ಕಲಬುರಗಿ: ಬೆಂಗಳೂರಿನಲ್ಲಿ ನಡೆಯುತ್ತಿದ್ದ ರೈತ ಸಂಘದ ಆತ್ಮಾವಲೋಕನ ಸಭೆಗಾಗಿ ಆಗಮಿಸಿದ್ದ ರೈತಾಂದೋಲನದ ಪ್ರಮುಖ ನಾಯಕರಲ್ಲೊಬ್ಬರಾದ ರಾಕೇಶ್ ಟಿಕಾಯತ್ ಮತ್ತು ಜೊತೆಗಿದ್ದ ರೈತ ಹೋರಾಟಗಾರರ ಮೇಲೆ ಆರೆಸ್ಸೆಸ್ ಹಲ್ಲೆಕೋರರು ಮಸಿ ಎರಚಿ ದಾಳಿ ನಡೆಸಿದ್ದನ್ನು ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಲಿಂಗಪ್ಪ ಕಿನ್ನೂರ್ ತೀವ್ರವಾಗಿ ಖಂಡಿಸಿದರು.
ದಾಳಿಕೋರರನ್ನು ಕೂಡಲೇ ಬಂಧಿಸಿ, ಈ ಗಂಭೀರ ಅಪರಾಧಕ್ಕೆ ಕಠಿಣವಾದ ಪ್ರಕರಣವನ್ನು ಅವರ ಮೇಲೆ ದಾಖಲಿಸಬೇಕು. ಪ್ರಾಮಾಣಿಕವಾಗಿ, ನಿಷ್ಪಕ್ಷಪಾತವಾಗಿ, ವೇಗವಾಗಿ ತನಿಖೆ ನಡೆದು ಅಪರಾಧಿಗಳಿಗೆ ಬೇಗ ಶಿಕ್ಷೆಯಾಗಬೇಕು.
ಪ್ರಮುಖ ನಾಯಕರಿಗೆ ಸೂಕ್ತ ಭದ್ರತೆ ನೀಡದೆ ಕರ್ತವ್ಯ ಲೋಪ ಎಸಗಿರುವ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಮೇಲೆ ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಆಗ್ರಹಿಸುತ್ತದೆ.
ಇತ್ತೀಚಿನ ದಿನಗಳಲ್ಲಿ ಒಂದಾದ ಮೇಲೊಂದರಂತೆ ಭುಗಿಲೇಳುತ್ತಿರುವ ಅಶಾಂತಿಯ ಘಟನೆಗಳನ್ನು ಗಮನಿಸಿದರೆ, ಕರ್ನಾಟಕದ ಬಿಜೆಪಿ ಸರ್ಕಾರ ಪ್ರಜಾತಾಂತ್ರಿಕ ರೀತಿಯಲ್ಲಿ ಆಳ್ವಿಕೆ ನಡೆಸುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರದ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಜನತೆಗೆ ಶಾಂತಿ-ಸುವ್ಯವಸ್ಥೆ ರಕ್ಷಣೆಯ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…