ಸುಲೇಪೇಟದಲ್ಲಿ ಜೆ.ಡಿ.ಎಸ್ ಕಾರ್ಯಕರ್ತರ ಸಭೆ ನಾಳೆ

0
92

ಚಿಂಚೋಳಿ : ಸೇಡಂ ಮತಕ್ಷೇತ್ರದ ಸುಲೇಪೇಟ ಗ್ರಾಮದ ಮಹಾಂತೇಶ್ವರ ಮಠದಲ್ಲಿ ದಿನಾಂಕ ಜೂನ್ 1 ರಂದು ಮಧ್ಯಾಹ್ನ 1-30 ಕ್ಕೆ ಸುಲೇಪೇಟ ಜಿ.ಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮದ ಕಾರ್ಯಕರ್ತರ ಸಭೆ ಆಯೋಜನೆ ಮಾಡಲಾಗಿದೆ ಎಂದು ಜೆ.ಡಿ.ಎಸ್ ಪಕ್ಷದ ತಾಲೂಕು ಅಧ್ಯಕ್ಷ ಏಕ್ಬಾಲ್ ಖಾನ್ ತಿಳಿಸಿದ್ದಾರೆ.

ಈ ಸಭೆಯಲ್ಲಿ ಸೇಡಂ ಮತಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡ ಬಾಲರಾಜ್ ಗುತ್ತೇದಾರ , ಹಾಗೂ ಚಿಂಚೋಳಿ ಮತಕ್ಷೇತ್ರದ ಜೆಡಿಎಸ್ ಪಕ್ಷದ ಮುಖಂಡ ಸಂಜೀವನ್ ಯಾಕಪೂರ್ ಪಾಲ್ಗೊಳಲಿದ್ದು ಸಭೆಯಲ್ಲಿ ಸುಲೇಪೇಟ ಜಿ.ಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಲ್ಲಿ ಜೆ.ಡಿ.ಎಸ್ ಪಕ್ಷದ ಸಂಘಟನೆ ಕುರಿತು ಸಭೆ ನಡೆಯಲಿದ್ದು ಆದಕಾರಣ ಸುಲೇಪೇಟ ಜಿ.ಪಂ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮದ ಜೆ.ಡಿ.ಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here