ಬಿಸಿ ಬಿಸಿ ಸುದ್ದಿ

ಸುಖ ಶಾಂತಿ ನೆಮ್ಮದಿ ಪಡೆಯುವ ವಸ್ತುಗಳಲ್ಲ: ಅರವಿಂದ ಶಾಸ್ತ್ರೀ

ಕಲಬುರಗಿ: ಸುಖ ಶಾಂತಿ ನೆಮ್ಮದಿ ಪಡೆಯುವ ವಸ್ತುಗಳಲ್ಲ, ನಾವು ಸನ್ಮಾರ್ಗದಲ್ಲಿ ನಡೆದಾಗ ಮಾತ್ರ ತಾನಾಗಿಯೇ ಸಿಗುತ್ತವೆ ಎಂದು ಪ್ರವಚನಗಾರ ಅರವಿಂದ ಶಾಸ್ತ್ರೀ ಭೂಪಾಲ ತೆಗನೂರ ಹೇಳಿದರು.

ನಗರದ ಭವಾನಿನಗರದಲ್ಲಿರುವ ಬಬಲಾದ ಶ್ರೀಮಠದಲ್ಲಿ ನಡೆದ ಶಿವಾನುಭವಗೋಷ್ಠಿಯ 59ನೇ ಮಾಲಿಕೆಯಲ್ಲಿ ಉಪನ್ಯಾಸ ನೀಡುತ್ತಾ ಮಾನವ ಜನ್ಮ ವ್ಯರ್ಥವಾಗಿ ಕಳೆಯದೆ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡಿ ಸಾರ್ಥಕಗೊಳಿಸಿಕೊಳ್ಳಬೇಕು. ನಾವು ಎಷ್ಟು ದಿನ ಬದುಕಿದ್ದೇವೆ ಎನ್ನುವುದು ಮಹತ್ವವಲ್ಲ ಬದುಕಿದ್ದಷ್ಟು ದಿನವು ಒಳ್ಳೆಯ ಕಾರ್ಯಗಳೇ ನಮ್ಮ ಗಣನೆಗೆ ಬರುತ್ತವೆ. ಇಂದಿನ ದಿನಮಾನಗಳಲ್ಲಿ ಮನುಷ್ಯ ಒತ್ತಡದ ಜೀವನ ಸಾಗಿಸುತ್ತಿದ್ದಾನೆ. ಕ್ಷಣಿಕ ಸುಖದ ಬೆನ್ನು ಹತ್ತಿ ಅಶಾಂತಿಯ ಜೀವನ ಸಾಗಿಸುತ್ತಿದ್ದಾನೆ ಇಂತಹ ಅಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ನೆಮ್ಮದಿಯ ಜೀವನ ನಮ್ಮದಾಗುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಶರಣಬಸವೇಶ್ವರ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಹಾಗೂ ಗಣಕಯಂತ್ರ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕರಾದ ಶ್ರೀಮತಿ ಮಂಜುಳಾ ಎ. ಬಿರಾದಾರ ಅವರು ಮಾತನಾಡುತ್ತಾ ಇಂದಿನ ದಿನಗಳಲ್ಲಿ ಮಕ್ಕಳನ್ನು ಉತ್ತಮ ಸಂಸ್ಕಾರದಿಂದ ಬೆಳೆಸಿ ಉತ್ತಮ ನಾಗರಿಕರನ್ನಾಗಿ ಮಾಡುವುದು ಪಾಲಕರ ಕರ್ತವ್ಯವಾಗಿದೆ. ಎಲ್ಲ ಸ್ತ್ರೀಯರು ಕುಟುಂಬದ ಹಿರಿಯರಿಗೆ ಗೌರವ ಕೊಟ್ಟು ಅವಿಭಕ್ತ ಕುಟುಂಬಕ್ಕೆ ಒತ್ತು ಕೊಟ್ಟು ಸಮೃದ್ಧ ಸಮಾಜ ಕಟ್ಟಬಹುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಮ.ನಿ.ಪ್ರ.ಸ್ವ. ಗುರುಪಾದಲಿಂಗ ಮಹಾಶಿವಯೋಗಿಗಳಿಗೆ ಶ್ರೀಮಠದ ಭಕ್ತರ ವತಿಯಿಂದ ಗುರುವಂದನಾ ಸಲ್ಲಿಸಲಾಯಿತು.

ಈ ಭಾಗದ ಸಂಗೀತ ಕಲಾವಿದರಾದ ಶ್ರೀಕಾಂತ ಜೇವರ್ಗಿ ತೆಲ್ಲೂರ ಪ್ರಾರ್ಥಿಸಿದರು, ಶಿಕ್ಷಕರಾದ ದೇವಯ್ಯ ಗುತ್ತೇದಾರ ನಿರೂಪಿಸಿದರು, ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಪ್ರಾಸ್ತಾವಿಕವಾಗಿ ಮಾತನಾಡಿದರು, ಸಂಗಮೇಶ ಹೂಗಾರ ಸ್ವಾಗತಿಸಿದರು, ಉಪನ್ಯಾಸಕ ಪ್ರಕಾಶ ರೋಳೆ ವಂದಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮಠದ ಕಾರ್ಯದರ್ಶಿಗಳಾದ ಬಸಯ್ಯಾ ಶಾಸ್ತ್ರಿ, ಶಿವಕುಮಾರ ಗಣಜಲಖೇಡ, ಜಗನ್ನಾಥ ಸಜ್ಜನಶೆಟ್ಟಿ, ಸಂಗೀತ ಶಿಕ್ಷಕರಾದ ಶರಣಯ್ಯ ಸ್ವಾಮಿ, ವೀರೆಶ ಬಿರಾದಾರ ಉಪಳಾಂವ, ನಾಗರಾಜ ವೆಂಕಟಬೇನೂರ, ರವಿ ಕುರಕೋಟಿ, ವೈಜನಾಥ ನಂದ್ಯಾಳ, ಶಿವಯ್ಯ ಪತ್ರಿ, ಬಸವರಾಜ ಜಿ. ಪಾಟೀಲ ಸೇರಿದಂತೆ ಶ್ರೀ ಮಠದ ಅನೇಕ ಭಕ್ತರೂ ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420