ಶಹಾಬಾದ: ಕಲಬುರಗಿಯಿಂದ ಶಹಾಬಾದಗೆ ಬೈಕ್ ಮೇಲೆ ಬರುತ್ತಿರುವಾಗ ಮಾರ್ಗ ಮಧ್ಯದ ತರನಳ್ಳಿ ಗ್ರಾಮದ ಕ್ರಾಸ್ ಬಳಿ ಹಿಟಾಚಿಯ ಬಕೆಟ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನ ಕಾಲಿಗೆ ಗಂಭೀರ ಗಾಯವಾದರೆ ಮತ್ತೊಬ್ಬ ಯುವಕನ ತಲೆಗೆ ಪೆಟ್ಟಾಗಿದ್ದು ಪ್ರಜ್ಞೆ ಕಳೆದುಕೊಂಡ ಘಟನೆ ಭಾನುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ನಗರ ಪೊಲೀಸ್ ಠಾಣೆಗೆ ತಿಳಿಸದರೂ ಇಲ್ಲಿಯವರೆಗೆ ಪೊಲೀಸರು ಎಫ್.ಐ.ಆರ್ ದಾಖಲಿಸಿಲ್ಲ.ಅಲ್ಲದೇ ಹಿಟಾಚಿಯವರ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೋಷಕರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಂಭೀರ ಗಾಯಕೊಳಗಾದ ಯುವಕರಾದ ಶಾಂತಕುಮಾರ ತಂದೆ ಬಸವರಾಜ ಇಂಗಳಗಿ, ಮುಸ್ತಫಾ ಇಂಗಳಗಿ.ಈ ಇಬ್ಬರು ಬೈಕ್ ಮೇಲೆ ಕಲಬುರಗಿಯಿಂದ ಬರುವಾಗ ತರನಳ್ಳಿ ಕ್ರಾಸ್ ಬಳಿ ಜಮೀನಲ್ಲಿ ಹಿಟಾಚಿಯಿಂದ ಮಣ್ಣು ಅಗೆಯುತ್ತಿದ್ದ ಸಂದರ್ಭದಲ್ಲಿ ಚಾಲಕ ಹಿಟಾಚಿಯ ಬಕೆಟ್ ಏಕಾಎಕಿ ರಸ್ತೆ ಮೇಲೆ ತಿರುಗಿಸಿದ್ದಾನೆ. ರಸ್ತೆ ಮೇಲೆ ಬರುತ್ತಿದ್ದ ಯುವಕರ ಬೈಕ್ಗೆ ಇಟಾಚಿ ಬಕೆಟ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಕೋವಿಡ್ ಮುಂಚೆ ನಿಲ್ಲುತ್ತಿದ್ದ ರೈಲುಗಳನ್ನು ನಿಲ್ಲಿಸಬೇಕೆಂದು ಮನವಿ
ಶಾಂತಕುಮಾರ ತಲೆಯ ಹಿಂದಿನ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದಿದೆ. ಇದರಿಂದ ಯುವಕನ ಒಂದು ದಿನದ ಮೆಮೊರಿ ಲಾಸ್ ಆಗಿದೆ.
ಮುಸ್ತಫಾ ಎಂಬ ಯುವಕನ ಕಾಲು ಮುರಿದಿದೆ. ಇದರಿಂದ ಜಮೀನಿನ ಮಾಲೀಕ ತನ್ನ ಬುಲೆರೋ ವಾಹನದಲ್ಲಿ ಇಬ್ಬರನ್ನು ಶಹಾಬಾದ ಸಮುದಾಯ ಆಸ್ಪತ್ರೆ ಹೊರಗಡೆ ಹಾಕಿ, ಅಲ್ಲಿಂದ ಪರಾರಿ ಆಗಿದ್ದಾನೆ. ನಂತರ ಅರೆ ಪ್ರಜ್ಞೆಯಲ್ಲಿದ್ದ ಯುವಕರು ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಶಹಾಬಾದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಸೋರುತ್ತಿರುವ ನಲ್ಲಿ ಮತ್ತು ಶವರ್ಗಳನ್ನು ಉಚಿತವಾಗಿ ಸರಿಪಡಿಸುವ ಅಭಿಯಾನ
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…