ಆಳಂದ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

0
75
ಆಳಂದ: ರಾಜ್ಯದ ಸಮ್ಮಿಶ್ರ ಸರ್ಕಾರ ಪತನಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಆಚರಿಸಿದ ವಿಜಯೋತ್ಸವದಲ್ಲಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ಮುಖಂಡ ಅಶೋಕ ಗುತ್ತೇದಾರ, ಮಹೇಶ ಗೌಳಿ ಅನೇಕರು ಪಾಲ್ಗೊಂಡಿದ್ದರು.

ಆಳಂದ: ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಮಂಗಳವಾರ ಪತನಗೊಂಡ ಸಂಭ್ರಮದಲ್ಲಿ ಪಟ್ಟಣದ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ ನೇತೃತ್ವದಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಸೇರಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

ಸರ್ಕಾರದ ಪತನವು ಪಕ್ಷದ ಕೋಟಿ, ಕೋಟಿ ನಿಸ್ವಾರ್ಥ ಕಾರ್ಯಕರ್ತರಿಗೆ ಜಯವಾಗಿದೆ. ಕರುನಾಡಿನಲ್ಲಿ ಕೇಸರಿಯುಗ ಪ್ರಾರಂಭಗೊಳ್ಳಲಿದೆ ಎಂದರು. ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿ, ಪ್ರಧಾನಿ ನರೇಂದ್ರ ಮೋದಿ, ಅಮಿತ ಶಾ, ಪಕ್ಷದ ರಾಜ್ಯಾಧ್ಯಕ್ಷ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶಾಸಕ ಸುಭಾಷ ಗುತ್ತೇದಾರ ಸೇರಿ ನಾಯಕರ ಪರ ಜಯಘೋಷ ಕೂಗಿದರು.

Contact Your\'s Advertisement; 9902492681

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಜನಪರ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದ್ದವು. ಈಗ ಮತ್ತೆ ಕೇಸರಿ ಕಹಳೆಯ ಮೂಲಕ ಬಿಎಸ್‌ವೈ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಆಡಳಿತ ಮೂಲಕ ಜನಪರ ಕೆಲಸಗಳು ನಡೆಯಲಿವೆ ಎಂದರು.

ಪಕ್ಷದ ಮುಖಂಡ ಅಶೋಕ ಗುತ್ತೇದಾರ, ಪ್ರಧಾನ ಕಾರ್ಯದರ್ಶಿ ಮಹೇಶ ಗೌಳಿ, ತಾಲೂಕು ಪಂಚಾಯತ ಉಪಾಧ್ಯಕ್ಷ ಗುರುನಾಥ ಪಾಟೀಲ, ತಡಕಲ್ ಗ್ರಾಪಂ ಅಧ್ಯಕ್ಷ ಶಿವುಪುತ್ರಪ್ಪ ಬೆಳ್ಳೆ, ಪುರಸಭೆ ಸದಸ್ಯ ಈರಣ್ಣಾ ಹತ್ತರಕಿ, ಪ್ರಭಾಕರ್ ಘನಾತೆ, ಬಾಬು ಹದರಿ, ಹಿಂದುಳಿದ ಘಟಕದ ಅಧ್ಯಕ್ಷ ಸಿದ್ದು ಪೂಜಾರಿ, ಶ್ರೀಶೈಲ ಖಜೂರಿ, ಸೋಮು ಹತ್ತರಕಿ, ರಾಜಕುಮಾರ ಷಣ್ಮೂಖ ಮತ್ತಿತರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here