ಕಲಬುರಗಿ; ಹರ್ಷಾ ಕನ್ಸಟ್ರಕ್ಷನ್ ಅವರು ಬಾಲ ಕಾರ್ಮಿಕರಿಗೆ ದುಡಿಸಿಕೊಳ್ಳುತ್ತಿರುವುದು ಖಂಡನೀಯ ಕಲಬುರಗಿ ಮಹಾನಗರದ ಮಧ್ಯಭಾಗದಲ್ಲಿ ನಿರ್ಮಾಣವಾಗುತ್ತಿರುವ ಜಯದೇವ ಆಸ್ಪತ್ರೆಯ ಕಟ್ಟಡ ಕೆಲಸದಲ್ಲಿ ಬಾಲ ಕಾರ್ಮಿಕರಿಗೆ ದುಡಿಸಿಕೊಳ್ಳುತ್ತಿರುವುದು ಖಂಡನೀಯವಾಗಿದೆ ಮತ್ತು ಕಾರ್ಮಿಕ ನಿಯಮಕ್ಕೆ ವಿರುದ್ಧವಾಗಿದೆ.
ಈ ಬಗ್ಗೆ ಸರಕಾರ ತಕ್ಷಣ ಗಂಭೀರವಗಿ ಪರಿಗಣಿಸಿ ಸಂಬಂಧಪಟ್ಟವರ ಮೇಲೆ ಶಿಸ್ತಿನ ಕ್ರಮ ಕೈಗೊಳಬೇಕೆಂದು ನವಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಭೀಮರಾಯ ಎಂ.ಕಂದಳ್ಳಿ ಅವರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ ಮುಖ್ಯಾಂಶಗಳು
ಹರ್ಷಾ ಕನ್ಸಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಇವರ ಗುತ್ತಿಗೆಯ ಅಡಿಯಲ್ಲಿ ನಡೆಯುತ್ತಿರುವ ಜಯದೇವ ಆಸ್ಪತ್ರೆಯ ಕಟ್ಟಡದ ಕೆಲಸದಲ್ಲಿ ಬಾಲ ಕಾರ್ಮಿಕರನ್ನು ಉಪಯೋಗಿಸಿಕೊಳ್ಳುತ್ತಿರುವುದಷ್ಟೇ ಅಲ್ಲದೇ, ಕೆಲಸದ ಸಂದರ್ಭದಲ್ಲಿ ಕಾರ್ಮಿಕರಿಗೆ ಒದಗಿಸಬೇಕಾದ ಸುರಕ್ಷತಾ ಸಾಮಗ್ರಿಗಳು, ಉಪಕರಣಗಳು ನೀಡದೇ ರಾಜಾರೋಷವಾಗಿ ಕಾರ್ಮಿಕ ನಿಯಮಗಳನ್ನು ಉಲ್ಲಂಘಿಸಿ ಕೆಲಸ ನಡೆಸುತ್ತಿದ್ದಾರೆ. ಸದರಿ ಈವಿಷಯದ ಬಗ್ಗೆ ಸರಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಶಿಸ್ತಿನ ಕ್ರಮ ಕೈಗೊಳ್ಳಬೇಕೆಂದು ಭೀಮರಾಯ ಕಂದಳ್ಳಿ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…