ನಕಲಿ ಹೂಡುವಳಿ ತೆರಿಗೆ ಪಡೆದು ವಂಚಿಸುತ್ತಿದ್ದ ಜಾಲದ ಪತ್ತೆ ಹಾಗೂ ಲೆಕ್ಕಪರಿಶೋಧಕನ ಬಂಧನ

ಬೆಂಗಳೂರು: ರಾಜ್ಯದ ವಾಣಿಜ್ಯ ತೆರಿಗೆಗಳ ಇಲಾಖೆಯ ದಕ್ಷಿಣ ವಲಯ ಜಾರಿ ವಿಭಾಗದ ಅಧಿಕಾರಿಗಳು ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಜಿ.ಎಸ್.ಟಿ. ಲೆಕ್ಕಪರಿಶೋಧಕರೊಬ್ಬರ ವ್ಯವಹಾರ ಸ್ಥಳ ಹಾಗೂ ನಿವಾಸದ ಮೇಲೆ ದಾಳಿ ಮಾಡಿ, ಅವರು ನಡೆಸುತ್ತಿದ್ದ ನಕಲಿ ಹೂಡುವಳಿ ತೆರಿಗೆಯ ಜಾಲವನ್ನು ಪತ್ತೆ ಹಚ್ಚಲಾಗಿದೆ.

ಲೆಕ್ಕಪರಿಶೋಧಕರು ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿಯಲ್ಲಿ ನೊಂದಣಿಯಾದ ತೆರಿಗೆದಾರರಿಂದ ಅವರು ಪಾವತಿಸಬೇಕಾದ ತೆರಿಗೆ ಮೊತ್ತವನ್ನು ಪಡೆದು, ಅದನ್ನು ಅವರ ತೆರಿಗೆ ಬಾಧ್ಯತೆಗೆ ಪಾವತಿ ಮಾಡದೇ, ನಕಲಿ ಹೂಡುವಳಿ ತೆರಿಗೆ ಮೂಲಕ ಸಂದಾಯ ಮಾಡಿ ವಂಚಿಸಿ, ಸರ್ಕಾರಕ್ಕೆ ರಾಜಸ್ವ ನಷ್ಟ ಉಂಟು ಮಾಡಿರುತ್ತಾರೆ.  ಇಲಾಖಾ ಅಧಿಕಾರಿಗಳು ಹೆಚ್ಚುವರಿ ಹೂಡುವಳಿ ತೆರಿಗೆ ಕ್ಲೇಮು ಮಾಡಿರುವ ಪ್ರಕರಣಗಳ ಪರಿಶೀಲನೆ ಮಾಡುತ್ತಿದ್ದ ಸಮಯದಲ್ಲಿ ಈ ಪ್ರಕರಣವು ಬೆಳಕಿಗೆ ಬಂದಿರುತ್ತದೆ.

ಇದನ್ನೂ ಓದಿ: ಸಂಸದ ಡಾ.ಉಮೇಶ ಜಾಧವ್‌ಗೆ ಗಡುವು

ಕ್ಷೇತ್ರ ಗುಪ್ತಚರ ಮಾಹಿತಿ ಹಾಗೂ ಇಲಾಖೆಯ ತಂತ್ರಾಂಶದಲ್ಲಿ ಲಭ್ಯವಿರುವ ವಿವರಗಳು ಈ ಪ್ರಕರಣವನ್ನು ಭೇದಿಸುವಲ್ಲಿ ಸಹಕಾರಿಯಾಗಿದ್ದು, ಈ ಲೆಕ್ಕಪರಿಶೋಧಕರು ಇದೇ ರೀತಿ ಸುಮಾರು 12 ಪ್ರಕರಣಗಳಲ್ಲಿ ತೆರಿಗೆದಾರರನ್ನು ವಂಚಿಸಿ ಸುಮಾರು ರೂ.10 ಕೋಟಿಗಳಷ್ಟು ನಕಲಿ ಹೆಚ್ಚುವರಿ ಹೂಡುವಳಿ ತೆರಿಗೆಯನ್ನು ಪಡೆದಿರುವುದು ಕಂಡುಬಂದಿರುತ್ತದೆ.  ಈ ಪೈಕಿ ಇಲಾಖಾ ಅಧಿಕಾರಿಗಳು ಇದುವರೆವಿಗೂ ರೂ. 5.31 ಕೋಟಿಗಳಷ್ಟು ಮೊತ್ತವನ್ನು ವಸೂಲು ಮಾಡುವಲ್ಲಿ ಯಶಸ್ವಿಯಾಗಿದ್ದು, ಪ್ರಕರಣದ ತನಿಖೆಯು ಮುಂದುವರೆದಿರುತ್ತದೆ.

ಈ ಪ್ರಕರಣದ ಪರಿಣಾಮವಾಗಿ ಕೆಲವು ಬಾದಿತ ತೆರಿಗೆದಾರರು ಬೆಂಗಳೂರಿನಾದ್ಯಂತ ಆರಕ್ಷಕ ಠಾಣೆಗಳಲ್ಲಿ ಅನೇಕ ದೂರುಗಳನ್ನು ಸಲ್ಲಿಸಿದ್ದು, ತತ್ಪರಿಣಾಮವಾಗಿ ಪೋಲೀಸರು ಸದರಿ ಲೆಕ್ಕಪರಿಶೋಧಕರನ್ನು ಬಂಧಿಸಿ ವಶಕ್ಕೆ ಪಡೆದಿರುತ್ತಾರೆ.

ಇದನ್ನೂ ಓದಿ: ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ ನೇ ಸಂಸ್ಥಾಪನಾ ದಿನಾಚರಣೆ

ಆದ್ದರಿಂದ ತೆರಿಗೆದಾರರು ತಮ್ಮ ತೆರಿಗೆ ಬಾಧ್ಯತೆಯನ್ನು ಮೂರನೇ ವ್ಯಕ್ತಿಗಳ ಮೂಲಕ ಮಾಡುವ ಸಂದರ್ಭಗಳಲ್ಲಿ ಸಾಕಷ್ಟು ಜಾಗರೂಕರಾಗಿ ವ್ಯವಹರಿಸಬೇಕೆಂದು ಹಾಗೂ ಈ ಬಗ್ಗೆ ಪರಿಣಾಮಕಾರಿಯಾಗಿ ವ್ಯವಹರಿಸಲು ಇಲಾಖೆಯ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿಗಳಲ್ಲಿ ಲಭ್ಯವಿರುವ ಸಹಾಯ ಪೀಠಗಳ ಸೇವೆಯನ್ನು ಪಡೆಯಬೇಕೆಂದು ವಾಣಿಜ್ಯ ತೆರಿಗೆಗಳ ಇಲಾಖೆಯ ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

11 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

11 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

11 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

11 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

11 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420