ಸಿಲಿಕಾನ್ ಸಿಟಿ ಬಿಜೆಪಿ ಆಡಳಿತದಲ್ಲಿ ಕಮೀಷನ್ ಸಿಟಿಯಾಗಿದೆ: ಡಾ. ಅಜಯ್ ಸಿಂಗ್ ಲೇವಡಿ

ಕಲಬುರಗಿ: ಭಾರತ ದೇಶದ ಸಿಲಿಕಾನ್ ಸಿಟಿ ಎಂದೇ ಹೆಸರಾಗಿದ್ದ ಬೆಂಗಳೂರು ಇದೀಗ ಬಿಜೆಪಿ ಆಡಳಿತದಲ್ಲಿ ಸಾಲುಸಾಲು ಹಗರಣಗಳಿಂದಾಗಿ ಕಮಿಷನ್ ಸಿಟಿಯಾಗಿ ಪರಿವರ್ತಿತವಾಗಿದೆ. ಕರ್ನಾಟಕ ದೇಶದ ಲಂಚದ ಕೇಂದ್ರಸ್ಥಾನವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಜೇವರ್ಗಿ ಕಾಂಗ್ರೆಸ್ ಶಾಸಕ ಡಾ. ಅಜಯ್ ಸಿಂಗ್ ಲೇವಡಿ ಮಾಡಿದ್ದಾರೆ.

ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಸಿಲಿಕಾನ್ ಕ್ಯಾಪಿಟಲ್, ಸಿಲಿಕಾನ್ ವ್ಯಾಲಿಯಂತಿದ್ದ ಬೆಂಗಳೂರು ಇದೀಗ ಎಲ್ಲರ ಮುಂದೆ ನಗೆಪಾಟಲಿಗಡಾಗಿದೆ. ಶೇ. 40 ಕಮೀಷನ್ ಹಗರಣದಲ್ಲಿ ಗುತ್ತಿಗದಾರ ಸಂತೋಷ ಸಾವಾಯ್ತು, ಈಶ್ವರಪ್ಪ ಬಂಧನವಾಗಿಲ್ಲ. ಕಲಬುರಗಿಲ್ಲಿ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲೇ ಭಾರಿ ಹಗರಣವಾಗಿದೆ. ಮುಕ್ಯ ಆರೋಪಿ ದಿವ್ಯಾ ಹಾಗರಗಿ 10 ದಿನವಾದರೂ ಪೆÇಲೀಸರಿಗೆ ಸಿಗುತ್ತಿಲ್ಲ. ಇವೆಲ್ಲ ನೋಡಿದರೆ ಬಿಜೆಪಿ ಆಡಳಿತದಲ್ಲಿ ಹಗರಣಗಳೇ ಹೆಚ್ಚುತ್ತಿವೆ ಎಂದು ಡಾ. ಸಿಂಗ್ ದೂರಿದರು.

ಇದನ್ನೂ ಓದಿ: ಸರಕಾರದ ಮಹಿಳಾ ಕೇಂದ್ರಿತ ನೀತಿಗಳಿಗೆ ಡಾ ಅಂಬೇಡ್ಕರ್ ಕಾರಣ : ಬಡಿಗೇರ್

ಮಠ, ಮಂದಿರಗಳಿಗೂ ಅನುದಾನ ನೀಡುವ ವಿಚಾರದಲ್ಲಿ ಕಮೀಷನ್ ಪಡೆಯುತ್ತಿದ್ದಾರೆಂಬ ದಿಂಗಾಲೇಶ್ವರ ಶ್ರೀಗಳ ಆರೋಪವನ್ನು  ನೋಡಿದರೆ ಬಿಜೆಪಿಯರು ಮಠಗಳಿಗೂ ಬಿಡುತ್ತಿಲ್ಲವಲ್ಲ ಎಂದು ನೋವಾಗುತ್ತಿದೆ. ಈ ಪರಿಯಲ್ಲಿ ಲಂಚಗುಳಿತನ, ಭ್ರಷ್ಟರ ಸರಕಾರ ಬಿಜೆಪಿಯದ್ದಾಗಿರೋದು ಕರುನಾಡಿನ ಪಾಲಿಗೆ ಶಾಪವಾದಂತಾಗಿದೆ ಎಂದು ಡಾ. ಅಜಯ್ ಸಿಂಗ್ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಜನ ಬಿಜೆಪಿ ಸರ್ಕಾರದಲ್ಲಿನ ಹಗರಣಗಳನ್ನು ನೋಡುತ್ತಿದ್ದಾರೆ. ನೇಮಕಾತಿಯಲ್ಲೂ ಹಗರಣ ನಡೆಯೋದು ನೋಡಿದರೆ ಜನ ಅದ್ಯಾವಾಗ ಬಿಜೆಪಿ ಸರ್ಕಾರವನ್ನ ಕಿತ್ತಿ ಎಸೆಯಬೇಕು ಎಂಬುದನ್ನು ಕಾಯುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ವೆಲ್ಲ ಸಂಗತಿಗಳನ್ನು ಇಟ್ಟುಕೊಂಡು ನಿರಂತರ ಹೋರಾಟ ಮಾಡುತ್ತದೆ ಎಂದೂ ಡಾ. ಅಜಯ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷಕರ ಅಸಲಿ ನಾಯಕ, ಈಗ ಸಭಾಪತಿಯಾಗಿರುವ ಬಸವರಾಜ್ ಹೊರಟ್ಟಿ ನಡೆದು ಬಂದ ದಾರಿ

ಕಲಬುರಗಿಯಲ್ಲಿ ಸ್ಫೋಟಗೊಂಡಿರುವ ಪಿಸ್‍ಐ ಹಗರಣದಲ್ಲಿ ಮುಖಂಡೆ ದಿವ್ಯಾ ಹೆಸರು ಬಯಲಿಗೆ ಬಂದಿದೆ. ಇವರು 10 ದಿನದಿಂದ ನಾಪತ್ತೆಯಾಗಿದ್ದಾರೆ. ಇವರೆಲ್ಲಿ ಎಂಬುದು ಪೆÇಲೀಸರಿಗೆ ಗೊತ್ತಿಲ್ಲವೆ? ಅವರ ರಕ್ಷಣೆ ಮಾಡಲಾಗುತ್ತಿದೆ. ಬಿಜೆಪಿ ಪ್ರಮುಖರಿಗೆ ಆಪ್ತರಾಗಿರುವ ಕಾರಣದಿಂದಾಗಿ ದಿವ್ಯರನ್ನು ರಕ್ಷಿಸಲಾಗುತ್ತಿದೆ, ಇದರಿಂದಲೇ ಹಗರಣಗಳು ಹೆಚ್ಚುತ್ತಿವೆ ಎಂದು ಡಾ. ಅಜಯ್ ಸಿಂಗ್ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಬಿಜೆಪಿಯ ಇಂತಹ ಧೋರಣೆಗಳು ಪ್ರಾಮಾಣಿಕವಾಗಿ ಪಿಎಸ್‍ಐ ಪರೀಕ್ಷೆ ಬರೆದವರ ಪಾಲಿಗೆ ಉರುಳುಗಾತ್ತಿವೆ. ಇನ್ನಾದರೂ ತಕ್ಷಣ ತಪ್ಪಿತಸ್ಥರನ್ನೆಲ್ಲ ಬಂಧಿಸಿ ವಿಚಾರಣೆ ನಡೆಸಿ  ಪ3ಆಮಾಣಿಕವಾಗಿ ಪರೀಕ್ಷೆ ಬರೆದವರಿಗೆ ನ್ಯಾಯ ಕೊಡಬೇಕು ಎಂದು ಡಾ. ಅಜಯ್ ಸಿಂಗ್ ಆಗ್ರಹಿಸಿದ್ದರೆ.

ಇದನ್ನೂ ಓದಿ: ಕಲಬುರಗಿ ಪೇಟೆ ಧಾರಣೆ

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420