ಕಲಬುರಗಿ: ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಭಾರಿ ಪ್ರಮಾಣದಲ್ಲಿ ಅಕ್ರಮ ನಡೆದಿದ್ದು ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದ 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ರಾಜಾರೋಷವಾಗಿ ಕೊಟ್ಯಾಂತರ ರೂಪಾಯಿ ಅಕ್ರಮ ನಡೆದಿದೆ.ನಗರದ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಿಎಸ್ಐ ಪರೀಕ್ಷೆ ವೇಳೆ ನಡೆದಿದೆ ಎನ್ನಲಾದ ಅಕ್ರಮದಲ್ಲಿ ವಿದ್ಯಾರ್ಥಿಗಳು, ಶಾಲೆಯ ಟೀಚರುಗಳು ಹಾಗೂ ಪ್ರಮುಖವಾಗಿ ಆಡಳಿತ ಮಂಡಳಿಯವರು ಸೇರಿದ್ದಾರೆ.
ಇದನ್ನೂ ಓದಿ: ಶಹಾಬಾದನಲ್ಲಿ ಜಿಲ್ಲಾ ಸಮ್ಮೇಳನ ಮಾಡಲು ಸಹಕಾರ ನೀಡಲು ಸಿದ್ಧ-ಮತ್ತಿಮಡು
ರಾಜ್ಯದಲ್ಲಿ ಕಲಬುರಗಿ ಜಿಲ್ಲೆಯ ಮಾನ ಹರಾಜು ಹಾಕಿದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8 ಜನರನ್ನು ಸಿಐಡಿ ತಂಡ ಬಂಧಿಸಿದ್ದಾರೆ.ಆದರೆ ಪ್ರಮುಖ ಆರೋಪಿಯಾಗಿರುವ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಅವರನ್ನು ಇನ್ನುವರೆಗೆ ಬಂಧಿಸಿಲ್ಲದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಇಷ್ಟೆ ಅಲ್ಲದೆ ಈ ಪ್ರಕರಣದಲ್ಲಿ ಶಾಸಕರು,ಸಚಿವರು ಶಾಮಿಲಾಗಿದ್ದಾರೆ ಎಂದು ಅನುಮಾನಿಸಲಾಗಿದೆ.ಇದನ್ನು ತನಿಖೆ ಮಾಡಬೇಕು. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಡಕ್ಕೆ ಮಣಿಯದೆ ಸೂಕ್ತ ತನಿಖೆ ನಡೆಸುತ್ತಿರುವ ಸಿಐಡಿಗೆ ಸಂಪೂರ್ಣ ಸಹಕಾರ ಕೊಟ್ಟು ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆ ನೀಡಬೇಕು.ಈ ಪ್ರಕರಣ ಯಾವುದೇ ಕಾರಣಕ್ಕೂ ಮುಚ್ಚಿ ಹಾಕಲು ಅವಕಾಶ ನೀಡಬಾರದು ಹಾಗೂ ಎಂದು ಅವರು ಒತ್ತಾಯಿಸಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…