುರಗಿ ಪೇಟೆ ಧಾರಣೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಅವಧಿಯಲ್ಲಿ ತೆಲ್ಲೂರ ಗ್ರಾಮಕ್ಕೆ ವಿಶೇಷ ಕಾಳಜಿ ವಹಿಸಿ ಅನುದಾನ ಮಂಜೂರಿ ಮಾಡಲಾಗಿದೆ ನನ್ನ ಶಾಸಕತ್ವದ ಅವಧಿಯಲ್ಲಿ ಯಾವುದೇ ಗ್ರಾಮಕ್ಕೆ ತಾರತಮ್ಯ ಮಾಡಿಲ್ಲ ಜನಹಿತದ ದೃಷ್ಟಿಯಿಂದ ಲೋಕಕಲ್ಯಾಣದ ಕಾರ್ಯಗಳನ್ನು ಜನತೆಯ ಆದ್ಯತೆಯ ಮೇಲೆ ತೆಗೆದುಕೊಳ್ಳಲಾಗಿದೆ ಮುಂದಿನ ಒಂದು ವರ್ಷದಲ್ಲಿ ಇನ್ನೂ ಅನೇಕ ಯೋಜನೆಗಳನ್ನು ಮತಕ್ಷೇತ್ರಕ್ಕೆ ಬರಲಿವೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಜಾಪ್ರಭುತ್ವದ ಆಧಾರಸ್ತಂಭ ಸಂವಿಧಾನ ಇಂದು ಅಪಾಯದಲ್ಲಿದೆ: ಸನತ್ ಕುಮಾರ್ ಬೆಳಗಲಿ

ಇದೇ ಸಂದರ್ಭದಲ್ಲಿ ಕೆ.ಎಂ.ಎಫ್ ನಿರ್ದೇಶಕರಾದ ಚಂದ್ರಕಾಂತ ಭೂಸನೂರ, ಬಿಜೆಪಿ ಮುಖಂಡರಾದ ಜಗನ್ನಾಥ ಹೊಸಕುರುಬ್, ಭೀಮಾಶಂಕರ ಪಟ್ಟಣ, ಶಾಂತಪ್ಪ, ಶರಣು ಕುಮಸಿ, ವೈಜನಾಥ್ ಪಾಟೀಲ್, ಪಿಡಬ್ಲ್ಯೂಡಿ ಇಲಾಖೆಯ ಶರಣಯ್ಯ ಹಿರೇಮಠ (ಕಿ. ಅ) ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

58 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

1 hour ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago