ಬೆಂಗಳೂರು: ಇಂದಿನ ವರೆಗೆ 14 ತಿಂಗಳಿನಿಂದ ಜಾರಿಯಲ್ಲಿದ್ದ ಮೈತ್ರಿ ಪಕ್ಷದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ದೋಸ್ತಿ ಸರ್ಕಾರ ಸದನದ ವಿಶ್ವಾಸ ಕಳೆದುಕೊಳ್ಳುವ ಮೂಲಕ 18 ದಿನಗಳಿಂದ ನಡೆಯುತ್ತಿರುವ ರಾಜಕೀಯ ಹೈಡ್ರಾಮಕ್ಕೆ ತೆರೆ ಬಿದ್ದಿತು.
ಮೊದಲು ದೋಸ್ತಿ ಸರ್ಕಾರದ ಪರವಾಗಿ ಇದ್ದವರ ಲೆಕ್ಕ ಮಾಡಲಾಯಿತು. ಇದಾದ ಮೇಲೆ ವಿಶ್ವಾಸ ಮತಕ್ಕೆ ವಿರುದ್ಧವಾಗಿ ಇದ್ದವರ ಲೆಕ್ಕ ಹಾಕಲಾಯಿತು. ಎಲ್ಲರ ಹೆಸರನ್ನು ಅಧಿಕಾರಿಗಳು ಬರೆದುಕೊಂಡು ಲೆಕ್ಕ ಹಾಕಿದರು.
ಸದನದಲ್ಲಿ ಹಾಜರಿದ್ದವರು ಒಟ್ಟು ಸದಸ್ಯರು : 204
ಮೈತ್ರಿ ಸರಕಾದ ಪರ ಮತ : 99
ಬಿಜೆಪಿ ಪರ ಬಿದ್ದ ಮತಗಳು: 105
ಗೈರಾದವರು 2 ಪಕ್ಷೇತರರು ಸೇರಿ 20
ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯ ವೇಳೆ ಒಟ್ಟು 20 ಶಾಸಕರು ಗೈರು ಹಾಜರಿ ಹಾಕಿದ್ದರು. ಕಾಂಗ್ರೆಸ್ 14, ಜೆಡಿಎಸ್ನ 3 ಶಾಸಕರು ಹಾಗೂ ಇಬ್ಬರು ಪಕ್ಷೇತರ ಶಾಸಕರ ಜೊತೆ ಬಿಎಸ್ಪಿಯ ಎನ್ ಮಹೇಶ್ ಗೈರ ಹಾಜರಾಗಿದ್ದರು. ಇಂದು ದೋಸ್ತಿ ಪಕ್ಷದ ಒಟ್ಟು 99 ಶಾಸಕರು ಹಾಜರಾಗಿದ್ದರೆ ಬಿಜೆಪಿಯ 105 ಶಾಸಕರು ಹಾಜರಾಗಿದ್ದರು.
ವಿಶ್ವಾಸಮತಯಾಚನೆ ವೇಳೆ ಸರ್ಕಾರದ ಪರವಾಗಿ 99 ಮತಗಳು ಬಿದ್ದರೆ ವಿರುದ್ಧವಾಗಿ 105 ಮತಗಳು ಬಿದ್ದವು. ಈ ಮೂಲಕ ಸಿಎಂ ಸಲ್ಲಿಸಿದ್ದ ವಿಶ್ವಾಸ ಮತಯಾಚನೆ ಬಿದ್ದು ಹೋಗಿದೆ.
ನಂತರ ಸಿಎಂ ಕುಮಾರಸ್ವಾಮಿ ರಾಜಭವನಕ್ಕೆ ತೆರಳಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಶಾಸರಕು ಮತ್ತು ಕಾಂಗ್ರೆಸ್ ಶಾಸಕರು ಜೊತೆಗೆ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…