ಬಿಸಿ ಬಿಸಿ ಸುದ್ದಿ

ಮಹಾಲಕ್ಷ್ಮೀ ದೇವಿ ರಥೋತ್ಸವ 29ಕ್ಕೆ

ಕಲಬುರಗಿ: ತಾಲೂಕಿನ ನದಿಸಿಣ್ಣೂರ-ಫಿರೋಜಾಬಾದ್ ಸೀಮಾಂತರದ ಶ್ರೀ ಮಹಾಲಕ್ಷ್ಮೀ ಮಹಾಶಕ್ತಿ ಸಂಸ್ಥಾನಮಠದಲ್ಲಿ ದಿ. 29 ರಂದು ಸಂಜೆ 5 ಗಂಟೆಗೆ ಮಹಾಲಕ್ಷ್ಮೀ ದೇವಿ ರಥೋತ್ಸವ ನೆರವೇರಲಿದೆ ಎಂದು ಹೂಗಾರ ಸಮಾಜದ ರಾಜ್ಯ ಉಪಾಧ್ಯಕ್ಷ, ದಾಲ್ ಅಸೋಸಿಯೇಷನ್ ನಿರ್ದೇಶಕ ಶಿವಶರಣಪ್ಪ ಹೂಗಾರ, ಶಿಕ್ಷಕರಾದ ಸಿದ್ದಣ್ಣ ಹೂಗಾರ, ಸಂಬಣ್ಣ ಹೂಗಾರ, ನಿವೃತ್ತ ಮುಖ್ಯಗುರು ರಮೇಶ ಪೂಜಾರಿ ತಿಳಿಸಿದ್ದಾರೆ.

ಇದಕ್ಕೂ ಮುನ್ನಾ 1008ರ ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರ ಅಮೃತಹಸ್ತದಿಂದ ಪಲ್ಲಕ್ಕಿ ಉತ್ಸವ, ಹೂಗಾರ ಮಾದಯ್ಯ ಶರಣರ ಮೂರ್ತಿ ಸ್ಥಾಪನೆ, ಶ್ರೀ ಮಹಾಲಕ್ಷ್ಮೀ ದೇವಿ ಭಕ್ತಿ ಕುಸುಮ ಧ್ವನಿ ಸುರಳಿ ಬಿಡುಗಡೆ, ಮಹಾಶಕ್ತಿ ಕಲ್ಯಾಣ ಮಂಟಪದ ಅಡಿಗಲ್ಲು ಸಮಾರಂಭ ಹಾಗೂ ಐದನೇ ವರ್ಷದ ಜಾತ್ರಾಮಹೋತ್ಸವ, ರಥೋತ್ಸವ ಅತಿ ವಿಜೃಂಭಣೆಯಿಂದ ಜರುಗಲಿವೆ. ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು, ಶ್ರೀನಿವಾಸ ಸರಡಗಿಯ ರೇವಣಸಿದ್ದ ಶಿವಾಚಾರ್ಯರು, ಬಬಲಾದ ಶಿವಮೂರ್ತಿ ಶಿವಾಚಾರ್ಯರು, ತೋನಸನಹಳ್ಳಿಯ ರೇವಣಸಿದ್ದ ಚರಂತೇಶ್ವರ ಶಿವಾಚಾರ್ಯರು, ದಂಡಗುಂಡದ ಸಂಗನಬಸವ ಶಿವಾಚಾರ್ಯರು, ಚಿಂಚೋಳಿಯ ಶರಣಬಸವ ಶರಣರು ಸಮ್ಮುಖವಹಿಸುವರು. ಶ್ರೀಮಠದ ಪೂಜ್ಯ ಗುರುರಾಜೇಂದ್ರ ಶಿವಯೋಗಿಗಳು ನೇತೃತ್ವವಹಿಸುವರು.

ನಾಳೆ ಗುಲ್ಬರ್ಗಾ ವಿವಿಯ 39 ಮತ್ತು 40ನೇ ಘಟಿಕೋತ್ಸವ

ನಂತರ ಸಂಜೆ 6 ಗಂಟೆಗೆ ಧರ್ಮಸಭೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಜ್ಯೋತಿ ಬೆಳಗಿಸುವರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಡಾ. ಉಮೇಶ ಜಾಧವ ಕಲ್ಯಾಣ ಮಂಟಪ ಅಡಿಗಲ್ಲು ಸಮಾರಂಭ ಉದ್ಘಾಟಿಸುವರು. ಕೆಕೆಆರ್‍ಡಿಬಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ್ ರೇವೂರ್ ಕಲ್ಯಾಣ ಮಂಟಪದ ಅಡಿಗಲ್ಲು ಸಮಾರಂಭ ಉದ್ಘಾಟಿಸಲಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್ ಧ್ವನಿಸುರುಳಿ ಬಿಡುಗಡೆಗೊಳಿಸುವರು. ಶಾಸಕ ಎಂ. ವೈ. ಪಾಟೀಲ್ ಅಧ್ಯಕ್ಷತೆವಹಿಸುವರು. ಶಾಸಕಿ ಖನಿಜಾ ಫಾತೀಮಾ ಉದ್ಘಾಟಿಸುವರು. ಶಾಸಕ ಡಾ. ಅಜಯಸಿಂಗ್ ನೇತೃತ್ವವಹಿಸುವರು. ಎಂಎಲ್‍ಸಿ ಸುನೀಲ್ ವಲ್ಲ್ಯಾಪುರೆ, ಜೆಡಿಎಸ್ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳಲಿದ್ದಾರೆ.

ಬೇಸಿಗೆ ರಜೆ ಮೋಜು ಮಜಾ ಸಾಕು, ಮಕ್ಕಳೆ ಮೇ ೧೫ಕ್ಕೆ ನಿಮ್ಮ ಶಾಲೆ ಶುರು

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago