ಮಾತೃಭಾಷೆ ಅನ್ನದ ಭಾಷೆ- ಡಾ. ರಾಜಶೇಖರ ಮಾಂಗ

ಆಳಂದ: ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯು ಅನ್ನದ ಭಾಷೆಯಾಗಿದೆ ಎಂದು ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಯ ಪ್ರಾಚಾರ್ಯ ಡಾ. ರಾಜಶೇಖರ ಮಾಂಗ ಅಭಿಪ್ರಾಯಪಟ್ಟರು.

ಪಟ್ಟಣದ ಪೂಜ್ಯ ರಾಜಶೇಖರ ಮಹಾಸ್ವಾಮೀಜಿ ಬಿ ಎಡ್ ಕಾಲೇಜಿನಲ್ಲಿ ಗುರುವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ನೇ ಸಂಸ್ಥಾಪನಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಕನ್ನಡದ ಮನಸ್ಸುಗಳ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಬೀರಿದ ಪ್ರಭಾವ ಕುರಿತು ಉಪನ್ಯಾಸ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ರಚನೆಯ ಹಿಂದೆ ದೂರದೃಷ್ಟಿ ಇತ್ತು ಹೀಗಾಗಿಯೇ ಅದು ಇಂದಿಗೂ ತನ್ನ ಸ್ವಂತಿಕೆಯನ್ನು ಉಳಿಸಿಕೊಂಡು ಬಂದಿದೆ ಅಲ್ಲದೇ ಸಾಹಿತ್ಯ, ಸಂಸ್ಕೃತಿಯ ಜೊತೆ ಜೊತೆಗೆ ಬೆಳೆದುಕೊಂಡು ಬಂದಿದೆ ಈ ನಿಟ್ಟಿನಲ್ಲಿ ಪರಿಷತ್ತಿನ ಅಧ್ಯಕ್ಷರುಗಳ ಪಾತ್ರ ಮಹತ್ವದ್ದಾಗಿದೆ ಎಂದರು.

ಇದನ್ನೂ ಓದಿ: ಸಂಸದ ಡಾ.ಉಮೇಶ ಜಾಧವ್‌ಗೆ ಗಡುವು

ವಚನ, ದಾಸ, ತತ್ವಪದ ಸಾಹಿತ್ಯ ಕನ್ನಡ ಸಾಹಿತ್ಯವನ್ನು ಉತ್ತುಂಗಕ್ಕೆ ಕರೆದುಕೊಂಡು ಹೋಗಿವೆ ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ಜನಮಾನಸಕ್ಕೆ ಮತ್ತು ಮನೆ ಮನೆಗೆ ಮುಟ್ಟಿಸುವ ಕೆಲಸವನ್ನು ಅನುಚಾನವಾಗಿ ಶತಮಾನಗಳಿಂದ ಮಾಡಿಕೊಂಡು ಬರುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ನಿರಂಜನ ಮಹಾಸ್ವಾಮೀಜಿ ಮಾತನಾಡಿ, ಆಡು ಭಾಷೆಯಾಗಿದ್ದ ಕನ್ನಡ ಭಾಷೆಯನ್ನು ದೈವ ಭಾಷೆಯಾಗಿ ಪರಿವರ್ತಿಸಿದ ಕೀರ್ತಿ ವಚನಕಾರರರಿಗೆ ಸಲ್ಲುತ್ತದೆ. ವಚನ ಸಾಹಿತ್ಯ ಕನ್ನಡ ನಾಡಿನಲ್ಲಿ ಜನ್ಮ ತಾಳದಿದ್ದರೇ ಕನ್ನಡ ಭಾಷೆ ಬಹಳ ಹಿಂದುಳಿದಿರುತ್ತಿತ್ತು ಎಂದು ವಿಶ್ಲೇಷಿಸಿದರು.

ವೇದಿಕೆಯ ಮೇಲೆ ಬಿ.ಎಡ್ ಕಾಲೇಜ್ ಪ್ರಾಚಾರ್ಯ ಅಶೋಕರೆಡ್ಡಿ, ವಿಕೆಜಿ ಪದವಿ ಕಾಲೇಜು ಪ್ರಾಚಾರ್ಯ ಕಲ್ಯಾಣಿ ಸಾವಳಗಿ, ಪತ್ರಕರ್ತ ಪ್ರಭಾಕರ ಸಲಗರೆ, ಮಹಾದೇವ ವಡಗಾಂವ ಇದ್ದರು.

ಇದನ್ನೂ ಓದಿ: ಸ್ಲಂ ಜನಾಂದೋಲನದಿಂದ ಬಸವಣ್ಣನವರ ಪ್ರತಿಮೆಗೆ ಪುಷ್ಪ ನಮನ

ಕಾರ್ಯಕ್ರಮದಲ್ಲಿ ಸುಧಾಕರ ಖಾಂಡೇಕರ, ಮಲ್ಲಿಕಾರ್ಜುನ ಬುಕ್ಕೆ, ಗೋವಿಂದ ಹುಸೇನಖಾನ್, ಶರಣಬಸಪ್ಪ ವಡಗಾಂವ, ಶಾಂತೇಶ ಹೂಗಾರ, ಮಲ್ಲಿನಾಥ ತುಕ್ಕಾಣೆ, ಮಹಾಂತಪ್ಪ ನಿಂಗಶೆಟ್ಟಿ, ರಾಜೇಂದ್ರ ಭಾವಿ, ಕಸಾಪ ಪದಾಧಿಕಾರಿಗಳು ಹಾಗೂ ಬಿ. ಎಡ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಸಾಪ ಗೌರವ ಕಾರ್ಯದರ್ಶಿ ಸಿದ್ದಪ್ಪ ಜಮಾದಾರ ಸ್ವಾಗತಿಸಿದರೆ, ಶ್ರೀದೇವಿ ವಂದಿಸಿದರು. ಮೇಘಾ ನಿರೂಪಿಸಿದರೆ, ಆಳಂದ ಕಸಾಪ ಅಧ್ಯಕ್ಷ ಹಣಮಂತ ಶೇರಿ ಖಜೂರಿ ಅಧ್ಯಕ್ಷತೆ ವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420