ಉದ್ಯೋಗ ಖಾತ್ರಿ ಕಾಮಗಾರಿ ಸ್ಥಳಕ್ಕೆ ಶಾಸಕ ಬಸವರಾಜ ಮತ್ತಿಮಡು ಭೇಟಿ

0
44

ಶಹಾಬಾದ: ಕಲಬುರಗಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ಸಣ್ಣೂರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಬುಧವಾರ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಭೇಟಿ ನೀಡಿ ಪರಿಶೀಲಿಸಿದರು.

ಸರಿಯಾದ ಸಮಯಕ್ಕೆ ವೇತನ, ಖಾತೆಗೆ ಹಣ ಜಮಾ ಆಗುತ್ತದೆಯೇ ಎಂದು ಕೇಳಿದರಲ್ಲದೇ, ಕೆಲಸ ಮಾಡುವ ಸಮಯದಲ್ಲಿ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಇಲ್ಲವೂ ಎಂದು ವಿಚಾರಿಸಿದರು.ನಿಮ್ಮ ಏನೆ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತರಬೇಕು.ಅದನ್ನು ಬಗೆಹರಿಸುವಲ್ಲಿ ಪ್ರಾಮಾಣಿಕವಾಗಿ ಮಾಡುತ್ತೆನೆ.ಅಲ್ಲದೇ ತಾವುಗಳು ತಾವು ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಹಾಗೂ ದೇವರ ಪೂಜೆಯೆಂದು ತಿಳಿದು ಮಾಡಬೇಕು ಎಂದರು. ಕಾರ್ಮಿಕರು ಸಮಯಕ್ಕೆ ಸರಿಯಾಗಿ ವೇತನವಾಗುತ್ತಿದೆ.ಅಲ್ಲದೇ ಹಣ ಖಾತೆಗೆ ಜಮಾ ಆಗುತ್ತಿದೆ ಎಂದು ಹ?ದಿಂದ ನುಡಿದರು.

Contact Your\'s Advertisement; 9902492681

ಇದನ್ನೂ ಓದಿ:ಇ-ಸ್ಟಾಂಪಿಂಗ್ ಸೌಲಭ್ಯ ಯಶಸ್ವಿಯಾಗಲಿ- ರವೀಂದ್ರ

ಕಾರ್ಮಿಕರ ವೇತನ ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ಅವರಿಗೆ ಎಲ್ಲ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಂತರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಉಪಹಾರ ವಿತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಮಿಕರು, ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here