ವಿವಿಧ ಸಾಧಕರಿಗೆ ಕಲ್ಯಾಣ ರತ್ನ ಪ್ರಶಸ್ತಿ ಪ್ರದಾನ

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್ಮನ್ ಡಾ. ದಾಕ್ಷಾಯಿಣಿ ಅವ್ವ (ಶಿಕ್ಷಣ ಕ್ಷೇತ್ರ), ಮಾಜಿ ಸಚಿವ ಎಸ್. ಕೆ. ಕಾಂತಾ (ಹೋರಾಟಗಾರರು), ತಹಸೀಲ್ದಾರ್ ಪ್ರಕಾಶ ಕುದರಿ, ಮಹಾನಗರ ಪಾಲಿಕೆಯ ಉಪ ಆಯುಕ್ತ ಪ್ರಕಾಶ ರಜಪುತ (ಸೇವಾ ಕ್ಷೇತ್ರ), ಬಸವಕಲ್ಯಾಣ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ರಾಜಕುಮಾರ ಸಿರಗಾಪುರ (ಕೃಷಿ ಕ್ಷೇತ್ರ) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅದೇ ರೀತಿ ಪತ್ರಕರ್ತ ಹಣಮಂತರಾವ ಬೈರಾಮಡಗಿ (ಪತ್ರಿಕಾ ಕ್ಷೇತ್ರ), ಪಿಎಸ್‌ಐ ಯೂನುಸ್ ಮಿಯಾ ಅಟ್ಟೂರ (ಪೊಲೀಸ್ ಇಲಾಖೆ), ಅವಧೂತಪ್ಪ ಪೂಜಾರಿ (ಜನಪದ ಕ್ಷೇತ್ರ), ಎಚ್. ಬಿ. ಪಾಟೀಲ್ (ಸಮಾಜ ಸೇವೆ), ಅಂಬಾರಾಯ ಪಟ್ಟಣಕರ್(ಸಹಕಾರ ಕ್ಷೇತ್ರ) ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಲಬುರಗಿ: ಜಾತಿವಾದಿ ಜನಗಳು ರಾಜಕೀಯಕ್ಕೆ ಬಂದರೆ ಸಮ ಸಮಾಜ ನಿರ್ಮಿಸುವುದು ಅಸಾಧ್ಯ ವಾಗಲಿದೆ ಎಂದು ಮಾಜಿ ಸಚಿವ ಎಸ್. ಕೆ. ಕಾಂತಾ ವಿಷಾದಿಸಿದರು.

ಇದನ್ನೂ ಓದಿ: ಹಿಂದೂ ಕಾರ್ಯಕರ್ತೆ ದಿವ್ಯ ಹಾಗರಗಿ ಮನೆ ಮೇಲೆ ಸಿಐಡಿ ದಾಳಿ

ನಗರದ ಕಲಾ ಮಂಡಳದಲ್ಲಿ ಸಿದ್ಧಗಂಗಾ ಮಠದ ಪೂಜ್ಯ ಡಾ. ಶಿವಕುಮಾರ ಸ್ವಾಮೀಜಿ ಗಳ ಜನ್ಮದಿನದ ಪ್ರಯುಕ್ತ ಕನ್ನಡ ಜಾನಪದ ಪರಿಷತ್ ಸಂಸ್ಥಾಪನ ಸಂಭ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಕಲ್ಯಾಣ ರತ್ನ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.
ಮನುಷ್ಯ ಜಾತಿ ಒಂದೇ, ಇಲ್ಲಿ ಎಲ್ಲರೂ ಸರಿಸಮಾನರು. ಯಾರು ಮೇಲು, ಕೀಳಲ್ಲ. ಇನ್ನು ಜಾತ್ಯತೀತ ತತ್ವ ಜಾತಿಯತೆಗೆ ಮಾರ್ಪಡುತ್ತಿದ್ದು, ಸಮಾಜದಲ್ಲಿ ಸಮಾನತೆ ಬರಬೇಕು. ಸಮಾಜವಾದ ತತ್ವ ಬೇರೂರಬೇಕು. ಬಡವ, ಶ್ರೀಮಂತ, ಧರ್ಮ, ಮತ, ಪಂಥ ಎಂಬ ಒಡೆದಾಳುವ ಭಾವನೆ ದೂರವಾದಾಗ ಮಾತ್ರ ಸಮ ಸಮಾಜ ನಿರ್ಮಾಣವಾಗಲಿದೆ ಎಂದರು.

ದೇಶದಲ್ಲಿ ಶೇ. ೭೫ ೪೮ ಕೋಟಿ ಜನ ಅಸಂಘಟಿತ ಕಾರ್ಮಿಕರಿದ್ದು, ಇನ್ನು ದುಡಿಲಾರದವರು ಶ್ರೀಮಂತರಾದರೆ, ದುಡಿಯುವರು ಬಡವರಾಗುತ್ತಿರುವುದು ದುರಂತವೇ ಸರಿ. ಅಲ್ಲದೆ ಅನ್ನ ಹಾಕುವವರಿಗೆ ಅನ್ನವಿಲ್ಲ, ದುಡಿಯುವ ಕೈಗಳಿಗೆ ಕೆಲಸವಿಲ್ಲ ದುರ್ಗುಮ ಸ್ಥಿತಿ ಎದುರಾಗಿದೆ ಎಂದು ತೀವ್ರ ಕಳವಳವ್ಯಕ್ತಪಡಿಸಿದರು.

ಇದನ್ನೂ ಓದಿ: ಗಲಭೆಗಳಿಗೆ ಬಿಜೆಪಿ ಸರಕಾರ ಕುಮ್ಮಕ್ಕು ನೀಡುತ್ತಿದೆ: ಖಂಡ್ರೆ ಕಿಡಿ

ಶ್ರೀನಿವಾಸ ಸರಡಗಿಯ ಡಾ. ರೇವಣಸಿದ್ಧ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ರಾಜ್ಯ ವಕೀಲರ ಪರಿಷತ್ತಿನ ರಾಜ್ಯಾಧ್ಯಕ್ಷ ಕಾಶಿನಾಥ ಮೋತಕಪಳ್ಳಿ ಹಾಗೂ ಕೆಎಸ್‌ಆರ್‌ಪಿ ಕಮಾಂಡಂಟ್ ಬಸವರಾಜ ಜಿಳ್ಳಿ ಮಾತನಾಡಿದರು. ಕಜಾಪ ಉತ್ತರ ವಲಯ ಅಧ್ಯಕ್ಷ ಹಣಮಂತರಾಯ ಅಟ್ಟೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ, ಕಜಾಪ ಜಿಲ್ಲಾಧ್ಯಕ್ಷ ಎಂ. ಬಿ. ನಿಂಗಪ್ಪ ಮತ್ತಿತರರಿದ್ದರು.
ಕಜಾಪ ದಕ್ಷಿಣ ವಲಯ ಅಧ್ಯಕ್ಷ ಸಿದ್ದಲಿಂಗಪ್ಪ ಎನ್.ಬಾಗಲಕೋಟ ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿಕುಮಾರ ಶಹಾಪುರಕರ ನಿರೂಪಿಸಿದರು. ಮಲಕಾರಿ ಪೂಜಾರಿ ಪ್ರಾರ್ಥಿಸಿದರು. ಜ್ಯೊತಿ ತೋಳೆ ಸ್ವಾಗತಿಸಿದರು. ಮಲ್ಲಿನಾಥ ಕುಮಸಿ ವಂದಿಸಿದರು.
ಈ ಸಂದರ್ಭದಲ್ಲಿ ಸಾಹಿತಿ ಸೂರ್ಯಕಾಂತ ಪಾಟೀಲ್, ಪ್ರಮುಖರಾದ ಸಿದ್ದಲಿಂಗ ಕಣ್ಣಿ, ಸಿದ್ಧರಾಮ ತಳವಾರ, ರಘುನಂದನ್ ಕುಲಕರ್ಣಿ, ಉಮೇಶ್ ಬಿರಾಜದಾರ ಮತ್ತಿತರರಿದ್ದರು.

ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ | JDS State President

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420