ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನ ಬೆಳಸಬೇಕಿದೆ

ಕಲಬುರಗಿ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳು ಹಾಗೂ ಪರಿಸರ ಸಂರಕ್ಷಣಾ ಸಮಿತಿ(ರಿ), ಕಲಬುರಗಿ ಹಾಗೂ ರಂಗಾಯಣ ಕಲಬುರಗಿ ಸಂಯುಕ್ತಾಶ್ರಯದಲ್ಲಿ ರಂಗಾಯಣದ ಆವರಣದಲ್ಲಿ ಪಕ್ಷಿ ಪ್ರಾಣಿಗಳಿಗೆ ನೀರಿನ ದಾಹ ತೀರಿಸುವ ನಿಟ್ಟಿನಲ್ಲಿ ಮರಗಳಿಗೆ ಅರವಟ್ಟಿಗೆಗಳನ್ನು ಕಟ್ಟುವ ಮೂಲಕ ಏಪ್ರೀಲ್‌ ಫೂಲ್‌ ಬದಲು ಏಪ್ರಿಲ್‌ ಕೂಲ್‌ ಡೇ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ರಂಗಾಯಣದ ಆಡಳಿತ ಅಧಿಕಾರಿಗಳಾದ ಜಗದೀಶ್ವರಿ ನಾಸಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮನುಷ್ಯರಾದ ನಮಗೆ ಜೀವಿಸೋಕೆ ಗಿಡ ಮರ ಊಟ ನೀರು ಶುದ್ಧವಾದ ಗಾಳಿ ಎಷ್ಟು ಅವಶ್ಯಕತೆ ಇದೆಯೋ ಪ್ರಾಣಿ ಪಕ್ಷಿಗಳು ನಮ್ಮ ಜೀವನದಲ್ಲಿ ಬಹಳ ಅಗತ್ಯವಿದೆ ಹಾಗಾಗಿ ಪ್ರಾಣಿ ಪಕ್ಷಿಗಳನ್ನು ಉಳಿಸುವ ನಿಟ್ಟಿನಲ್ಲಿ ಅರವಟ್ಟಿಗೆಗಳನ್ನು ಮರಕ್ಕೆ ಕಟ್ಟುವ ಮೂಲಕ ನೀರಿನ ದಾಹ ತಿರಿಸೋಣ, ಎಲ್ಲರೂ ಪಕ್ಷಿ ಪ್ರಾಣಿಗಳ ಉಳಿವಿಗಾಗಿ ನೀರು ಆಹಾರ ಧಾನ್ಯಗಳನ್ನು ಇಡೋಣ. ಎಂದು ಹೇಳಿದರು.

ಇದನ್ನೂ ಓದಿ: ಪಿಎಸ್‌ಐ ಅಕ್ರಮ: 6 ಜನರ ಬಂಧನ

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳು ಹಾಗೂ ಪರಿಸರ ಸಂರಕ್ಷಣಾ ಸಮಿತಿ(ರಿ), ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶಿವಶರಣ ಪರಪ್ಪಗೋಳ ಜೋಗೂರ ಮಾತನಾಡಿ, ಬೇಸಿಗೆಯ ಈ ಉರಿ ಬಿಸಿಲಿನಲ್ಲಿ ಮನುಷ್ಯರಿಗೆ ಕುಡಿಯುವ ನೀರು ಸಿಗುತ್ತಿಲ್ಲ. ಇನ್ನೂ ಪ್ರಾಣಿ ಪಕ್ಷಿಗಳ ಪರಿಸ್ಥಿತಿ ಹೇಳತೀರದು. ಹಾಗಾಗಿ ಪ್ರಾಣಿ ಪಕ್ಷಿಗಳ ಜೀವ ಉಳಿಸುವ ನಿಟ್ಟಿನಲ್ಲಿ ನೀರು ಒದಗಿಸಿಕೊಡುವ ನಿಟ್ಟಿನಲ್ಲಿ ಮರಕ್ಕೆ ಅರವಟ್ಟಿಗೆಗಳನ್ನ ಕಟ್ಟಿ ಪಕ್ಷಿ ಪ್ರಾಣಿಗಳಿಗೆ ನೀರಿನ ವ್ಯವಸ್ಥೆ ಮಾಡುತ್ತಿದ್ದೇವೆ.

ಈ ಭೂಮಿ ಮೇಲೆ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಹಾಗಾಗಿ ಪರಿಸರ ಸಂರಕ್ಷಣೆ ಮಾಡುವ ಜೊತೆ ಜೊತೆಗೆ ಪಕ್ಷಿ ಪ್ರಾಣಿ ಸಂಕುಲನಗಳನ್ನ ಉಳಿಸುವ ನಿಟ್ಟಿನಲ್ಲಿ ಈ ಒಂದು ಕಾರ್ಯಕ್ಕೆ ಮುಂದಾಗಿದ್ದೇವೆ. ವಿಭಿನ್ನ ವಿಶೇಷ ರೀತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ನಾವು ಸ್ವಯಂಪ್ರೇರಿತರಾಗಿ ಏಪ್ರಿಲ ಪೂಲ್‌ ಏಪ್ರಿಲ್‌ ಕೂಲ್ ಡೇ‌, ಸಸಿ ನೆಡುವ ಮೂಲಕ ಪಕ್ಷಿ ಪ್ರಾಣಿಗಳಿಗೆ ನೀರು ಕಾಳು ಇಡುವ ಮೂಲಕ ವಿಭಿನ್ನವಾಗಿ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ. ಮಕ್ಕಳಲ್ಲಿ ಕೂಡ ಈ ರೀತಿಯ ಮಾನವೀಯ ಮೌಲ್ಯಗಳನ್ನ ನಾವು ಬೆಳಸಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: ವಾಹನದ ಚಕ್ರದಲ್ಲಿ ಸಿಲುಕಿ ಎರಡು ಕಾಲುಗಳು ಕಳೆದುಕೊಂಡ ಯುವಕ

ಇದೇ ಸಂದರ್ಭದಲ್ಲಿ ಚಿಣ್ಣರ ಮೇಳ ಶಿಬಿರದ ನಿರ್ದೇಶಕರಾದ ಸಂದೀಪ್‌ ಬಿ ಮಾಳಗೆ ಅವರು ಮಾತನಾಡಿ, ಅರವಟ್ಟಿಗೆಗಳನ್ನ ಮರಕ್ಕೆ ಕಟ್ಟಿ ನೀರು ಹಾಕಿದರೆ ಪಕ್ಷಿಗಳೆಲ್ಲಾ ಬಂದು ನೀರು ಕುಡಿಯುತ್ತವೆ. ಆಹಾರ ಧಾನ್ಯಗಳನ್ನು ಅಲ್ಲಲ್ಲಿ ಹಾಕಿದರೆ ಕಾಳುಗಳನ್ನು ತಿಂದು ಪಕ್ಷಿ ಪ್ರಾಣಿಗಳು ನೀರು ಕುಡಿಯುತ್ತವೆ. ಮೊದಲೆಲ್ಲಾ ಹಳ್ಳ ಕೆರೆ ಇರತಿತ್ತು ಅಲ್ಲಿ ಪಕ್ಷಿ ಪ್ರಾಣಿಗಳು ನೀರು ಕುಡಿಯುತ್ತಿದ್ದವು. ಈಗ ಕಾಡೆಲ್ಲಾ ನಾಶವಾಗಿದೆ ಅದಕ್ಕಾಗಿ ನೀರಿನ ಪ್ರಮಾಣ ಬಹಳ ಕಡಿಮೆಯಾಗಿದೆ. ಅಂತರ್ಜಲ ಮಟ್ಟ ನೀರಿನ ಪ್ರಮಾಣ ಕಡಿಮೆಯಾಗಿದೆ ಅದನ್ನ ವೃದ್ಧಿ ಮಾಡಬೇಕೆಂದರೇ ಕಡ್ಡಾಯವಾಗಿ ಮರ ಗಿಡಗಳನ್ನು ನೆಟ್ಟು ಪೋಷಿಸಬೇಕು, ನಮ್ಮ ಜೊತೆಗೆ ಪ್ರಾಣಿ ಪಕ್ಷಿ ಎಲ್ಲವೂ ಬದುಕಬೇಕು, ಪ್ರಾಣಿಗಳ ಜೊತೆಗೆ ನಾವು ಬೆರೆತು ಪ್ರಾಣಿಗಳ ಸಾಕುವುದನ್ನ ನಾವು ಕಲಿಯಬೇಕು. ಅದಕ್ಕಾಗಿ ಪ್ರಾಣಿ ಪಕ್ಷಿಗಳನ್ನ ರಕ್ಷಣೆ ಮಾಡೋಣ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರಾದ ಗಣೇಶ ಚವ್ಹಾಣ, ವಿಜಯಕುಮಾರ ಹಾಬಾನೂರ, ದೀಪಕ ಗಾಯಕವಾಡ, ನಾಗೇಶ ಹರಳಯ್ಯಾ, ಹಾಗೂ ಅರುಣ ಅಂಜುಟಗಿ, ಮಲ್ಲಿನಾಥ, ಅಮರ, ಅಂಬಿಕಾ, ಲೊಕೇಶ, ಹಾಗೂ ರಂಗಾಯಣದ ಕಲಾವಿದರಾದ ನಾಗೇಶ, ಜಗದೀಶ, ಉಮೇಶ ವಿದ್ಯಾರ್ಥಿಗಳು ಇತರರು ಇದ್ದರು.

ಇದನ್ನೂ ಓದಿ: ಅದ್ದೂರಿಯಿಂದ ಜರುಗಿದ ಶಹಾಬಾದ ಶರಣಬಸವೇಶ್ವರ ರಥೋತ್ಸವ

ಶಿವಶರಣ ಪರಪ್ಪಗೋಳ ಜೋಗೂರ ನಿರೂಪಿಸಿದರು. ಗಣೇಶ ಚವ್ಹಾಣ ಸ್ವಾಗತಿಸಿದರು, ವಿಜಯಕುಮಾರ ಹಾಬಾನೂರ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

9 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

9 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420