ಭಾಲ್ಕಿ: ಹಿರೇಮಠ ಸಂಸ್ಥಾನದಲ್ಲಿ ಡಾ.ಅಮರನಾಥ ಸೋಲಪುರೆ ಬರೆದಿರುವ ಶ್ರೀ ಬಸವ ವಿಜಯ ಗ್ರಂಥವನ್ನು ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಲೋಕಾರ್ಪಣೆ ಮಾಡಿದರು. ಡಾ.ಅಮರನಾಥ ಸೋಲಪೂರೆ ಅವರು ಲಿಂಗಾನುಭಾವಿಗಳು. ಬಸವಾದಿ ಶರಣರ ಇಷ್ಟಲಿಂಗ ಯೋಗವನ್ನು ಜನಮನದಲ್ಲಿ ಮುಟ್ಟಿಸುವ ಕಾರ್ಯ ಮಾಡುತ್ತಿದ್ದಾರೆ.
ಶರಣರ ವಚನಗಳನ್ನೇ ಆಧಾರವಾಗಿಟ್ಟುಕೊಂಡು ಇಷ್ಟಲಿಂಗದ ಯೋಗದ ಅನೇಕ ಕಾರ್ಯಕ್ರಮಗಳನ್ನು ಕರ್ನಾಟಕ ಅಲ್ಲದೆ ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ಮಾಡುತ್ತಿದ್ದಾರೆ. ಅವರು ಬಹುಭಾಷೆ ಬಲ್ಲವರಾಗಿದ್ದಾರೆ. ವಿಶೇಷವಾಗಿ ಇಂಗ್ಲೀಷ ಭಾಷೆಯಲ್ಲಿ ಅವರ ಹಿಡಿತವಿದೆ. ಇಲ್ಲಿಯವರೆಗೆ ಇಂಗ್ಲೀಷ, ಕನ್ನಡ ಮತ್ತು ಮರಾಠಿಯಲ್ಲಿ ಅನೇಕ ಕೃತಿಗಳನ್ನು ಬರೆದಿದ್ದಾರೆ.
ಇದೀಗ ಶ್ರೀ ಬಸವವಿಜಯ ಎಂಬ ವಿನೂತನ ಕೃತಿಯನ್ನು ಅವರ ಲಿಂಗಹಸ್ತದಿಂದ ಮೂಡಿಬಂದಿದೆ. ಈ ಗ್ರಂಥದಲ್ಲಿ ೮ ಅಧ್ಯಾಯಗಳು ಹಾಗೂ ೩೪ ಕಾಂಡಗಳು ಇವೆ. ವಚನಗಳ ಆಧಾರವಾಗಿಟ್ಟುಕೊಂಡೆ ವಿಶ್ವಗುರು ಬಸವಣ್ಣನವರ ಜೀವನ ಚರಿತ್ರೆಯ ಜೊತೆಗೆ ಲಿಂಗಾಯತ ಧರ್ಮ ತತ್ವಗಳ ಮೇಲೆ ಬೆಳೆಕು ಚಲ್ಲಿದ್ದಾರೆ. ಇದನ್ನು ನೋಡಿ ಸಂತೋಷವಾಗಿದೆ ಎಂದು ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು.
ಚಾಂಬಾಳದ ಪೂಜ್ಯ ಶ್ರೀ ರುದ್ರಮುನಿ ಶಿವಾಚಾರ್ಯರು ಹಾಗೂ ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ಲೇಖಕರಾದ ಡಾ.ಅಮರನಾಥ ಸೋಲಪೂರೆ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…