ಏ.೨೧, ೨೨ ಸಿಎಂ ನೇತೃತ್ವದ ತಂಡ ಕಲಬುರಗಿಗೆ ಆಗಮನ

0
22

ಕಲಬುರಗಿ: ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ನೇತೃತ್ವದ ಕೇಂದ್ರ ಸಚಿವ ಪ್ರಹ್ಲಾದ ಜೋಸಿ, ಡಾ. ಅಶ್ವಥ್ ನಾರಾಯಣ, ಸಂಸದ ಭಗವಂತ ಖೂಬಾ, ಲಕ್ಷ್ಮಣ ಸವದಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಕಲಬುರಗಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಿವರಾಜ ಪಾಟೀಲ ರದ್ದೇವಾಡಗಿ ಹೇಳಿದರು.

ಇದನ್ನೂ ಓದಿ: ವಕೀಲರ ಸಂಘದ ಚುನಾವಣೆ ನಡೆಸಲು ಆಗ್ರಹ

Contact Your\'s Advertisement; 9902492681

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಇ ವಿಷಯ ತಿಳಿಸಿದ ಅವರು, ೨೧ರಂದು ಮದ್ಯಾಹ್ನ ೨ ಗಂಟಗೆ ಆಗಮಿಸಿ ಗೀತಾ ನಗರದ ಬ್ರಹ್ಮಕುಮಾರಿ ಆಶ್ರಮದಲ್ಲಿ ಬೀದರ್, ಯಾದಗಿರಿ, ಕಲಬುರಗಿ ಜಿಲ್ಲೆಯ ಪಕ್ಷದ ಕೋರ್ ಕಮೀಟಿ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು. ೨೨ರಂದು ಬೆಳಿಗ್ಗೆ ಪತ್ರಿಕಾಗೊಷ್ಠಿ ನಡೆಸಲಿದ್ದು, ನಂತರ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ. ಇಲ್ಲಿನ ಸಮಸ್ಯೆ, ಸವಾಲು, ಕುಂದು ಕೊರತೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವಿವರಿಸಿದರು.

ಇದೇ ವೇಳೆಯಲ್ಲಿ ಶಾಸಕರ ಪ್ರಗತಿ ಕಾರ್ಯಗಳ ಮೌಲ್ಯಮಾಪನ ಕೂಡ ಅವರು ನಡೆಸಲಿದ್ದಾರೆ. ಇದೇ ವೇಳೆಯಲ್ಲಿ ಈ ಭಾಗದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ, ಸಂತೋಷ ಹಾಗೂ ಬಾಬುರಾವ ಹಾಗರಗುಂಡಗಿ ಇದ್ದರು.

ಇದನ್ನೂ ಓದಿ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ: 43 ಲಕ್ಷ ವಸ್ತು ಹಾನಿ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here