ಮೈಸೂರು: ಹಳೇ ಮೈಸೂರಿನ ಹಿರಿಯ ಮುತ್ಸದ್ಧಿ ರಾಜಕಾರಣಿ ಅಡಗೂರು ಹೆಚ್. ವಿಶ್ವನಾಥ್ ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಚಚನೀಡುವಂತೆ ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಹಾಗೂ ವಿವಿಧ ಸಂಘಟನೆಗಳ ಮುಖಂಡರುಗಳು ಸೇರಿ ಮುಖ್ಯಮಂತ್ರಿಗಳಿಗೆ ಹಾಗೂ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಿಗೆ ಆಗ್ರಹಿಸಿ ಪತ್ರಚಳುವಳಿ ನಡೆಸಲಾಗುವುದೆಂದು ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯ ಅಧ್ಯಕ್ಷರಾದ ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ 11.30 ಕೈ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿಯು ಮೈಸೂರು ಮಹಾನಗರ ಪಾಲಿಕೆ ಎದುರು ಇರುವ ಅಂಚೆ ಪೆಟ್ಟಿಗೆಯ ಹತ್ತಿರ ಪತ್ರ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಜಾಕೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.