ಜಾಲಿಬೆಂಚಿ ಮರಡಿ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವದ ರಥೋತ್ಸವ

0
21

ಸುರಪುರ: ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಶ್ರೀ ಮರಡಿ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಅದ್ಧೂರಿ ರಥೋತ್ಸವ ನಡೆಸಲಾಯಿತು.ಕಳೆದ ಎರಡು ವರ್ಷಗಳಿಂದ ಕೋವಿಡ್‌ನಿಂದಾಗಿ ಜಾತ್ರೆಯನ್ನು ರದ್ದುಗೊಳಿಸಲಾಗಿತ್ತು.

ಈಬಾರಿಯ ಜಾತ್ರೆಯನ್ನು ಕಳೆದ ಐದು ದಿನಗಳಿಂದ ಅದ್ಧೂರಿಯಾಗಿ ನಡೆಸಲಾಗಿದ್ದು,ದವನದ ಹುಣ್ಣಿಮೆಯಂದು ನಡೆಯುವ ರಥೋತ್ಸವ ಜರುಗಿತು.ರಥೋತ್ಸವದಲ್ಲಿ ಗೂಳಿ ಮೌನಯ್ಯ ತಾತಾ,ದೇವಸ್ಥಾನದ ಅರ್ಚಕ ಅಮರಯ್ಯಸ್ವಾಮಿ ಸೇರಿದಂತೆ ಗ್ರಾಮದ ಅನೇಕ ಮುಖಂಡರು ಹಾಗು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

Contact Your\'s Advertisement; 9902492681

ಇದನ್ನೂ ಓದಿ: ಸುರಪುರ: ೨೦ ರಂದು ಬೃಹತ್ ಆರೋಗ್ಯ ಮೇಳ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here