ಜನವಾದಿ ಮಹಿಳಾ ಸಂಘಟನೆ ತಾಲೂಕು ಸಮ್ಮೇಳನ

ಕಲಬುರಗಿ: ಅಖಿಲ ಭಾರತ ಜನವಾದಿ ಮಹಿಳಾ ಸಂಘದ ಮೂರನೇ ತಾಲ್ಲೂಕು ಸಮ್ಮೇಳನ ಗುರುವಾರ ಇಲ್ಲಿನ ಆಳಂದ ತಾಲೂಕು ಜಿಡಗಾದಲ್ಲಿ ನಡೆಯಿತು.

ಸಮ್ಮೇಳನ ಉದ್ಘಾಟಿಸಿದ ಡಾ ಪ್ರಭು ಖಾನಪುರೆ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಹಿಳೆಯರಿಗೆ ರಕ್ಷಣೆ ಕೊಡುವಲ್ಲಿ ವಿಫಲವಾಗಿವೆ.  ಮಹಿಳೆಯರು ತಮ್ಮ ರಕ್ಷಣೆ ಜತೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುವ ದೌರ್ಜನ್ಯಗಳ ವಿರುದ್ಧ ಹೋರಾಟ ನಡೆಸಬೇಕು.ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ಸಂಘಟಿತರಾಗಬೇಕು ಎಂದು ಹೇಳಿದರು.

ಇದನ್ನೂ ಓದಿ: ಆಪ್ ಗೆ ಸೇರ್ಪಡೆಗೊಂಡ ಸಯ್ಯದ್ ಖಾಜಿ

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಮೇಶ ಮಾಡ್ಯಾಳ ಕರ ಮಾತನಾಡಿ ಇಂದಿನ ದಿನದಲ್ಲಿ ಮಹಿಳೆಯರ ಮೇಲೆ ವರದಕ್ಷಿಣೆ ಮತ್ತಿತರೆ ವಿಷಯಕ್ಕೆ ಸಂಬಂಧಿಸಿದಂತೆ ಹೆಚ್ಚಾಗಿ ಮಹಿಳೆಯ ಮೇಲೆ ನಡೆಯುತ್ತಿವೆ. ಅಪ್ರಾಪ್ತ ವಯಸ್ಸಿನ ಯುವತಿಯರ ಮೇಲೆ ಶೇ. 84 ರಷ್ಟು ಅತ್ಯಾಚಾರಗಳು ನಡೆಯುತ್ತಿವೆ. ಆದರೆ ಅದರಲ್ಲಿ ಶೇ.16 ರಷ್ಟು ಮಾತ್ರ ಮಹಿಳೆಯರು ಠಾಣೆಯಲ್ಲಿ ದೂರು ದಾಖಲಿಸುತ್ತಾರೆ ಎಂದರು.ಸ್ಥಳೀಯ ಸಮಸ್ಯೆಗಳನ್ನಿಟ್ಟುಕೊಂಡು ಹೋರಾಟ ಮಾಡಬೇಕು.

ಮುಖ್ಯ ಅತಿಥಿ ಸ್ಥಾನ ವಹಿಸಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ. ನೀಲಾ, ಮಾತನಾಡಿ ಒಬ್ಬರಿಂದ ಸಾಧ್ಯವಾಗದ ಕೆಲಸ ಸಂಘಟನೆ ಇಂದ ಮಾತ್ರ ಸಾಧ್ಯ ಮತ್ತು ಯುವಕರು ಕೂಡ ತಮ್ಮ ಒಂದು ಸಂಘಟನೆ ಮಾಡಿಕೊಂಡು ಸಂಘಟನೆ ಮೂಲಕ ಕೆಲಸ ಮಾಡಿ ಮತ್ತು ‘ಪಡಿತರ ಅಂಗಡಿಗಳಲ್ಲಿ ನೀಡುವ ಎರಡು ಕೆ.ಜಿ ಅಕ್ಕಿ, ಮೂರು ಕೆ.ಜಿ ಜೋಳದಿಂದ ಬದುಕಲಾದೀತೆ? ಉಳಿದ ದಿನ ಉಪವಾಸದಿಂದ ಸಾಯಬೇಕೆ ಎಂದರು. ಮಹಿಳೆಯರು ಒಂದಾಗಿ ಮುಂದೆ ಬನ್ನಿ, ದಿನಕ್ಕೆ 600 ರೂಪಾಯಿ ವೇತನ ನೀಡಬೇಕು ತಕ್ಕ ಶ್ರಮಕ್ಕೆ ತಕ್ಕ ವೇತನ ನೀಡಬೇಕು. ಹಾಗೆ ಮಹಿಳೆಯರ ಮೇಲೆ ಸರಣಿ ಅತ್ಯಾಚಾರ ನಡೆಯುತ್ತಿದ್ದರೂ ಸರಕಾರ ಕಣ್ಣು ಮುಚ್ಚಿ ಕುಳಿತಿದೆ. ಲೈಂಗಿಕ ದೌರ್ಜನ್ಯಗಳನ್ನು ತಡೆಯುವಲ್ಲಿ ಸರಕಾರ ವಿಫಲವಾಗಿದೆ ಎಂದರು.

ಇದನ್ನೂ ಓದಿ: ಕಲಬುರಗಿ ಪೇಟೆ ಧಾರಣೆ

ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳಾಗಿ ಮಲ್ಲಮ್ಮ ಜಿಡಾಗ (ಅಧ್ಯಕ್ಷೆ), ಸುಗಂಧ ಮಾವಿನಕರ (ಕಾರ್ಯದರ್ಶಿ), ಶಶಿಕಲಾ ಪಾಟೀಲ್ (ಖಜಾಂಚಿ) ಹಾಗೂ ಸದಸ್ಯರು ಸೇರಿದಂತೆ 22 ಜನರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷತೆಯನ್ನು ಸುಮಂಗಲ ವಹಿಸಿದ್ದರು. ಸಂಘಟನೆ ಕಾರ್ಯದರ್ಶಿ ಸುಗಂಧ ನಿರೂಪಿಸಿದರು. ಕಲ್ಯಾಣಿ ವಂದಿಸಿದರು.

ಮುಖ್ಯ ಅತಿಥಿ : ಡಾ ಪ್ರಭು ಖಾನಾಪುರೆ, ಕೆ. ನಿಲಾ, ಡಾ. ರಮೇಶ ಮಾಡ್ಯಾಳಕರ್, ರಾಜಮತಿ ಸಿ ಐ ಟಿ ಯು ಮುಖಂಡರು.ಸುಮಂಗಲ ಆಳಂದ ತಾಲೂಕು ಅಧ್ಯಕ್ಷರು, ಆಳಂದ ತಾಲೂಕು ಉಪಾಧ್ಯಕ್ಷರು ಮಲ್ಲಮ್ಮ, ಕೆ ಪಿ ಆರ್ ಎಸ್ ಪಾಂಡುರಂಗ ಮಾವಿನಕರ,ಶಶಿಕಲಾ ಕಡಗಂಚಿ, ಜಿಡಗಾದ ಗ್ರಾಮಸ್ಥರು ಭಾಗವಹಿಸಿದ್ದರು.

ಇದನ್ನೂ ಓದಿ: ದಿ ಸಿದ್ದಣ್ಣ ರಾಜವಾಳ ಆದರ್ಶ ವ್ಯಕ್ತಿ ಯಾಗಿದ್ದರು: ಡಾ. ಅಜಯ್ ಸಿಂಗ್

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420