1% ಕಮಿಷನ್‌ ಪಡೆದಿದಕ್ಕೆ ಮಂತ್ರಿ ತಲೆದಂಡ | ರಾಜ್ಯದಲ್ಲಿ 40% ಕಮಿಷನ್‌ಗೆ ಜೀವ ಹೋದರೂ ಬೆಲೆಯಿಲ್ಲ

ಕಲಬುರಗಿ: ಇತ್ತೀಚಿಗೆ ಪಂಜಾಬ ರಾಜ್ಯದಲ್ಲಿ ಭಗವಂತ ಮಾನ್ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿರುವ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರದ ವಿರುದ್ಧ ಕ್ರಮಗೈಂಡಿರುವ ಕ್ರಮ ನಿಜಕ್ಕೂ ಜನಪರ ಸರಕಾರ ಎನ್ನುವದು ಸಾಭಿತಾಗಿದೆ. ಆದರೆ ರಾಜ್ಯದಲ್ಲಿ ೪೦% ಕಮೀಷನ್ ಬೇಡಿಕೆ ಆರೋಪ ಮಾಡಿ ಗುತ್ತಿಗೆದಾರರೊಬ್ಬರು ಆತ್ಮಹತ್ಯ ಮಾಡಿಕೊಂಡರು ಇದುವರೆಗೂ ಯಾರನ್ನು ಬಂಧಿಸಿದ ರಾಜ್ಯದ ಪೊಲೀಸರು. ರಾಜ್ಯದಲ್ಲಿ ಜೀವ ಹೋದರೂ ಬೆಲೆಯಿಲ್ಲದಂತಾಗಿದೆಯೇ ಎಂದು ಆಮ್ ಆದ್ಮಿ ಪಕ್ಷದ ಕಲಬುರಗಿ ದಕ್ಷಣಿ ಮತಕ್ಷೇತ್ರದ  ಉಸ್ತುವಾರಿ ಸಿದ್ದು ಪಾಟೀಲ(ತೆಗನೂರ) ಆರೋಪಿಸುತ್ತಾ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ೨೦೧೫ರಲ್ಲಿ ಅಲ್ಲಿನ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಮಂತ್ರಿಮಂಡಲ್ಲಿರುವ ಸಚಿವರೊಬ್ಬರು ಲಂಚ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದ ತಕ್ಷಣ ಅವರ ವಿರುದ್ಧ ಸಿಬಿಐ ತನಿಖೆ ಆದೇಶಿಸಿದಲ್ಲದೇ ಅವರನ್ನು ಸಚಿವ ಸ್ಥಾನದಿಂದ ತೆಗೆದು  ಹಾಕಿದ್ದರು. ಆಮ್ ಆದ್ಮಿ ಪಕ್ಷದಲ್ಲಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಹೇಳಿಕೆ ನೀಡುವ ಅರವಿಂದ ಕೇಜ್ರಿವಾಲ್ ಅವರು ನುಡಿದಂತೆ ನಡೆದಿದ್ದಾರೆ.

ಪಂಜಾಬ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ನೇತೃತ್ವದ ಸರಕಾರದಲ್ಲಿ ಅಲ್ಲಿನ ಆರೋಗ್ಯ ಸಚಿವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಕೆಲಸದಲ್ಲಿ ಕೇವಲ ೧% ಕಮಿಷನ್ ಬೇಡಿಕೆ ಇಟ್ಟಿದ್ದರೂ ಎಂಬ ಮಾಹಿತಿ ಪಡದು ಕೊಂಡ ಅಲ್ಲಿನ ಮುಖ್ಯ ಮಂತ್ರಿ ಭಗವಂತ ಮಾನ್ ಅವರು ಸಚಿವರನ್ನು ಕರೆಸಿಕೊಂಡು ಅವರೊಂದಿಗೆ ಚರ್ಚಿಸಿ ಕೂಡಲೆ ಅವರನ್ನು ಎಸಿಬಿ ಪೊಲೀಸರಿಗೆ ಬಂಧಿಸಲು ಸೂಚಿಸಿದ್ದು ನುಡಿದಂತೆ ನಡೆಯುವ ಪಕ್ಷ ಆಮ್ ಆದ್ಮಿ ಪಕ್ಷವಾಗಿದೆ.

ರಾಜ್ಯದಲ್ಲಿ ಹಿಂದಿ ಸಚಿವರೊಬ್ಬರು ಕಾಮಗಾರಿ ಬಿಲ್‌ಗಳು ಪಾಸ್ ಮಾಡಬೇಕಾದರೆ ಮದ್ಯವರ್ತಿಗಳ ಮುಖಾಂತರ ೪೦% ಕಮಿಷನ್ ನೀಡಲೇ ಬೇಕು ಎಂಬ ಬೇಡಿಕೆ ಇಟ್ಟಿದ್ದರು ಎಂದು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದರರು ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ಹಾಗೂ ವಿಡಿಯೋದಲ್ಲಿ ಹೇಳಿಕೆ ನೀಡಿದ್ದರು.

ಒಬ್ಬ ಆರೋಪಿಯನ್ನು ಬಂಧಿಸಲು ಇದಕ್ಕಿಂತ ಸಾಕ್ಷಿ ಬೇಕೆ ಎಂದು ಮಾತುಗಳು ರಾಜ್ಯದಲ್ಲಿ ಕೇಳಿಬಂದಿತ್ತು. ಇಲ್ಲಿ ಜನಸಾಮಾನ್ಯರಿಗೆ ಒಂದು ನ್ಯಾಯ ಮತ್ತು ಅಧಿಕಾರದಲ್ಲಿರುವವರಿಗೆ ಒಂದು ನ್ಯಾಯವೇ? ಮಾತುಗಳು ಇಂದು ಜನಸಾಮಾನ್ಯರು ಆಡಿಕೊಳ್ಳುತ್ತಿದ್ದಾರೆ ಎಂದು ತಿಳಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420