ಕಲಬುರಗಿ, ಮೇ. ೨೩- ಮಹಾನಗರ ಪಾಲಿಕೆಯ ವ್ಯಾಪ್ತಿಯ ವಾರ್ಡ್ ನಂ ೩೫ರ ಗಾಜೀಪುರ ಹಾಗೂ ಸುತ್ತಮುತ್ತಲಿನ ಬಡವಾಣೆಯ ನಾಗರಿಕರು ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಭಾರತಿ ಜನತಾ ಪಕ್ಷ(ಬಿಜೆಪಿ) ತೊರೆದು ಅನೇಕರು ಸಿದ್ದು ಪಾಟೀಲ (ತೇಗನೂರ) ಅವರ ಸಮ್ಮುಖದಲ್ಲಿ ಸಚೀನ್ ಕೋಗನೂರ ನೇತೃತ್ವದಲ್ಲಿ ಸೇರ್ಪಡೆಗೊಂಡರರು.
ಸೋಮವಾರ ಗಾಜೀಪುರದ ಅಂಬಾಭಾವನಿ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಿದ್ದು ಪಾಟೀಲ(ತೇಗನೂರ) ಅವರು ಮಾತನಾಡಿ ಅಧಿಕಾರದಲ್ಲಿ ಇರುವ ಪಕ್ಷ ಹಾಗೂ ವಿರೋಧ ಪಕ್ಷಗಳೆರಡು ಜನತೆಗೆ ಮೋಸ ಮಾಡುತ್ತೀವೆ. ಸಾರ್ವಜನಿಕರಿಗೆ ಬೇಕಾಗಿರುವ ಸ್ವಚ್ಛ ನೀರು, ನಿರಂತರ ವಿದ್ಯುತ್, ಉತ್ತಮ ಶಿಕ್ಷಣ, ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿವೆ. ಮುಂದಿ ದಿನಗಳಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ದೆಹಲಿ ಹಾಗೂ ಪಂಜಾಬ ಮಾದರಿಯಲ್ಲಿ ಪಾರದರ್ಶಕತೆಯ ಆಡಳಿತ ನೀಡಲು ಸಾರ್ವಜನಿಕರು ಸ್ವ ಇಚ್ಛೆಯಿಂದ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವದು ಸಕರಾತ್ಮ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಕಲಬುರಗಿ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಅನೇಕ ಹಳ್ಳಿಗಳಲ್ಲಿ ನಾಗರಿಕರು ಸ್ವ ಇಚ್ಛೆಯಿಂದ ಪಕ್ಷಕ್ಕೆ ಸೇರ್ಪಡೆಯಾಗಲು ಬಯಸಿದ್ದಾರೆ. ಅದಕ್ಕಾಗಿ ಕಾರ್ಯಕರ್ತರ ಪಡೆ ನಿರ್ಮಿಸಿ ಜನರಿಗೆ ಬೇಕಾಗಿರುವ ಅವಶ್ಯಕತೆಗೆ ಪಕ್ಷ ಸ್ಪಂಧಿಸಬೇಕು ಎಂದು ಕಾರ್ಯಕರ್ತರಿಗೆ ಸಿದ್ದು ಪಾಟೀಲ (ತೇಗನೂರ) ಕರೆ ನೀಡಿದರು.
ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖಂಡರಾದ ಅರವಿಂದ ಹಿರೇಮಠ, ಪ್ರತೀಕ್, ಸಾಗರ, ತೋಟೇಂದ್ರ, ಪ್ರಶಾಂತ ಕಿರಣ ರಾಠೋಡ, ಮೊಹಿಶಿನ್, ವಸಂತ, ಬಂಧು ಮತ್ತು ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…