ಕಲಬುರಗಿ: ಆಕಾಶವಾಣಿ ವಿವಿಧಭಾರತಿ ಎಫ್.ಎಂ ಕಲಬುರಗಿಯಲ್ಲಿ ಜುಲೈ 29 ರಂದು ಬೆಳಿಗ್ಗೆ 9 ಗಂಟೆಗೆ ಪ್ರಸಾರವಾಗುವ ’ಸಮ್ಮುಖ’ ಕಾರ್ಯಕ್ರಮದಲ್ಲಿ ಜಮಖಂಡಿ ತಾಲೂಕಿನ ಹುನ್ನೂರ ಮಧುರಖಂಡಿಯ ಬಸವಜ್ಞಾನ ಗುರುಕುಲದ ಖ್ಯಾತ ಚಿಂತಕರು ಪ್ರವಚನಕಾರ ಡಾ. ಈಶ್ವರ ಮಂಟೂರ ಅವರೊಡನೆ ನಡೆಸಿದ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.
ಕಲಬುರಗಿ ಆಕಾಶವಾಣಿಯಲ್ಲಿ ದಿನಾಂಕ 30 ರಂದು ಬೆಳಿಗ್ಗೆ 8.35 ಕ್ಕೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ. ಇವರನ್ನು ಕಾರ್ಯಕ್ರಮ ನಿರ್ವಾಹಕರಾದ ಡಾ.ಸದಾನಂದ ಪೆರ್ಲ ಸಂದರ್ಶಿಸಿದ್ದಾರೆ
ಆಧ್ಯಾತ್ಮ ಲೋಕದ ಅನುಭವ, ಸಾಮಾಜಿಕ ಚಿಂತನೆಯ ಜನಮುಖಿ ಸೇವೆ, ಪ್ರವಚನ ಸಾಹಿತ್ಯದ ಮಹತ್ವ ಕುರಿತಾಗಿ ಮಂಟೂರ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಆಸಕ್ತ ಕೇಳುಗರು ವಿವಿಧ ಭಾರತಿ ಎಫ್ ಎಂ 103.7 ಹಾಗೂ ಎಎಂ 1107 ಕಿಲೋಹರ್ಟ್ಸ್ ತರಂಗಾಂತರಗಳಲ್ಲಿ ಕಾರ್ಯಕ್ರಮ ಆಲಿಸಬಹುದೆಂದು ನಿಲಯದ ಕಾರ್ಯಕ್ರಮ ಮುಖ್ಯಸ್ಥರಾದ ಆರ್.ಕೆ. ಗೋವಿಂದರಾಜನ್ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…