ರಾಜ್ಯದಲ್ಲಿನ ಗುತ್ತಿಗೆದಾರರ ಸಮಸ್ಯೆಗಳನ್ನು ಸರಕಾರ ಪರಿಹರಿಸಬೇಕು-ರಾಜಾ ಮುಕುಂದ ನಾಯಕ

ಸುರಪುರ: ರಾಜ್ಯದಲ್ಲಿನ ಗುತ್ತಿಗೆದಾರರು ಇಂದು ಅನೇಕ ರೀತಿಯ ಸಮಸ್ಯೆಗಳನ್ನು ಹೆದುರಿಸುವಂತಾಗಿದೆ.ಅದಕ್ಕೆ ಬೆಳಗಾವಿಯ ಸಂತೋಷ ಪಾಟೀಲ್ ಆತ್ಮಹತ್ಯೆ ನಿದರ್ಶನವಾಗಿದ್ದು ಸರಕಾರ ಗುತ್ತಿಗೆದಾರರ ಸಮಸ್ಯೆಗಳನ್ನು ಸರಕಾರ ಪರಿಹರಿಸಬೇಕು ಎಂದು ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜಾ ಮುಕುಂದ ನಾಯಕ ಮಾತನಾಡಿದರು.

ನಗರದ ರಿಕ್ರಿಯೇಷನ್ ಕ್ಲಬ್ ಆವರಣದಲ್ಲಿ ತಾಲೂಕು ಗುತ್ತಿಗೆದಾರರ ಸಂಘದಿಂದ ಹಮ್ಮಿಕೊಂಡಿದ್ದ ಆತ್ಮಹತ್ಯೆಗೆ ಶರಣಾಗಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್‌ಗೆ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ರಾಜ್ಯದಲ್ಲಿ ಪರ್ಸೆಂಟೇಜ್ ದಂಧೆಯಿಂದಾಗಿ ಇಂದು ಅನೇಕ ಜನ ಗುತ್ತಿಗೆದಾರರು ಈ ವ್ಯವಸ್ಥೆಗೆ ನಲುಗಿದ್ದಾರೆ.

ಇದನ್ನೂ ಓದಿ: ಗೋಲ್ಡನ್ ಕೇವ್ ಬುದ್ಧ ವಿಹಾರ:ಡಿವೈಎಸ್ಪಿ ಡಾ:ದೇವರಾಜಗೆ ಸನ್ಮಾನ

ಸಂತೋಷ ಪಾಟೀಲ್ ನಾಲ್ಕು ಕೋಟಿ ರೂಪಾಯಿಗಳ ಕಾಮಗಾರಿ ಮಾಡಿ ಪರ್ಸೆಂಟೇಜ್ ನೀಡಲು ಹಣವಿಲ್ಲದ್ದಕ್ಕೆ ಸಾವನ್ನಪ್ಪಿರುವುದು ತುಂಬಾ ನೋವಿನ ಸಂಗತಿಯಾಗಿದೆ.ಇದೇ ರೀತಿ ಮುಂದುವರೆದರೆ ಮುಂದೆ ಗುತ್ತಿಗೆದಾರರು ಬೀದಿಗಿಳಿದು ಹೋರಾಟ ನಡೆಸುವ ಅನಿವಾರ್ಯತೆ ಎದುರಾಗಲಿದೆ ಎಂದರು.ಅಲ್ಲದೆ ಮೃತ ಸಂತೋಷ ಪಾಟೀಲ್ ಕುಟುಂಬಕ್ಕೆ ಸರಕಾರ ನೆರವಾಗಬೇಕು ಮತ್ತು ಅವರ ಎಲ್ಲಾ ಬಿಲ್‌ಗಳನ್ನು ಸರಕಾರ ಬಿಡುಗಡೆ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಗುತ್ತಿಗೆದಾರ ಅಸ್ಲಾಂ ಮಾಸ್ಟರ್ ಸೇರಿದಂತೆ ಅನೇಕರು ಮಾತನಾಡಿದರು.ಇದಕ್ಕೂ ಮುನ್ನ ಸಂತೋಷ ಪಾಟೀಲ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಎರಡು ನಿಮಿಷಗಳ ಮೌನಾಚರಣೆಯೊಂದಿಗೆ ಆತ್ಮಕ್ಕೆ ಶಾಂತಿ ಕೋರಿದರು.ನಂತರ ಗುತ್ತಿಗೆದಾರರ ಸಮಸ್ಯೆ ನಿವಾರಣೆ ಕುರಿತು ಗ್ರೇಡ-೨ ತಹಸೀಲ್ದಾರ್ ಮಲ್ಲಯ್ಯ ದಂಡು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಕೆ.ಎಮ್ ಕವಾತಿ,ಪ್ರ.ಕಾರ್ಯದರ್ಶಿ ದೇವರಾಜ ನಾಯಕ,ಕಾರ್ಯದರ್ಶಿ ಕಾಳಪ್ಪ ಬಡಿಗೇರ,ಪ್ರಕಾಶ ಯಾದವ,ಪ್ರಕಾಶ ಸಜ್ಜನ್,ನದೀಮ ಮುಲ್ಲಾ,ಮಾರ್ಥಂಡಪ್ಪ ದೊರೆ,ವೆಂಕಟೇಶ ಬೇಟೆಗಾರ, ವೆಂಕಟೇಶ ಯಾದವ್,ಅಬ್ದುಲಗಫೂರ ನಗನೂರಿ,ಅಜಯ್ ಪಾಟೀಲ್,ಮೈನೊದ್ದಿನ್ ಅಮ್ಮಾಪುರ,ಮಂಜುನಾಥ ಗುಳಗಿ,ಜಗದೀಶ ಪಾಟೀಲ್,ಪರಶುರಾಮ ಗುಡ್ಡಕಾಯಿ,ಅರವಿಂದ ಬಿಲ್ಲವ್,ವೀರಭದ್ರಪ್ಪ ಕುಂಬಾರ,ಖಾದರ್ ಬಾಷಾ ಹಾಗೂ ಮಹ್ಮದ್ ಹುಸೇನ್ ಸೇರಿದಂತೆ ಅನೇಕರಿದ್ದರು.

ಇದನ್ನೂ ಓದಿ: ಹಿಂದೂ ಕಾರ್ಯಕರ್ತೆ ದಿವ್ಯ ಹಾಗರಗಿ ಮನೆ ಮೇಲೆ ಸಿಐಡಿ ದಾಳಿ

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

26 mins ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

48 mins ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

3 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

14 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

16 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420