ಬಿಸಿ ಬಿಸಿ ಸುದ್ದಿ

ದೋಷಮುಕ್ತ ಮತದಾರರ ಪಟ್ಟಿ ತಯಾರಿಕೆಗೆ ಸೂಚನೆ | voter Electoral Roll

ಕಲಬುರಗಿ: ಸರಿಯಾದ ಮಾಹಿತಿ ಪಡೆದುಕೊಂಡು ದೋಷಮುಕ್ತ ಮತದಾರರ ಪಟ್ಟಿ ತಯಾರಿಸಬೇಕು. ಯಾವುದೇ ಮನೆ ಬಿಟ್ಟು ಹೋಗದಂತೆ ಮತ್ತು ಯಾವುದೇ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕೆಂದು ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಶಾಲೆ: 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ದೋಷಮುಕ್ತ ಮತದಾರರ ಪಟ್ಟಿ ತಯಾರಿಕೆಗಾಗಿ ಮನೆ ಮನೆ ಸಮೀಕ್ಷೆಯ ಕುರಿತ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, 18 ವರ್ಷ ಮೇಲ್ಪಟ್ಟವರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕು. ಈ ಮನೆ-ಮನೆ ಸಮೀಕ್ಷೆಯ ಕಾರ್ಯ ಪ್ರಗತಿ ಪರಿಶೀಲಿಸಲು ಬಿಎಲ್‍ಓಗಳು ಗ್ರಾಮದಲ್ಲಿ ಎಲ್ಲಾ ಮನೆ-ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿರುವುದು ಸಂತೋಷದ ವಿಷಯ. ಆದರೆ ಬಿಎಲ್‍ಓ ಗಳು ಗ್ರಾಮದ ಜನನ ನೋಂದಣಿ ರಿಜಿಸ್ಟರ್‍ನ್ನು ಪರಿಶೀಲಿಸಿ, ಕೆಲವು ಮತದಾರರು ವಲಸೆ ಹೋಗುತ್ತಿದ್ದು, ಎರಡು ಕಡೆ ನೋಂದಣಿಯಾಗಿದ್ದಲ್ಲಿ ಅಂಥವರನ್ನು ಗುರುತಿಸಿ ಮತದಾರರ ಪಟ್ಟಿಯಿಂದ ತೆಗೆದು ಹಾಕುವಂತೆ ಸಲಹೆ ನೀಡಿದರು.

ಮನೆಮನೆ ಸಮೀಕ್ಷೆ ಕಾರ್ಯಕ್ಕಾಗಿ ಕಲಬುರಗಿ ಜಿಲ್ಲೆಯ 42-ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ 51,596 ಮನೆಗಳನ್ನು ಗುರುತಿಸಲಾಗಿದ್ದು, 50,899 ಮನೆಗಳ ಸಮೀಕ್ಷೆ ಮಾಡಲಾಗಿದ್ದು, ಅದರಲ್ಲಿ 695 ಮನೆಗಳ ಸಮೀಕ್ಷೆಯು ಬಾಕಿ ಉಳಿದಿದೆ. ಶೇಕಡಾ 98 ರಷ್ಟು ಪ್ರಗತಿ ಮಾಡಲಾಗಿದೆ. ಅದೇ ರೀತಿ 43-ಗುಲಬರ್ಗಾ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ 63,974 ಮನೆಗಳನ್ನು ಸಮೀಕ್ಷೆ ಕಾರ್ಯಕ್ಕಾಗಿ ಗುರುತಿಸಲಾಗಿದ್ದು, ಅದರಲ್ಲಿ 54,608 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ ಶೇಕಡಾ 87 ರಷ್ಟು ಪ್ರಗತಿ ಮಾಡಲಾಗಿದೆ. ಉಳಿದ 9,366 ಮನೆಗಳ ಸಮೀಕ್ಷೆಯನ್ನು 04 ದಿನದೊಳಗಾಗಿ ಪೂರ್ಣಗೊಳಿಸುವಂತೆ ಎಲ್ಲಾ ಬಿ.ಎಲ್.ಒ ಮೇಲ್ವಿಚಾರಕರಿಗೆ ಸೂಚಿಸಿದರು.

ಇದನ್ನೂ ಓದಿ: ಗುತ್ತಿಗೆದಾರರಿಗೆ ಸ್ಪಂದಿಸದ ರಾಜ್ಯ ಸರ್ಕಾರ: ಜಗನ್ನಾಥ ಶೇಗಜಿ ಆರೋಪ

ಈ ಸಭೆಯಲ್ಲಿ ಕಲಬುರಗಿ ಉಪ ವಿಭಾಗಾಧಿಕಾರಿ ಡಿ.ಎಂ ಪಾಣಿ, ಸೇಡಂ ಉಪ ವಿಭಾಗಾಧಿಕಾರಿ ಸುರೇಖಾ, ಚುನಾವಣಾ ತಹಸೀಲ್ದಾರ ಮಹಾಂತಪ್ಪ ಮುಡಬಿ ಹಾಗೂ ಜಿಲ್ಲೆಯ ಎಲ್ಲಾ ತಹಸೀಲ್ದಾರರು ಮತ್ತು ಚುನಾವಣೆ ಸಿಬ್ಬಂದಿ ಉಪಸ್ಥಿತರಿದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ವಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

16 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

1 hour ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago