ಕಲಬುರಗಿ: ಯುಗಮಾನೋತ್ಸವ ಜಿಲ್ಲಾ ಸಮಿತಿ ವತಿಯಿಂದ ಏ.೨೨ ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಹಾಗೂ ರಾಜ್ಯ ಸರಕಾರಕ್ಕೆ ಅಭಿನಂದನಾ ಸಮಾರಂಭ ಬೆಳಿಗ್ಗೆ ೮:೦೦ ಗಂಟೆಗೆ ಚೌಕ್ ಪೊಲೀಸ್ ಠಾಣೆಯಿಂದ ಕಳಸ ಕುಂಭ ವೀರಗಾಸೆ ಕುಂಭಮೇಳ ಡೊಳ್ಳು ಭಜನೆ ಎಲ್ಲಾ ತರಹದ ತಂಡಗಳೊಂದಿಗೆ ವಿವಿಧ ವಾದ್ಯಗಳ ಜೊತೆಗೆ ನಗರದ ಸಾರ್ವಜನಿಕ ಉದ್ಯಾನ ವರೆಗೆ ಜರಗಲಿದೆ ಎಂದು ಜಿಲ್ಲಾ ಜಯಂತೋತ್ಸವ ಸಮಿತಿಯ ಮಾಧ್ಯಮ ವಕ್ತಾರರಾದ ಶ್ರೀ ಸಂಪತ್ ಜೆ ಹಿರೇಮಠ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಚೈತ್ರ ಗೌರಿ ಹುಣ್ಣಿಮೆ ನಿಮಿತ್ತ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ
ಈ ಕಾರ್ಯಕ್ರಮಕ್ಕೆ ದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ೯ ಅಡಿ ಎತ್ತರದ ಭವ್ಯ ಮೂರ್ತಿ ಮೆರವಣಿಗೆಗೆ ಶ್ರೀ ೧೦೦೮ ಜಗದ್ಗುರು ಡಾ. ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯರ ಭಗವತ್ ಪಾದಂಗಳ ಶ್ರೀ ಪೀಠ ಬಾಳೆಹೊನ್ನೂರು, ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ ೯ನೇ ಪೀಠಾಧಿಪತಿಗಳಾದ ಚಿ. ದೊಡ್ಡಪ್ಪ ಅಪ್ಪ, ಮರಮಪೂಜ್ಯ ಶ್ರೀ ಹವಾ ಮಲ್ಲಿನಾಥ ಮಹಾರಾಜ್ ನಿರಗುಡಿ ಇವರುಗಳ ಅಮೃತ ಹಸ್ತದಿಂದ ಚಾಲನೆ ನೀಡುವರು.
ಮಧ್ಯಾಹ್ನ ೧೨:೦೦ ಗಂಟೆಗೆ ಸಾರ್ವಜನಿಕ ಉದ್ಯಾನವನದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತು ಸರ್ಕಾರದ ಎಲ್ಲಾ ಸಚಿವರಿಗೂ ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿಯಿಂದ ಸನ್ಮಾನ ಸಮಾರಂಭದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಅವರು ಅಧ್ಯಕ್ಷತೆ ವಹಿಸುವರು. ಹಾಗೂ ರಾಜಕಾರಿಣಿ ಮುಖಂಡರು, ಸಮಿತಿಯ ಕಾರ್ಯಕರ್ತರು, ನಾಗರಿಕರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲಗೋಳಬೇಕೆಂದು ಜಿಲ್ಲಾ ಜಯಂತೋತ್ಸವ ಸಮಿತಿಯ ಮಾಧ್ಯಮ ವಕ್ತಾರರಾದ ಸಂಪತ್ ಜೆ ಹಿರೇಮಠ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ತಾಲೂಕುಗಳ ಅಭಿವೃದ್ಧಿಗೆ ಒತ್ತಾಯಿಸಿ ಚನ್ನವೀರ ಗೌರೆ ಸಿಎಂಗೆ ಮನವಿ
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…