ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಮನವಿ

ಕಲಬುರಗಿ ನಗರದ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲುವಂತೆ ಸ್ಲಂ ಜನಾಂದೋಲನಾ ಕರ್ನಾಟಕ ಜಿಲ್ಲಾ ಕೊಳಗೇರಿ ನಿವಾಸಿಗಳ ಒಕ್ಕೂಟ ವತಿಯಿಂದ ನಗರದಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಹನುಮಂತಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸುಮಾರು ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರಿದ್ದು, ಇವರುಗಳು ಸುಮಾರು ವರ್ಷಗಳಿಂದ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವರುಗಳು ನಗರದ ವಿವಿಧ, ಕೊಳಚೆ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ಆರ್ಯ ಈಡಿಗ ಸಮಾಜದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

ಇವರಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವುದರಿಂದ ಇವರಿಗೆ ಬರುವ ಸಂಬಳವು ತೀರಾ ಕಡಿಮೆ ಮಟ್ಟದಾಗಿದ್ದು, ಆ ಸಂಬಳದಲ್ಲಿ ಇವರುಗಳ ಜೀವನ ನಡೆಸುವುದು ಕಷ್ಟಕರವಾಗಿರುತ್ತದೆ. ಜೊತೆಗೆ ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ಇವರಿಗೆ ಇನ್ನು ಕಷ್ಟವಾಗುತ್ತಿದ್ದು, ಇವರಿಗೆ ಕಲಬುರಗಿ ನಗರದಲ್ಲಿ ಮಹಾನಗರ ಪಾಲಿಕೆಯಿಂದ/ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಅಥವಾ ತಮ್ಮ ಅಭಿವೃದ್ಧಿ ನಿಗಮದಿಂದಾದರೂ ಇವರುಗಳಿಗೆ ವಸತಿ ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಗೌರವ ಅಧ್ಯಕ್ಷ ಬಾಬುರಾವ ದಂಡಿನಕರ್, ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಕಾರ್ಯದರ್ಶಿ ವಿಕಾಸ ಸವಾರಿಕರ್, ಕವಿತಾ ಇನಾಂದಾರ, ಅನಿಲ ಚಕ್ರ, ಗಣೇಶ ಕಾಂಬಳೆ, ಭಾಗಮ್ಮ ಬನಸೋಡೆ, ಬ್ರಹ್ಮಾನಂದ ಮಿಂಚಾ ಇದ್ದರು.

ಇದನ್ನೂ ಓದಿ: ಗುತ್ತಿಗೆ ಪದ್ಧತಿ ಕೈಬಿಟ್ಟು, ಪೌರ ಕಾರ್ಮಿಕರ ಖಾಯಂ ನೇಮಕಾತಿ ಮಾಡಬೇಕು:ಹೆಚ್.ಹನುಮಂತಪ್ಪ

emedialine

Recent Posts

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

8 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

8 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

8 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

8 hours ago

ಸೇಡಂ: ನೀರಿನಲ್ಲಿ ಮುಳುಗಿ ಮೃತ ಕುಟುಂಬಕ್ಕೆ ಸರ್ಕಾರದಿಂದ 3 ಎಕ್ಕರೆ ಜಮೀನು ನೀಡಿ

ಕಲಬುರಗಿ: ಸೇಡಂ ತಾಲೂಕಿನ ಕುರುಗುಂಟ ಗ್ರಾಮದ  ರಾಜು ನಾಮವಾರ್ ಸಂಗಾವಿ ಹೊಳೆಯಲ್ಲಿ ಮುಳಗಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ 3 ಎಕ್ಕರೆ …

9 hours ago

ಟಿಎಪಿಸಿಎಂ ಅಧ್ಯಕ್ಷರಾಗಿ ಪಾಟೀಲ್ ಅವಿರೋಧ ಆಯ್ಕೆ

ಕಲಬುರಗಿ: ಸಹಕಾರಿ ಕ್ಷೇತ್ರದ ಇಲ್ಲಿನ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ (ಟಿಎಪಿಸಿಎಂ) ಸಂಘದ ಅಧ್ಯಕ್ಷರಾಗಿ ಶರಣಬಸಪ್ಪ ಜಗದೀಶ ಪಾಟೀಲ್…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420