ರೈತ ನಾಯಕ ರಾಕೇಶ್ ಟಿಕಾಯತ್‌ಮೇಲೆ ಆರೆಸ್ಸೆಸ್ ಹಲ್ಲೆಕೋರರ ದಾಳಿ: ಶಿವಲಿಂಗಪ್ಪ ಕಿನ್ನೂರ್ ಖಂಡನೆ

0
32

ಕಲಬುರಗಿ: ಬೆಂಗಳೂರಿನಲ್ಲಿ ನಡೆಯುತ್ತಿದ್ದ ರೈತ ಸಂಘದ ಆತ್ಮಾವಲೋಕನ ಸಭೆಗಾಗಿ ಆಗಮಿಸಿದ್ದ ರೈತಾಂದೋಲನದ ಪ್ರಮುಖ ನಾಯಕರಲ್ಲೊಬ್ಬರಾದ ರಾಕೇಶ್ ಟಿಕಾಯತ್ ಮತ್ತು ಜೊತೆಗಿದ್ದ ರೈತ ಹೋರಾಟಗಾರರ ಮೇಲೆ ಆರೆಸ್ಸೆಸ್ ಹಲ್ಲೆಕೋರರು ಮಸಿ ಎರಚಿ ದಾಳಿ ನಡೆಸಿದ್ದನ್ನು ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಲಿಂಗಪ್ಪ ಕಿನ್ನೂರ್ ತೀವ್ರವಾಗಿ ಖಂಡಿಸಿದರು.

ದಾಳಿಕೋರರನ್ನು ಕೂಡಲೇ ಬಂಧಿಸಿ, ಈ ಗಂಭೀರ ಅಪರಾಧಕ್ಕೆ ಕಠಿಣವಾದ ಪ್ರಕರಣವನ್ನು ಅವರ ಮೇಲೆ‌ ದಾಖಲಿಸಬೇಕು. ಪ್ರಾಮಾಣಿಕವಾಗಿ, ನಿಷ್ಪಕ್ಷಪಾತವಾಗಿ, ವೇಗವಾಗಿ ತನಿಖೆ‌ ನಡೆದು ಅಪರಾಧಿಗಳಿಗೆ ಬೇಗ ಶಿಕ್ಷೆಯಾಗಬೇಕು.

Contact Your\'s Advertisement; 9902492681

ಪ್ರಮುಖ ನಾಯಕರಿಗೆ ಸೂಕ್ತ ಭದ್ರತೆ ನೀಡದೆ ಕರ್ತವ್ಯ ಲೋಪ ಎಸಗಿರುವ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಮೇಲೆ ಕೂಡಲೇ ಸರ್ಕಾರ‌ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಆಗ್ರಹಿಸುತ್ತದೆ.

ಇತ್ತೀಚಿನ ದಿನಗಳಲ್ಲಿ ಒಂದಾದ ಮೇಲೊಂದರಂತೆ ಭುಗಿಲೇಳುತ್ತಿರುವ ಅಶಾಂತಿಯ ಘಟನೆಗಳನ್ನು ಗಮನಿಸಿದರೆ, ಕರ್ನಾಟಕದ ಬಿಜೆಪಿ ಸರ್ಕಾರ ಪ್ರಜಾತಾಂತ್ರಿಕ ರೀತಿಯಲ್ಲಿ ಆಳ್ವಿಕೆ ನಡೆಸುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರದ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಜನತೆಗೆ ಶಾಂತಿ-ಸುವ್ಯವಸ್ಥೆ ರಕ್ಷಣೆಯ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here