ಕಲಬುರಗಿ:ಅಜಾನ್ ವಿರುದ್ಧ ಶ್ರೀರಾಮ ಸೇನೆ ಕರೆ ನೀಡಿದ ಸುಪ್ರಭಾತ ಅಭಿಯಾನಕ್ಕೆ ವಿರೋದ ವ್ಯಕ್ತವಾಗಿದೆ. ಮುಸ್ಲಿಂ ಸಮುದಾಯ ಜತೆಗೆ ದಲಿತ ಸಮುದಾಯದ, ಜೆಡಿಎಸ್ ಕಾರ್ಯಕರ್ತರು ಮಸೀದಿಗೆ ಕಾವಲಾಗಿ ನಿಂತಿದ್ದಾರೆ. ಇದರ ಮಧ್ಯೆಯೂ ಹನೂಮಾನ ಚಾಲಿಸಾ ಪಠಣ ಮಾಡುತ್ತ ತೆರಳುತ್ತಿರುವ ಶ್ರೀ ರಾಮ್ ಸೇನೆ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ ಸುಪ್ರಭಾತ ಹಾಕಿದ ಶ್ರೀರಾಮ ಸೇನೆ ಕಾರ್ಯಕರ್ತರು, ನಂತರ ಮಧ್ಯಾನ ಹನುಮಾನ ಚಾಳಿಸ ಪಠಣಕ್ಕೆ ಸಿದ್ದತೆ ಮಾಡಿಕೊಂಡಿದ್ದರು. ಸುಪರ್ ಮಾರ್ಕೇಟ್ ಮಸೀದಿ ಬಳಿ ಇರುವ ಹನುಮಾನ ದೇವಸ್ಥಾನದಲ್ಲಿ ಹನುಮಾನ ಚಾಳಿಸ್ ಪಠಣಕ್ಕೆ ಶ್ರೀರಾಮ ಸೇನೆ ಮುಂದಾಗಿದ್ದು, ಜಗತ್ ವೃತ್ತದಿಂದ ಸುಪರ್ ಮಾರ್ಕೆಟ್ ವರೆಗೆ ಪಾದಯಾತ್ರೆ ಮುಲಕ ತೆರಳಿ ಹನುಮಾನ ಚಾಳಿಸ್ ಉದ್ದೇಶವನ್ನು ಹೊಂದಿದ್ದರು.
ಆದ್ರೆ ಮುಸ್ಲಿಂ ಸಮುದಾಯಕ್ಕೆ ದಲಿತ ಸಂಘಟನೆಗಳು, ಜೆಡಿಎಸ್ ಕಾರ್ಯಕರ್ತರು ಬೆನ್ನೇಲಬಾಗಿ ನಿಂತಿದ್ದು, ನಾವು ಕಾವಲಿದ್ದೇವೆ. ಯಾರು ಬರ್ತಿರೋ ಬನ್ನಿ ಎಂದು ದಲಿತ ಸೇನೆ ಕಾರ್ಯಕರ್ತರು ಮಸಜೀದ್ ಬಳಿ ಕಾವಲು ಕುಳಿತಿದರು. ಹನೂಮಾನ ಚಾಲಿಸಾ ಪಠಣ ಮಾಡುತ್ತ ಹೊರಟ ೨೦ಕ್ಕೂ ಅಧಿಕ ಜನ ಶ್ರೀ ರಾಮ್ ಸೇನೆ ಕಾರ್ಯಕರ್ತರನ್ನ ಪೋಲಿಸರು ವಶಕ್ಕೆ ಪಡೆದರು.
ಇನ್ನು ಮುಂಜಾಗ್ರತಾ ಕ್ರಮವಾಗಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಗರದ ಬಹುತೇಕ ಪೊಲೀಸ್ ಸಿಬ್ಬಂದಿಗಳನ್ನ ಮಸಿದಿ ಮತ್ತು ಹನುಮಾನ ದೇವಸ್ಥಾನದ ಸುತ್ತ ನಿಯೋಜಿನೆ ಮಾಡಿರುವ ಪೋಲಿಸ್ ಇಲಾಖೆ ಯಾವುದೆ ಅಹಿತಕರ ಘಟನೆಗಳು ನಡೆಯದಂತೆ ಹದ್ದಿನ ಕಣ್ಣಿಟ್ಟಿದ್ದಾರೆ.
ಇದನ್ನೂ ಓದಿ: AIMIM ಕಲಬುರಗಿ ಜಿಲ್ಲಾ ಅಧ್ಯಕ್ಷರಾಗಿ ರಹೀಮ್ ಮಿರ್ಚಿ ಪುನಃ ನೇಮಕ
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…