ಕಲಬುರಗಿ :ಇಲ್ಲಿನ ಹುಮಾನಬಾದ್ ರಸ್ತೆಯ ಗಣೇಶ ನಗರದಲ್ಲಿರುವ ಪ್ರತಿಷ್ಠಿತ ಮಣೂರ ಮಲ್ಟಿಸ್ಪೆμÁಲಿಟಿ ಆಸ್ಪತ್ರೆಯಲ್ಲಿ ಬೀದಿ ಬದಿ ವ್ಯಾಪಾರಿಗಳು, ಚಮ್ಮಾರರು, ತರಕಾರಿ ಮಾರಾಟಗಾರರಿಗೆ, ಹೂವು, ಹಣ್ಣು ವ್ಯಾಪಾರಸ್ಥರಿಗಾಗಿ ನೆರಳುವ ಕಲ್ಪಿಸುವ 200 ಕೊಡೆಗಳನ್ನು ಶಾಸಕಿ ಖನೀಜ್ ಫಾತಿಮಾ ವಿತರಿಸಿದರು.
ಆರೋಗ್ಯ ಸಂಬಂಧಿ ಕೆಲಸ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿ ತೊಡಗಿರುವ ಡಾ. ಫಾರುಖ ಅಹ್ಮದ್ ಅವಿರತ ಶ್ರಮವಹಿಸಿದ್ದಾರೆ. ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವ ಮಣೂರ ಆಸ್ಪತ್ರೆಯ ವೈದ್ಯರ ತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.
ನೇತೃತ್ವವಹಿಸಿದ್ದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವೈದ್ಯ ಡಾ. ಫಾರುಖ ಅಹ್ಮದ್ ಮಣೂರ ಮಾತನಾಡಿ, ಬಿಸಿಲಿನ ಬೇಗೆಯಿಂದ ಪಾರಾಗಲು ಹಣ್ಣು ಹಂಪಲು ಮೊರೆ ಹೋಗಬೇಕು. ಯಾವುದಕ್ಕೆ ಕಾರಣಕ್ಕೂ ಸಾರ್ವಜನಿಕರು ಪ್ರಖರ ಬಿಸಿಲಿಗೆ ಮನೆಯಿಂದ ಹೊರಗೆ ಬರಬಾರದು. ಕಲ್ಲಂಗಡಿ, ಕರ್ಬೂಜಾ, ಕಬ್ಬಿನ ಹಾಲು, ಮಜ್ಜಿಗೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಂಬ್ಬದ್ಧಿವರ್ಗದವರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…