ನವದೆಹಲಿ: ಕರ್ನಾಟಕ ರಾಜ್ಯ ಸಭೆಯಲ್ಲಿ ಇಂದೇ ವಿಶ್ವಾಸಮತಯಾಚನೆ ಪ್ರಕ್ರಿಯೆ ಮುಗಿಯಬೇಕು ಎಂದು ಪಕ್ಷೇತರ ಶಾಸಕರು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ವರೆಗೆ ಮುಂದೂಡಿದೆ ಎನ್ನಲಾಗಿದೆ.
ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ, ನ್ಯಾಯಲದಲ್ಲಿ ವಾದಮಂಡಿಸಿ, ಸುಮ್ಮನೆ ಕಾಲಹರಣ ಮಾಡ್ತಿದ್ದಾರೆ ಆರೋಪಿಸಿ. ಇಂದು ಸಂಜೆ 6 ರೊಳಗೆ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ಅವಕಾಶಕ್ಕೆ ಆದೇಶ ವದಗಿಸಬೇಕೆಂದು ಸೂಚಿಸಿ ಎಂದು ಮನವಿ ಮಾಡಿದರು.
ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ಜುಲೈ 18ಕ್ಕೆ ಕಲಾಪ ಆರಂಭಗೊಂಡಿದ್ದು ಹಲವು ಮಂದಿ ಮಾತನಾಡಬೇಕಿದೆ. ಇತಿಹಾಸವನ್ನು ನೋಡಿದರೆ ಸುದೀರ್ಘ ಚರ್ಚೆ ನಡೆದಿದೆ. ಸದನದಲ್ಲಿ ಅಭಿಪ್ರಾಯ ಮಂಡನೆ ಆಗುತ್ತಿರುವಾಗ ರಾಜ್ಯಪಾಲರು ಸಮಯ ನಿಗದಿ ಮಾಡಿರುವುದು ಸರಿಯಲ್ಲ. ಚರ್ಚೆ ಮಧ್ಯೆ ಮತಕ್ಕೆ ಹಾಕುವುದು ಹೇಗೆ ಎಂದು ಪ್ರಶ್ನಿಸಿದರು.
ಇಂದು ಯಾವುದೇ ಆದೇಶ ಪ್ರಕಟಿಸದ ಸುಪ್ರೀಂ ಕೋರ್ಟ್ ಪರೋಕ್ಷವಾಗಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮತ್ತೊಂದು ಅವಕಾಶ ನೀಡಿದೆ ಎಂದೆ ಹೇಳಲಾಗುತ್ತಿದ್ದು, ಅತೃಪ್ತ ಶಾಸಕರ ರಾಜೀನಾಮೆ ಅಂಗಿಕಾರ ವಿಚಾರದಲ್ಲಿ ನಾವು ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಲಯ ಹೇಳಿತ್ತು.
ವಿಶ್ವಾಸ ಮತಯಾಚನೆ ವಿಚಾರದಲ್ಲಿ ಸ್ಪೀಕರ್ ನಡೆಯನ್ನು ಆಶಾಭಾವದಿಂದ ಕಾದು ನೋಡುತ್ತೇವೆ ಎಂದಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…