ಬಿಸಿ ಬಿಸಿ ಸುದ್ದಿ

ಅಂಬೇಡ್ಕರ್ ಮರೆಯಲಾರದ ಚೇತನ: ಡಾ. ಮೇಧಾವಿನಿ ಕಟ್ಟಿ

ಕಲಬುರಗಿ: ಅಂದು ಆ ಬಾಲಕ ಅಸ್ಪೃಶ್ಯತೆ, ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಇವತ್ತು ಈ ಅಖಂಡ ಭಾರತದಲ್ಲಿ ಮರೆಯಲಾರದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆ ಡಾ. ಮೇಧಾವಿನಿ ಕಟ್ಟಿ ಹೇಳಿದರು.

ಗುಲ್ಬರ್ಗ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಡಾ. ಬಾಬಾ ಸಾಹೇಬ್ ಭೀಮರಾವ ಅಂಬೇಡ್ಕರ್ ಅವರ 131ನೇ ಜಯಂತೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿ ಭೀಮರಾವ್ ರಾಮ್‍ಜಿ ಅಂಬೇಡ್ಕರ್ ಅವರು ಬಾಲ್ಯದಲ್ಲಿ ಅನುಭವಿಸಿದ ನೋವುಗಳು ಒಂದೇ-ಎರಡೇ? ಅದನ್ನು ಹೇಳುತ್ತಾ ಹೋದರೆ ನಿಜಕ್ಕೂ ಮನಸ್ಸಿಗೆ ನೋವಾಗುತ್ತದೆ ಅವರು ಕಷ್ಟ ಪಟ್ಟು ಇಡೀ ಮಾನವ ಜನಾಂಗಕ್ಕೆ ಸಾಮಾಜಿಕ ನ್ಯಾಯವನ್ನು ನೀಡಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಭಾರತದ ಸಂವಿಧಾನ ಶಿಲ್ಪಿ ಡಾ. ಭೀಮರಾವ್‌ ರಾಮ್‌ ಅಂಬೇಡ್ಕರ್‌

ಗುಲ್ಬರ್ಗ ವಿಶ್ವವಿದ್ಯಾಲಯದ ಮುಖ್ಯ ಗ್ರಂಥಪಾಲಕ ಡಾ. ಸುರೇಶ್ ಜಂಗೆ ಮಾತನಾಡಿ ಅಂದಿನ ದಿನದಲ್ಲಿ ಕೆಳಜಾತಿಯ ಹುಡುಗನೊಬ್ಬ ಶಾಲೆಗೆ ಹೋಗಿ ಅಕ್ಷರ ಕಲಿಯುವುದು ಅಷ್ಟೊಂದು ಸುಲಭದ ಮಾತಾಗಿರಲಿಲ್ಲ. ಆದರೆ, ಅಂಬೇಡ್ಕರ್ ಅವರಿಗೆ ಚಿಕ್ಕಂದಿನಿಂದಲೇ ಓದಬೇಕು, ಏನನ್ನಾದರೂ ಸಾಧಿಸಬೇಕು ಎಂಬ ಛಲ ಇತ್ತು. ಹೀಗಾಗಿ ಭಾರತಕ್ಕೆ ಬೃಹತ್ ಸಂವಿಧಾನ ನೀಡಿದರು. ನಮ್ಮ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆಯಬೇಕು ಎಂದು ಹೇಳಿದರು.

ಗ್ರಂಥಪಾಲಕ ಡಾ. ಪ್ರವೀಣ್ ಕುಮಾರ್ ಕುಂಬಾರ ಮಾತನಾಡಿ ಅಂಬೇಡ್ಕರ್ ಅವರ ಇಡೀ ಜೀವನ ಅಸ್ಪೃಶ್ಯರೆನಿಸಿಕೊಂಡವರಿಗೆ ನ್ಯಾಯವನ್ನೂ, ಸಮಾನತೆಯನ್ನೂ ದೊರಕಿಸಿಕೊಡುವುದಕ್ಕೆ ಮುಡಿಪಾಗಿತ್ತು. ಇದರಲ್ಲಿ ಅವರು ಸಾಕಷ್ಟು ಯಶಸ್ಸನ್ನೂ ಸಾಧಿಸಿದ್ದರು.

ಇದನ್ನೂ ಓದಿ: ಅಂಬೇಡ್ಕರ್ ಎಂದರೆ ಹೋರಾಟದ ಒಂದು ಶಕ್ತಿ: ಬಸವರಾಜ ಹೆಳವರ

ಆದರೂ ಹಿಂದೂ ಧರ್ಮದ ಅಸಮಾನತೆಯಿಂದ ರೋಸಿಹೋಗಿದ್ದ ಅವರು ಬುದ್ಧನ ಕಾರುಣ್ಯದಲ್ಲಿ ಆಕರ್ಷಿತರಾಗಿ 1956ರ ಅಕ್ಟೋಬರ್ 14ರಂದು ನಾಗಪುರದಲ್ಲಿ ನಡೆದ ಬೃಹತ್ ಸಮಾರಂಭವೊಂದರಲ್ಲಿ ತಮ್ಮ ಪತ್ನಿ ಡಾ.ಶಾರದಾ ಸೇರಿದಂತೆ ತಮ್ಮ ಅಪಾರ ಅಭಿಮಾನಿಗಳೊಡನೆ ಬೌದ್ಧಧರ್ಮಕ್ಕೆ ಸೇರಿದರು. ಬೌದ್ಧ ಧರ್ಮದಲ್ಲಿ ವೈಚಾರಿಕ ಚಿಂತನೆಗಳನ್ನು ಕಾಣುವುದಕ್ಕೆ ಸಾಧ್ಯವಿದೆ ಎಂದು ಅವರು ಹೇಳಿದರು. ಶ್ರೀಮತಿ ಮಮತಾ ಮೇಸ್ತ್ರಿ, ಡಾ. ರಾಜಕುಮಾರ ಎಂ. ದಣ್ಣೂರ, ಪ್ರವೀಣ ಪಟ್ಟಣಕರ್, ಡಾ. ಖೇಮಣ್ಣ ಅಲ್ದಿ, ನಿಂಗಪ್ಪ ಕರನಾಳಕರ್, ಶರಣಗೌಡ ಪಾಟೀಲ, ಗ್ರಂಥಾಲಯ ಸಿಬ್ಬಂದಿ ಇತರರು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

53 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

56 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

59 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago