ಕಲಬುರಗಿಯಲ್ಲಿ ಆಮ್ ಆದ್ಮಿ ಕಾರ್ಯಕರ್ತರು ಪೊಲೀಸರ ವಶಕ್ಕೆ

0
60

ಕಲಬುರಗಿ: ಪಿಎಸ್ಐ ನೇಮಕಾತಿಯಲ್ಲಿ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆಪ್ ಕಾರ್ಯಕರ್ತರು ಸಿಎಂ ಕಾರು ಮುತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಆಪ್ ಕಾರ್ಯಕರ್ತರನ್ನು ಬಂಧಿಸಿದರು.

ಶುಕ್ರವಾರ ನಗರದ ಎಸ್.ಎಂ ಪಂಡಿತ್ ರಂಗಮಂದಿರ ಹತ್ತಿರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪಿಎಸ್ಐ ನೇಮಕಾತಿಯಲ್ಲಿ ಪ್ರಮುಖ ಆರೋಪಿಗಳಾಗಿರುವ ಬಿಜೆಪಿ ಮುಖಂಡೆ ದಿವ್ಯ ಹಾಗರಗಿ ಮತ್ತು ಅವರ ಗ್ಯಾಂಗ್ ನ್ನು ಬಂಧಿಸಬೇಕೆಂದು ಒತ್ತಾಯಿಸಿ ಸಿಎಂ ಕಾರು ಮುತ್ತಿಗೆ ಹಾಕಲು ಯತ್ನಿಸಿದರು.

Contact Your\'s Advertisement; 9902492681

ಇದನ್ನೂ ಓದಿ: 2.5 ಲಕ್ಷ ಯುವ ಜನತೆಗೆ ತರಬೇತಿ ನೀಡುವ ಗುರಿ: ಬಸವರಾಜ ಬೊಮ್ಮಾಯಿ

ಈ ವೇಳೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಆಮ್ ಆದ್ಮಿ ಕಾರ್ಯಕರ್ತರನ್ನು ಪೊಲೀಸ್ ಬಂಧಿಸುವ ಮೂಲಕ ಸಿಎಂ ಕಾರ್ಯಕ್ರಮ ತೊಂದರೆ ಆಗದಂತೆ ನೊಡಿಕೊಂಡರು. ದಿವ್ಯ ಹಾಗರಗಿ ಬಂಧನಕ್ಕೆ ಆಗ್ರಹಿಸಿ ಗುರುವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಕಾರು ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ 50 ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದರು.

ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾಡ ಹೊರಟರೆ‌ ಜನರ ಶವಗಳ ಮೇಲೆ ನಡೆದುಕೊಂಡು ಹೋಗಬೇಕಾಗುತ್ತದ: ಪ್ರಿಯಾಂಕ್ ಖರ್ಗೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here