ಶಹಾಬಾದ: ಬಾಬು ಜಗಜೀವನರಾಮ ಅವರು ಅಸ್ಪೃಶ್ಯತೆಯನ್ನು ತೊಡೆದು ಹಾಕಿ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದರು. ಶೋಷಿತರ ಪರವಾಗಿ ಹೋರಾಟ ಮಾಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಯಶಸ್ವಿಯಾಗಿದ್ದರು ಎಂದು ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಹೇಳಿದರು.
ಅವರು ರವಿವಾರ ಮಾದಿಗ ಸಮಾಜದ ವತಿಯಿಂದ ಆಯೋಜಿಸಲಾದ ಡಾ. ಬಾಬು ಜಗಜೀವನರಾಮ ರವರ ೧೧೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಡಾ. ಬಾಬು ಜಗಜೀವನರಾಮ್ ರವರು ಸ್ವಾತಂತ್ರ ಹೋರಾಟಗಾರರು, ಸಮಾಜ ಸೇವಕರಾಗಿದ್ದರಲ್ಲದೇ, ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಹೋರಾಡಿದ ಮಹಾನ್ ವ್ಯಕ್ತಿಯಾಗಿದ್ದರು.ಶಿಕ್ಷಣವನ್ನು ಮೂಲ ಅಸ್ತ್ರವಾಗಿಸಿಕೊಂಡು ಚೆನ್ನಾಗಿ ಓದಿ ಉನ್ನತ ಹುದ್ದೆ ಪಡೆದು ಸಮಾಜ ಸೇವೆ ಮಾಡಬೇಕು. ಆಗ ಮಾತ್ರ ಅಸ್ಪೃಶ್ಯತೆ ನಿವಾರಣೆ ಸಾಧ್ಯವಾಗುತ್ತದೆ ಎಂದರು.
ಇದನ್ನೂ ಓದಿ: ಸೇಂದಿ ಇಳಿಸಿ ಮಾರಲು ಅನುಮತಿ ನೀಡಬೇಕೆಂದು ಒತ್ತಾಯಿಸಿ ಪಾದಯಾತ್ರೆ
ಕಲಬುರಗಿಯ ಮಾಜಿ ಮಹಾಪೌರರಾದ ಮಲ್ಲಪ್ಪ ಅಭಿಶಾಳ ಮಾತನಾಡಿ, ಜಗಜೀವನರಾಮ ದಕ್ಷ ಆಡಳಿತಗಾರರಾಗಿದ್ದರು. ಮೂರು ದಶಕಗಳವರೆಗೆ ಸಂಪುಟ ದರ್ಜೆ ಸಚಿವರಾಗಿ, ಸಂಸದರಾಗಿ, ಉಪಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದು ಅವರ ದಕ್ಷತೆಯ ಪ್ರತೀಕವಾಗಿದೆ. ಅವರು ಅಸ್ಪೃಶ್ಯತೆ ನಿವಾರಣೆಯ ಹರಿಕಾರರು’ ಎಂದು ಸ್ಮರಿಸಿದರು.
ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಅವರು ದಲಿತ ನಾಯಕರಲ್ಲ. ಅವರು ಇಡಿ ಸಮಾಜದ ನಾಯಕರು. ಅವರು ಎಲ್ಲರಿಗಾಗಿ ಹೋರಾಡಿದ್ದಾರೆ ಹೇಳಿದರು.
ಜಯಂತೋತ್ಸವ ಸಮಿತಿ ಅಧ್ಯಕ್ಷ ಭೀಮರಾಯ ಮುದ್ನಾಳ ಮಾತನಾಡಿ, ಡಾ. ಬಾಬು ಜಗಜೀವನರಾಮ ಅವರ ಆದರ್ಶಗಳು, ಸಾಧನೆಗಳು ಮತ್ತು ಜಿಂತನೆಗಳು ಯುವ ಜನರಿಗೆ ತಲುಪುವಂತಾಗಬೇಕು ಹಾಗೂ ಅವರ ವಿಚಾರಧಾರೆಗಳನ್ನು ಯುವಜನತೆ ಪಾಲಿಸುವುದರಿಂದ ಸಮಾಜವು ಅಭಿವೃದ್ಧಿ ಪಥದೆಡೆಗೆ ಸಾಗುತ್ತದೆ ಎಂದರು.
ಇದನ್ನೂ ಓದಿ: AIMIM ಕಲಬುರಗಿ ಜಿಲ್ಲಾ ಅಧ್ಯಕ್ಷರಾಗಿ ರಹೀಮ್ ಮಿರ್ಚಿ ಪುನಃ ನೇಮಕ
ಮಹ್ಮದ ಖದೀರ ಮಾತನಾಡಿದರು. ಅಮರ ಕೋರೆ, ರಮೇಶ್ ಕಾಂಬಳೆ ನಗರ ಸಭೆಯ ಮಾಜಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರಣು ಪಗಲಾಪೂರ,ಡಾ.ಮಹೇಂದ್ರ ಕೋರಿ, ಭೀಮರಾಯ ಜಾಲಹಳ್ಳಿ, ಕಸಾಪ ಮಾಜಿ ಅಧ್ಯಕ್ಷ ಎನ್.ಸಿ.ವಾರದ, ಹಾಜಪ್ಪ ಬಿಳಾರ, ನಾಗರಾಜ ಮುದ್ನಾಳ,ವಿಶ್ವನಾಥ ಚಿತ್ತಾಪುರ, ಮಹೇಶ ಮುದ್ನಾಳ ವೇದಿಕೆಯ ಮೇಲಿದ್ದರು. ರೇವಣಸಿದ್ದ ಹೊನಗುಂಟಿ ನಿರೂಪಿಸಿದರು, ಶರಣಪ್ಪ ಮುದ್ನಾಳ ಸ್ವಾಗತಿಸಿದರು, ಮನೋಹರ ಮೇತ್ರೆ ವಂದಿಸಿದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…