ಕಲಬುರಗಿ: ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ವಿಚಾರ ಧಾರೆಗಳು, ಬದುಕಿನ ಸರಳತೆ ಮತ್ತು ನಿಷ್ಠೆ ಇಂದಿನ ಜನಾಂಗಕ್ಕೆ ಆದರ್ಶವಾಗಿವೆ. ಅವುಗಳ ಪಾಲನೆಯಲ್ಲಿ ನಾವೆಲ್ಲರೂ ಬದ್ಧತೆಯನ್ನು ತೋರಿಸಬೇಕು. ಕೇವಲ ತೋರಿಕೆಗಾಗಿ ಜಯಂತಿ ಆಚರಿಸದೇ ಅವರ ಸರಳತೆಯನ್ನು ಜೀವನದಲ್ಲಿ ಅಳವಡಿಕೊಳ್ಳುವುದೇ ನಾವೆಲ್ಲರೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನಿಗೆ ತೋರುವ ನಿಜವಾದ ಗೌರವವಾಗಿರುತ್ತದೆ ಎಂದು ಕಲಬುರಗಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಗುರುಬಸಪ್ಪ ಸಜ್ಜನಶೆಟ್ಟಿ ಅವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ೬೦೦ನೇ ಜಯಂತಿಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಇದನ್ನೂ ಓದಿ: ಕಲಬುರಗಿ: ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ
ಕಸಾಪ ತಾಲೂಕಾ ಮಹಿಳಾಪ್ರತಿನಿಧಿ ಕವಿತಾ ಕಾವಳೆ ಮಾತನಾಡಿ ಹೇಮರೆಡ್ಡಿ ಮಲ್ಲಮ್ಮ ಸಮಾಜಕ್ಕೆ ಆದರ್ಶ ಸೊಸೆ ಮತ್ತು ಮಗಳಾಗಿದ್ದಾಳೆ,ಶಿವನನ್ನು ಒಲಿಸಿಕೊಂಡ ಮಹಾಸಾಧ್ವಿ ಧಾರ್ಮಿಕತೆಯ ಪ್ರತೀಕವಾಗಿದ್ದಾಳೆ, ಅವರ ಜೀವನ ಚರಿತ್ರೆಯನ್ನು ಓದುವ ಮೂಲಕ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಸನೂರು ಗ್ರಾಮ ಪಂಚಾಯತ ಸದಸ್ಯರಾದ ಕುಪೇಂದ್ರ ಎಂ ಬರಗಾಲಿ ಹಾಗೂ ನಾಟಕ ಕಲಾವಿದರಾದ ಹರಿಕೃಷ್ಣ, ರೂಪಾ, ಪ್ರದೀಪ, ರಾಘವೇಂದ್ರ ಮತ್ತು ಉದಯಕುಮಾರ ವೇದಿಕೆಯ ಮೇಲಿದ್ದರು. ಇದೇ ಸಂದರ್ಭದಲ್ಲಿ ಕಲಬುರಗಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ರಂಗಭೂಮಿ ಕಲಾವಿದರಿಗೆ ಕನ್ನಡ ಶಾಲು ಮತ್ತು ಕನ್ನಡದ ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ವಿಶ್ವನಾಥ ತೋಟ್ನಳ್ಳಿ ನಿರೂಪಿಸಿ ವಂದಿಸಿದರು.
ಇದನ್ನೂ ಓದಿ: ಬೈಕಗೆ ಹಿಟಾಚಿ ಡಿಕ್ಕಿ ಎಫ್.ಐ.ಆರ್ ದಾಖಲಿಸದಿರುವುದಕ್ಕೆ ಆಕ್ರೋಶ
ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…
ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…
ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…
ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…