ಶಹಾಬಾದ: ತಾಲೂಕಿನ ಭಂಕೂರಿನ ಸರಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಸೇರಿ ಮಕ್ಕಳನ್ನು ಸ್ವಾಗತಿಸಿ ಸಂತಸ ಸಂಭ್ರಮದಿಂದ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಿ, ಸಿಹಿ ಹಂಚಿ ಮಕ್ಕಳನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಮುಖ್ಯಗುರು ಶಂಕರ ಜಾಧವ ಮಾತನಾಡಿ, ಶಾಲೆಗಳು ಪ್ರಾರಂಭವಾಗಿದ್ದು, ಮಕ್ಕಳು ದಿನನಿತ್ಯ ಶಾಲೆಗೆ ಬರಬೇಕು.ಅಲ್ಲದೇ ಮನೆಯಲ್ಲಿ ಕುಳಿತ ನಿಮ್ಮ ಗೆಳೆಯರನ್ನು ಶಾಲೆಗೆ ಬರುವಂತೆ ಪ್ರೇರೇಪಿಸಬೇಕು. ೧೪ ದಿನಗಳ ಮಳೆ ಬಿಲ್ಲು ಕಾರ್ಯಕ್ರಮಗಳು ೮ ಮತ್ತು ೯ನೇ ತರಗತಿಗಳಿಗೆ ಈ ವರ್ಷ ನಡೆಯಲಿದೆ.ಶಾಲೆಗೆ ದಿನನಿತ್ಯ ಬರುವುದರಿಂದ ಎಲ್ಲಾ ಶಿಕ್ಷಕರು ಹೇಳಿದ ಪಾಠ ಸರಿಯಾಗಿ ತಿಳಿದುಕೊಳ್ಳಲು ಸಹಾಯಕವಾಗುತ್ತದೆ.ಆದ್ದರಿಂದ ಮಕ್ಕಳು ಸರಿಯಾಗಿ ಅಭ್ಯಾಸ ಮಾಡುವುದರ ಮೂಲಕ ಕಲಿತ ಶಾಲೆಗೆ, ಹೆತ್ತ ತಂದೆ-ತಾಯಿಗೆ ಹಾಗೂ ಗುರುಗಳಿಗೆ ಕೀರ್ತಿ ತರುವಂಥ ಕೆಲಸ ಮಾಡಬೇಕೆಂದು ಹೇಳಿದರು.
ಇದನ್ನೂ ಓದಿ:ತಳಿರು, ತೋರಣಗಳನ್ನು ಕಟ್ಟಿ ಶಾಲಾ ಮಕ್ಕಳಿಗೆ ಬರಮಾಡಿಕೊಂಡ ಶಿಕ್ಷಕ ವರ್ಗ
ಶಿಕ್ಷಕ ವಿಷ್ಣುತೀರ್ಥ ಆಲೂರ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸರಕಾರಿ ಶಾಲೆಗಳಿಗೆ ಹೆಚ್ಚಿನ ಮಹತ್ವ ಹಾಗೂ ದಾಖಲಾತಿ ಹೆಚ್ಚಿದೆ. ಶಿಕ್ಷಣ ವ್ಯವಸ್ಥೆಗೆ ಸರಕಾರ ಕೋಟಿಗಟ್ಟಲೇ ಹಣವನ್ನು ಖರ್ಚು ಮಾಡುತ್ತಿದೆ.ಅಗತ್ಯ ಸೌಲಭ್ಯಗಳನ್ನು ನೀಡುತ್ತಿದೆ.ಆದ್ದರಿಂದ ಮಕ್ಕಳು ಹೆಚ್ಚು ಕ್ರೀಯಾಶೀಲರಾಗಿ ಕಲಿಯಬೇಕು.ಅಲ್ಲದೇ ಶಿಕ್ಷಕರು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸರಿಯಾದ ಶಿಕ್ಷಣ ನೀಡುವಲ್ಲಿ ಮುಂದಾಗಬೇಕು.ಪ್ರಸಕ್ತ ವರ್ಷ ೮ನೇ ಮತ್ತು ೯ನೇ ತರಗತಿ ಮಕ್ಕಳಿಗೆ ಕಲಿಕಾ ಚೇತರಿಗೆ ಶೈಕ್ಷಣಿಕ ವರ್ಷವಾಗಿ ಸರಕಾರ ಘೋಷಣೆ ಮಾಡುವ ಮೂಲಕ ಅವರಲ್ಲಿ ಶೈಕ್ಷಣಿಕ ಬುನಾದಿ ಹಾಕಲು ಮುಂದಾಗಿದೆ ಎಂದು ಹೇಳಿದರು.
ಇದೇ ಈ ಸಂದರ್ಭದಲ್ಲಿ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಎಸ್.ಡಿ.ಎಮ್.ಸಿ ಅಧ್ಯಕ್ಷೆ ಭೀಮಬಾಯಿ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ನಾಗೇಂದ್ರ, ಶಿಕ್ಷಕರಾದ ಎನ್.ಡಿ.ಜಕಾತೆ, ಈರಣ್ಣ ಕೆಂಭಾವಿ, ದತ್ತಪ್ಪ ಕೋಟನೂರ್, ಶಾಂತಮಲ್ಲ ಶಿವಭೋ, ಅನೀಲಕುಮಾರ, ಸೀತಮ್ಮ.ಎನ್,ಶಶಿಕಲಾ, ಸಯ್ಯದ್ ಯುನೂಸ್, ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಪಾಲಕರು ಇದ್ದರು.
ಇದನ್ನೂ ಓದಿ: ಮಕ್ಕಳಿಗೆ ಸರಿಯಾದ ಹಾಕಬೇಕಾಗಿರುವುದು ಶಿಕ್ಷಕರ ಕರ್ತವ್ಯ: ಕರಣಿಕ್
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…