ಕಲಬುರಗಿ: ಶಾಲಾ ಪಠ್ಯಪುಸ್ತಕ ಪರಿಷ್ಕರಣ ಸಮಿತಿ ನೆಪದಲ್ಲಿ ಇತಿಹಾಸ ಪುರುಷರಾದ ಬಸವಣ್ಣ, ಪೆರಿಯಾರ್, ನಾರಾಯಣಗುರು ಮುಂತಾದವರ ಇತಿಹಾಸವನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದ್ದು, ಸರ್ಕಾರದ ಈ ನಡೆಯನ್ನು ವಿರೋಧಿಸಿ ಜೂನ್ 4ರಂದು ಬೆಳಗ್ಗೆ 11 ಗಂಟೆಗೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ ಮತ್ತು ಆರ್.ಜಿ. ಶೆಟಗಾರ ತಿಳಿಸಿದರು.
9ನೇ ತರಗತಿಯ ಸಮಾಜ ವಿಜ್ಞಾನ ಪರಿಷ್ಕೃತ ಪಠ್ಯ ಪುಸ್ತಕದಲ್ಲಿ ಬಸವಣ್ಣನವರು ಉಪನಯನ ಮಾಡಿಕೊಂಡು ಕೂಡಲಸಂಗಮಕ್ಕೆ ತೆರಳಿದರು, ಗುರುಗಳಿಂದ ದೀಕ್ಷೆ ಪಡೆದರು ಮತ್ತು ವೀರಶೈವ ಮತ ಅಭಿವೃದ್ಧಿಪಡಿಸಿದರು ಎಂಬಿತ್ಯಾದಿ ಅಕ್ಷೇಪಾರ್ಹ ಸಂಗತಿಗಳಿದ್ದು, ಕೂಡಲೇ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿದರು.
ವೈದಿಕ ಧರ್ಮ ಪುನರ್ ಸ್ಥಾಪಿಸಲು ಹೊರಟಿರುವ ಸರ್ಕಾರ ಬಸವ ವಿರೋಧಿ ಹಾಗೂ ಲಿಂಗಾಯತ ವಿರೋಧಿಯಾಗಿದೆ. ಲಿಂಗಾಯತ ಸ್ವಾಮಿಗಳು ಮತ್ತು ಲಿಂಗಾಯತ ರಾಜಕಾರಣಿಗಳು ಇದನ್ನು ಖಂಡಿಸಬೇಕು. ಆಗಿರುವ ತಪ್ಪು ಹಾಗೂ ಲೋಪ ಸರಿಪಡಿಸದಿದ್ದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ರವೀಂದ್ರ ಶಾಬಾದಿ ತಿಳಿಸಿದರು.
ಸಂಗಮೇಶ, ಬಸಣ್ಣ ಗುಣಾರಿ, ಶಿವಕುಮಾರ ಬಿದರಿ, ರವಿ ಸಜ್ಜನ್ ಇದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…