ಕಲಬುರಗಿ: ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಸಮಿತಿ ಶಿಫಾರಸ್ಸು ತಿರಸ್ಕರಿಸಿ ಸಮಿತಿಯನ್ನು ಹಿಂಪಡೆದು ರದ್ದುಗೊಳಿಸಬೇಕು ಮತ್ತು ಈ ಹಿಂದಿನ ಪರಿಷ್ಕೃತ ಪಠ್ಯ ಪುಸ್ತಕಗಳನ್ನೇ ಮುಂದುವರಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಗಳ ಜಂಟಿ ವೇದಿಕೆ- ಕರ್ನಾಟಕ ಮುಖಂಡ ಝಿಶಾನ್ ಆಗ್ರಹಿಸಿದರು.
2017-18ರಲ್ಲಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ಪರಿಷ್ಕರಣೆ ಮಾಡಲಾಗಿದ್ದ ಕೆಲವು ತರಗತಿಗಳ ಪಠ್ಯ ಪುಸ್ತಕಗಳನ್ನು ಪುನರ್ ಪರಿಶೀಲನೆ ಮಾಡಿದ್ದು ಅನೇಕ ಪಾಠಗಳನ್ನು ಬದಲಾವಣೆ ಮಾಡಿ ಕೆಲವು ಪ್ರಮುಖ ಪಾಠಗಳನ್ನು ಕೈ ಬಿಟ್ಟು ಹೊಸ ಪಾಠಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿದರು.
ನಾಡಿನ ಹೆಮ್ಮೆಯ ಲೇಖಕರಾದ ಸಾರಾ ಅಬೂಬಕರ್, ಪಿ. ಲಂಕೇಶ, ಅರವಿಂದ ಮಾಲಗತ್ತಿ, ಬಿ.ಟಿ. ಲಲಿತಾನಾಯಕ ಹಾಗೂ ಇನ್ನಿತರ ಮೌಲಿಕ ಪಾಠಗಳನ್ನು ಪಠ್ಯದಿಂದ ತೆಗೆದು ಹಾಕಲಾಗಿದೆ. ಸೇರ್ಪಡೆಯಾದ ಬಹುತೇಕ ಪಾಠಗಳು ಒಂದು ಜಾತಿಯವರ ಅಥವಾ ಒಂದು ಸಿದ್ಧಾಂತವನ್ನು ಪ್ರತಿಪಾದಿಸಿದ ವ್ಯಕ್ತಿಗಳಾಗಿರುವುದರಿಂದ ಮೇಲ್ನೋಟಕ್ಕೆ ಪಠ್ಯ ಪುಸ್ತಕಗಳಲ್ಲಿ ಕೋಮುವಾದಿಕರಣ ಮತ್ತು ಕೇಸರಿಕರಣದ ಹುನ್ನಾರ ಅಡಗಿದೆ ಎಂದು ಆಪಾದಿಸಿದರು.
ಸರ್ಕಾರದ ಈ ನಡೆ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಬಹುತ್ವ ವಿರೋಧಿಯಾಗಿದ್ದು, ಇದು ನಾಡಿಗೆ ಬಗೆದ ದ್ರೋಹವಾಗಿದೆ ಎಂದು ತಿಳಿಸಿದರು.
ಯಾವುದೇ ಶೈಕ್ಷಣಿಕ ಹಿನ್ನೆಲೆ ಇಲ್ಲದ, ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿರುವ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದು ತಪ್ಪು. ಧ್ವಜವನ್ನು ತನ್ನ ಲಂಗೋಟಿಗೆ ಹೋಲಿಸಿಕೊಂಡು, ನಾಡಗೀತೆ ತಿರುಚಿರುವವರಿಗೆ ಅಧ್ಯಕ್ಷ ಸ್ಥಾನ ನೀಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಫ್ರೇಮ್ ವರ್ಕ್ ಅಡಿಯಲ್ಲಿ ಪಠ್ಯ ಪುಸ್ತಕದ ವಸ್ತು ಮೊದಲು ಸಾರ್ವಜನಿಕವಾಗಿ ಚರ್ಚೆಯಾಗಬೇಕು. ಆನಂತರ ಪಠ್ಯ ಪುಸ್ತಕ ರಚನೆಯಾಗಬೇಕು. ಇದ್ಯಾವುದನ್ನು ಮಾಡದೆ ಏಕಾಏಕಿ, ಅತ್ಯಂತ ತರಾತುರಿಯಲ್ಲಿ ಅನುಷ್ಠಾನಗೊಳಿಸಲು ಹೊರಟಿರುವುದು ಏನನ್ನು ತೋರಿಸಿಕೊಡುತ್ತದೆ ಎಂದರು.
ಜನಪರ ಮತ್ತು ಸಂವಿಧಾನಪರವಾಗಿ ಕಾರ್ಯನಿರ್ವಹಿಸಬೇಕಾದ ಶಿಕ್ಷಣ ಸಚಿವರು ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದನ್ನು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಡಾ. ಅನಿಲ ಟೆಂಗಳಿ, ಬಾಬು ಬೀಳಗಿ, ರಾಜೇಂದ್ರ ರಾಜವಾಳ, ಅಭಿಷೇಕ ಚಕ್ರವರ್ತಿ, ಸುನಿಲ್ ಮಾನ್ಪಡೆ ಇತರರಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…