ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಆಮಂತ್ರಣ ಹೋಟೆಲನಲ್ಲಿ ಸೋಮವಾರ ದಿನಾಂಕ 09.05.2022 ರಂದು ಕರ್ನಾಟಕ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಮುಖಂಡರ ರಚನಾತ್ಮಕ ಚಿಂತನ-ಮಂಥನ ಸಭೆ ಒಕ್ಕೂಟದ ಕಾರ್ಯಾಧ್ಯಕ್ಷ ಶ್ರೀ ವಿಠ್ಠಲ ಯಾದವ ಅವರ ಅದ್ಯಕ್ಷತೆಯಲ್ಲಿ ಜರುಗಿತು.
ಇದನ್ನೂ ಓದಿ: ಶೋಷಿತರನ್ನು ಸಮಾಜದ ಮುಖ್ಯ ವಾಹಿನಿಗೆ ತರವಲ್ಲಿ ಶ್ರಮಿಸಿದವರು ಜಗಜೀವನರಾಮ
ಪ್ರವರ್ಗ-1 ರಲ್ಲಿ ಸುಮಾರು 95 ಜಾತಿಗಳಿವೆ. ಇದರಲ್ಲಿ 46 ಜಾತಿಗಳು ಅಲೆಮಾರಿ ಸುಮುದಾಯಕ್ಕೆ ಸೇರಿರುತ್ತವೆ. ಪ್ರವರ್ಗ-1ರ ಜಾತಿಗಳ ಜನರಲ್ಲಿ ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ, ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಯಿತು. ಸ್ಥಳೀಯ ಮುಖಂಡರ, ಬಂಧುಗಳ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲೂಕು ಘಟಕಗಳನ್ನು ಪ್ರಾರಂಭಿಸುವ ಕುರಿತು ಹಾಗೂ ಕರ್ನಾಟಕ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ಪ್ರವರ್ಗ-1ರ ಜಾತಿಗಳ ನ್ಯಾಯಬದ್ಧ ಬೇಡಿಕೆಗಳನ್ನು ಸರ್ಕಾರದಿಂದ ಪಡೆದುಕೊಳ್ಳುವ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.
ಇದನ್ನೂ ಓದಿ: ಆಜಾನ್ಗೆ ವಿರೋಧಿಸಿ ಶ್ರೀರಾಮ ಸೇನೆ ಅಭಿಯಾನ: ಮಸೀದಿ ಮುಂದೆ ಕಾವಲು ಕುಳಿತ ದಲಿತ ಸಂಘಟನೆ
ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ ಕಮಕನೂರ, ಒಕ್ಕೂಟದ ಪ್ರದಾನ ಕಾರ್ಯದರ್ಶಿ ಲೋಕೇಶಪ್ಪ, ಉಮಾಶಂಕರ ಯಾದವ, ನರಸಿಂಹ ಮೂರ್ತಿ, ಸೂರ್ಯಪ್ರಕಾಶ ಹಾಗೂ ಪ್ರವರ್ಗ-1ರಲ್ಲಿ ಬರುವಂತ ಎಲ್ಲಾ ಸಮುದಾಯದ ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ: AIMIM ಕಲಬುರಗಿ ಜಿಲ್ಲಾ ಅಧ್ಯಕ್ಷರಾಗಿ ರಹೀಮ್ ಮಿರ್ಚಿ ಪುನಃ ನೇಮಕ
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…