ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಯಿ ಇರುವ ಹುದ್ದೆಗಳನ್ನು ತುಂಬದೆ ಸರ್ಕಾರ ಈ ಭಾಗದ ಯುವಕರಿಗೆ ಪದೇ ಪದೇ ಅನ್ಯಾಯವೆಸಗುತ್ತಿದೆ ಎಂದು ಮಾಜಿ ಸಚಿವರಾದ, ಶಾಸಕರಾದ, ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಬರೆದುಕೊಂಡಿರುವ ಅವರು ಕಲ್ಯಾಣ ಕರ್ನಾಟಕದಲ್ಲಿ ಕಲ್ಯಾಣವೇ ಇಲ್ಲದಾಗಿದೆ. ಈ ಬಿಜೆಪಿ ಸರ್ಕಾರದಲ್ಲಿ ಹುದ್ದೆಗಳು ಖಾಲಿಯಿದ್ದರೂ ಸಹ ಭರ್ತಿ ಮಾಡದೇ ನಮ್ಮ ಭಾಗದ ಯುವಕರಿಗೆ ಅನ್ಯಾಯವೆಸಗುತ್ತಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸೌಹಾರ್ದ ಬಸವ, ರಂಜಾನ್, ಅಂಬೇಡ್ಕರ್ ಜಯಂತಿ ಆಚರಣೆ
ಕಲ್ಯಾಣ ಕರ್ನಾಟಕ ವಿಶೇಷ ಸ್ಥಾನಮಾನ ಹೊಂದಿದ್ದರೂ ಕೂಡಾ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಕಲ್ಯಾಣ ಕರ್ನಾಣಟಕದಲ್ಲಿರುವ ಒಟ್ಟು ಹುದ್ದೆಗಳು – 32,252. ಇವುಗಳಲ್ಲಿ ನೇಮಕಾತಿಯಾಗಿರುವ ಹುದ್ದೆಗಳು – 13,711 ಹಾಗೂ ಖಾಲಿ ಇರುವ ಹುದ್ದೆಗಳು- 18,549 ಹುದ್ದೆಗಳು ಹಾಗೂ ನೇಮಕಾತಿಗೆ ಪ್ರಸ್ತಾವನೆ ಕಳಿಸಿದ್ದು – 6,204 ಹುದ್ದೆಗಳು ಮುಂಭಡ್ತಿಯಲ್ಲಿನ ಸ್ಥಿತಿ ಹುದ್ದೆಗಳು -24,197, ಮುಂಭಡ್ತಿಯಾಗಿರುವ ಹುದ್ದೆಗಳು- 14043 ಹಾಗೂ ಖಾಲಿ ಇರುವ ಹುದ್ದೆಗಳು 10,154 ಹುದ್ದೆಗಳು ಎಂದು ಖರ್ಗೆ ಅವರು ವಿವರಿಸಿದ್ದಾರೆ.
ಇದನ್ನೂ ಓದಿ: ಸ್ಫೋಟಕ ಅಂಶ ಬಯಲು ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…