ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪದಾಧಿಕಾರಿಗಳ ನೇಮಕ

0
70

ಸುರಪುರ:ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ತಾಲೂಕಿನ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ.

ಈ ಕುರಿತು ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರದೀಪ ಕಂಕಣವಾಡಿಯವರ ಮಾರ್ಗದರ್ಶನದಲ್ಲಿ ನೂತನ ಪದಾಧಿಕಾರಿಗಳ ನೇಮಕಗೊಳಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುರಡ್ಡಿ ಅಮ್ಮಾಪುರ ತಿಳಿಸಿದ್ದಾರೆ.

Contact Your\'s Advertisement; 9902492681

ಇದನ್ನೂ ಓದಿ: ಕಲಬುರಗಿಯಲ್ಲಿ ಸಿಎಂ ವಾಹನಕ್ಕೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಾಕರ್ತರ ಬಂಧನ

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ತಾಲೂಕು ಅಧ್ಯಕ್ಷರನ್ನಾಗಿ ಸಂಘಟಕ ಮಲ್ಲು ಬಾದ್ಯಾಪುರ ಅವರನ್ನು ಮತ್ತು ಸುರಪುರ ತಾಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಶರಣು ಬಳಿ ಜಾಲಿಬೆಂಚಿಯವರನ್ನು ಹಾಗೂ ಸುರಪುರ ನಗರ ಘಟಕದ ಅಧ್ಯಕ್ಷರನ್ನಾಗಿ ಸೂಗು ಸಜ್ಜನ್ ಅವರನ್ನು ನೇಮಕಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೆ ಇನ್ನೂ ಯಾದಗಿರಿ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಹೋಬಳಿ ಮತ್ತು ಗ್ರಾಮಗಳಲ್ಲಿಯೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಶಾಖೆಗಳನ್ನು ಆರಂಭಿಸಲಿದ್ದು ಸೂಕ್ತ ಅಭ್ಯಾರ್ಥಿಗಳನ್ನು ನೇಮಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪಿ.ಎಸ್.ಐ.ನೇಮಕಾತಿ ಅಕ್ರಮ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here